LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 5605 ಜನರಿಗೆ ಉದ್ಯೋಗಾವಕಾಶ: ಸಿಎಂ ಸ್ಪಷ್ಟನೆ

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 9823.31 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5605 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.

ಇಂದಿನ ಸಭೆಯಲ್ಲಿ ಮೂರು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 467 ಉದ್ಯೋಗ , ಮೆ. ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಷರಿಂಗ್ ಪ್ರೈ.ಲಿ ಸಂಸ್ಥೆ ಯ 3425.60 ಕೋಟಿ ರೂ. ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ: ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರೂ. ಹೂಡಿಕೆಯಿಂದ 3500 ಉದ್ಯೋಗ ಸೃಷ್ಠಿಯಾಗುತ್ತಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನ