ಧಾರವಾಡ : ಧಾರವಾಡ ಕೃಷಿ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ DBT-Builder ಯೋಜನೆಯಡಿ ರಿಸರ್ಚ್ ಅಸೋಸಿಯೇಟ್ (Research Associate) ತಾತ್ಕಾಲಿಕ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳ ಎರಡು ಪ್ರತಿಗಳೊಂದಿಗೆ ಜೂನ್ 4, 2026 ರಂದು ಬೆಳಿಗ್ಗೆ 11 ಗಂಟೆಗೆ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಅವರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ತಾತ್ಕಾಲಿಕ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಸಂದರ್ಶನ ಸಮಯದಲ್ಲಿ ತಿಳಿಸಲಾಗುವುದು.
ಸದರಿ ನೇಮಕಾತಿಯು ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಮಯದಲ್ಲಿ ಕಾರಣ ತಿಳಿಸದೇ ಕೆಲಸದಿಂದ ತೆಗೆಯಬಹುದು. ಇದು ಕೃಷಿ ವಿಶ್ವವಿದ್ಯಾಲಯದ ಯಾವುದೇ ಖಾಯಂ ನೇಮಕಾತಿ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳಕ್ಕೆ ಮಕ್ಕಳು ರಚಿಸಿದ ಪ್ರಕಟಣೆಗೊಂಡ ಪುಸ್ತಕಗಳ ಆಹ್ವಾನ
ಧಾರವಾಡ : ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಕೇಂದ್ರ ಕಛೇರಿಯಿಂದ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಪ್ರಯುಕ್ತ ಮಕ್ಕಳು ರಚಿಸಿದ ಪ್ರಕಟಣೆಗೊಂಡ ಪುಸ್ತಕಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಮಕ್ಕಳು ಅಕಾಡೆಮಿ ಕೇಂದ್ರ ಕಛೇರಿಗೆ ಸ್ವವಿವರಗಳನ್ನೊಳಗೊಂಡ ಪುಸ್ತಕವನ್ನು ಜೂನ್ 10, 2026 ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇ ಔಟ್ ಹಿಂಭಾಗ ಕೆ.ಎಚ್.ಬಿ ಕಾಲೋನಿಲಕಮನಹಳ್ಳಿ ಧಾರವಾಡ ಕೇಂದ್ರ ಕಚೇರಿ ವಿಳಾಸಕ್ಕೆ ಸಲ್ಲಿಸಬೇಕೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.