LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಅನಧಿಕೃತ  ಹಾಗೂ ಶಿಥಿಲಾವಸ್ಥೆ ಕಟ್ಟಡ ತೆರವು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ರವರು ಆದೇಶಿಸಿರುತ್ತಾರೆ. ಅದರಂತೆ ಅಧಿಕಾರಿಗಳು ಸರ್ವೇ ನಡೆಸಿ ತೆರವು ಕಾರ್ಯಾಚರಣೆ ನಡೆಸಲಿದ್ದಾರೆ.

ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆ:

ಮಹದೇವಪುರ ವಲಯ ಹೊರಮಾವು ವ್ಯಾಪ್ತಿಯ ನಂಜಪ್ಪ ಗಾರ್ಡನ್ 4ನೇ ಅಡ್ಡ ರಸ್ತೆಯಲ್ಲಿ ಬರುವ ಸರ್ವೇ ಸಂಖ್ಯೆ 54/1 ರಲ್ಲಿ ಪುಟ್ಟಪ್ಪ ಎಂಬ ಮಾಲೀಕರು 10 X 25 ರಷ್ಟು ಅಡಿಯಲ್ಲಿ ಕಟ್ಟಡ ನಿರ್ಮಾಣ ಹಂತದಲ್ಲಿರುವ ನೆಲಮಡಿ + 5 ಅಂತಸ್ತಿನ ಕಟ್ಟಡವು ಬಿರುಕು ಬಿಟ್ಟಿದ್ದು, ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರ ಆದೇಶದ ಮೇರೆಗೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡವನ್ನು ಗುರುತಿಸಿ, ವಲಯ ಆಯುಕ್ತರಾದ ರಮೇಶ್ ಹಾಗೂ ವಲಯ ಜಂಟಿ ಆಯುಕ್ತರಾದ ಡಾ. ಕೆ. ದಾಕ್ಷಾಯಿಣಿ ರವರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

ಶಿಥಿಲ ಕಟ್ಟಡ ತೆರವು ಕಾರ್ಯಾಚರಣೆ:

ಹೆಚ್.ಎ.ಎಲ್ ವಾರ್ಡ್ ಇಸ್ಲಾಂಪುರದಲ್ಲಿ ಶ್ರೀರಾಂ ಎಂಬ ಮಾಲೀಕರ ನೆಲಮಹಡಿ + ಮೊದಲಹಡಿಯು ಹಳೆಯ ಕಟ್ಟಡವಾಗಿದ್ದು, ಶಿಥಿಲಾವಸ್ಥೆಯಲ್ಲಿರುವ ಕಾರಣ ಮನೆಯಲ್ಲಿದ್ದ ಸಾಮಗ್ರಿಗಳನ್ನೆಲ್ಲಾ ತೆಗೆದು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂ