LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಣಪುರಂ ಫೈನಾನ್ಸ್ ಸೇವಾ ನ್ಯೂನ್ಯತೆ: ಪರಿಹಾರ ನೀಡಲು ಆಯೋಗ ಆದೇಶ





ಶಿವಮೊಗ್ಗ,ಜೂ.18: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೌರಾಪುರ ಅಜ್ಜಂಪುರದ ತಾಲಿಬ್ ಪಾಷ ಬಿನ್ ಅನ್ಸರ್ ಪಾಷ ಇವರು ಮಣಪುರಂ ಫೈನಾನ್ಸ್ ಲಿಮಿಟೆಡ್ ಶಿವಮೊಗ್ಗ, ಮುಜೀರ್‌ಪಾಷ, ಕೇರಾಫ್ ವಿನಸ್ ಆಟೋಮೊಬೈಲ್ಸ್ ಹಾಸನ ಮತ್ತು ರೀಜನಲ್ ಟ್ರಾನ್ಸ್ಪೋರ್ಟ್ ಅಥಾರಿಟಿ ಎಆರ್‌ಟಿಓ ತರೀಕೆರೆ ಇವರ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ದೂರುದಾರರು ಲಾರಿ ಸಂಖ್ಯೆ: ಕೆ.ಎ.52-ಬಿ-4032ರ ಮಾಲೀಕರಾಗಿದ್ದು, 1 ನೇ ಎದುರುದಾರ ಹಣಕಾಸು ಸಂಸ್ಥೆಯಿAದ ರೂ.8,30,000/- ಗಳ ಸಾಲವನ್ನು(ಲೋನ್ ಕಂ ಹೈಪೋಥಿಕೇಶನ್)ಪಡೆದಿದ್ದು, 52 ಇಎಂಐ ಕಂತುಗಳ ಮೂಲಕ ಸಾಲವನ್ನು ತೀರಿಸಲು ಒಪ್ಪಂದವಾಗಿರುತ್ತದೆ. ಮತ್ತು ದೂರುದಾರರು ಸಾಲವನ್ನು ಪಡೆಯುವಾಗ ಆರು ಬ್ಲಾö್ಯಂಕ್ ಚೆಕ್‌ಗಳನ್ನು ಸಹ ನೀಡಿರುತ್ತಾರೆ. ತದನಂತರ ಲಾರಿಯು ಅಪಘಾತವಾಗಿದ್ದು, ಈ ಲಾರಿಯನ್ನು ಪೊಲೀಸ್‌ನವರು ವಶಕ್ಕೆ ಪಡೆದಿರುತ್ತಾರೆ. ದಿನಾಂಕ:20/02/2024 ರಂದು ಪೊಲೀಸ್‌ನವರಿಂದ ಲಾರಿಯನ್ನು ಬಿಡಿಸಿಕೊಂಡು ರಿಪೇರಿಗಾಗಿ ಬಿಟ್ಟಿದ್ದಾಗ ಎದುರುದಾರರು ಲಾರಿಯನ್ನು ತನ್ನ ಏಜೆಂಟರ ಮೂಲಕ ವಶಕ್ಕೆ ಪಡೆದಿರುತ್ತಾರೆ. ಆಗ ದೂರುದಾರರು ಎಆರ್‌ಟಿಓ ತರಿಕೇರೆ ರವರಿಗೆ ಪತ್ರವನ್ನು ಬರೆದು ಲಾರಿಯನ್ನು ಬೇರೆ ಯಾರ ಹೆಸರಿಗೂ ವರ್ಗಾಯಿಸಬಾರೆಂದು ತಿಳಿಸಿರುತ್ತಾರೆ.

1 ನೇ ಎದುರುದಾರರು ಲಾರಿಯನ್ನು ಸೀಜ್ ಮಾಡುವ ಮುಂಚಿತವಾಗಿ ಎದುರುದಾರರಿಗೆ ನೋಟಿಸನ್ನಾಗಲಿ ಅಥವಾ ನ್ಯಾಯಾಲಯದ ಆದೇಶವನ್ನಾಗಲಿ ತರದೇ ಲಾರಿಯನ್ನು ಸೀಜ್ ಮಾಡಿರುವುದು ಲೋನ್ ಕಂ ಹೈಪೋಥಿಕೇಶನ್ ಅಗ್ರಿಮೆಂಟ್‌ಗೆ ವಿರುದ್ದವಾಗಿದ್ದು, ಎದುರುದಾರರ ನಡೆಯಿಂದ ತಮಗೆ ಬಹಳ ಆರ್ಥಿಕ ನಷ್ಟ ಉಂಟಾಗಿರುವುದಾಗಿ ಮತ್ತು ತಾವು ರೂ.1,87,000/-ಗಳ ಸಾಲ ಕಟ್ಟಿದ್ದರು ಸಹ ಅಗ್ರಿಮೆಂಟ್ ವಿರುದ್ದವಾಗಿ ಲಾರಿಯನ್ನು ಸೀಜ್ ಮಾಡಿ 2 ನೇ ಎದುರುದಾರರಿಗೆ ಬಾಡಿಗೆ ರೂಪದಲ್ಲಿ ಲಾರಿಯನ್ನು ನೀಡಿರುವುದರಿಂದ ತಮಗೆ ಪ್ರತಿ ದಿನ ರೂ. 1,500/- ನಷ್ಟವಾಗುತ್ತಿರುವುದಾಗಿ ಮತ್ತು ಎದುರುದಾರರ ಈ ನಡೆಯನ್ನು ಸೇವಾ ನ್ಯೂನ್ಯತೆ ಎಂದು ದೂರನ್ನು ಸಲ್ಲಿಸಿರುತ್ತಾರೆ.

ಆಯೋಗವು ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ ಉಭಯ ಪಕ್ಷದವರ ವಾದ-ವಿವಾದಗಳನ್ನು ಆಲಿಸಿ 1 ನೇ ಎದುರುದಾರರು ದೂರುದಾರರಿಗೆ ಕಾನೂನು ರೀತ್ಯಾ ನೋಟಿಸ್ ಅನ್ನು ನೀಡದೆ ಲಾರಿಯನ್ನು ವಶಪಡಿಸಿಕೊಂಡು ಮಾರಿರುವುದರಿಂದ ಎದುರುದಾರರು ಸೇವಾ ನ್ಯೂನ್ಯತೆಯನ್ನು ಎಸಗಿರುವುದಾಗಿ ಪರಿಗಣಿಸಿ ದೂರನ್ನು ಭಾಗಶಃ ಪುರಸ್ಕರಿಸಿ ಈ ಆದೇಶವಾದ ದಿನಾಂಕದಿ0ದ 45 ದಿನಗಳೊಳಗಾಗಿ ದೂರುದಾರರ ವಶಕ್ಕೆ ಲಾರಿಯನ್ನು ನೀಡತಕ್ಕದ್ದು, ತಪ್ಪಿದಲ್ಲಿ ಈ ಆದೇಶವಾದ ದಿನಾಂದಿAದ ಪ್ರತಿದಿನ ರೂ.1000/-ಗಳನ್ನು ದೂರುದಾರರ ವಶಕ್ಕೆ ಲಾರಿಯನ್ನು ನೀಡುವವರೆಗೂ ಪಾವತಿಸಬೇಕೆಂದು ಹಾಗೂ 1 ನೇ ಎದುರುದಾರರು ರೂ.20,000/- ಗಳನ್ನು ಮಾನಸಿಕ ವೇದನೆಗೆ ಹಾಗೂ ದೂರಿನ ಖರ್ಚು-ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗೆ ಪಾವತಿಸಬೇಕು. ತಪ್ಪಿದಲ್ಲಿ ಈ ಮೊತ್ತಕ್ಕೆ ಶೇ.12 ರಂತೆ ಬಡ್ಡಿಯನ್ನ ಸೇರಿಸಿ ಈ ಆದೇಶವಾದ ದಿನದಿಂದ ಪೂರಾ ಹಣ ಪಾವತಿಸುವವರೆಗೂ ಪಾವತಿಸಲು ಹಾಗೂ 2 ಮತ್ತು 3 ನೇ ಎದುರುದಾರರ ವಿರುದ್ಧ ದೂರನ್ನು ವಜಾ ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ದಿನಾಂಕ:5/6/20205 ರಂದು ಆದೇಶಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು