LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ಲಾಟ್ ಖರೀದಿಸಲು ಕೊಟ್ಟ ಹಣವನ್ನು ಮರಳಿ ಗ್ರಾಹಕನಿಗೆ ಕೊಡಲು ಪ್ರುತ್ವಿ ಬಿಲ್ಡರ್ಸ್ ಮತ್ತು ಡೆವಲಪರ್ಸ್‍ಗೆ ಆಯೋಗದ ಆದೇಶ



ಧಾರವಾಡ  ಜು.2: ಬೆಂಗಳೂರಿನ ಯಳಚೆನಹಳ್ಳಿಯ ನಿವಾಸಿ ಪರಶುರಾಮ ಬಿ ಹಾಗೂ ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ಸಂದ್ಯಾ ಮೇತ್ರಾಣಿ ಎಂಬುವವರು ಎದುರುದಾರರು ಅಭಿವೃದ್ದಿಪಡಿಸುತ್ತಿರುವ ಗಾಮನಗಟ್ಟಿ ಲೇಔಟ್ನಲ್ಲಿ ಪ್ಲಾಟ್ ನಂ.53 ಮತ್ತು ಪ್ಲಾಟ್ ನಂ.17ನ್ನು ಖರೀದಿಸುವ ಸಲುವಾಗಿ ಮುಂಗಡ ಹಣ ಪಾವತಿಸಿ ಖರೀದಿ ಕರಾರು ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ಬಾಕಿ ಹಣ ಪಡೆದು ಎದುರುದಾರರು ಖರೀದಿ ಪತ್ರ ಮಾಡಿಕೊಡದೇ ದೂರುದಾರರಿಗೆ ಸತಾಯಿಸುತ್ತಿದ್ದರು. ಅಲ್ಲದೆ ದೂರುದಾರರ ಪಾವತಿ ಮಾಡಿದ ಹಣವನ್ನು ಸಹ ಮರಳಿ ಕೊಟ್ಟಿರಲಿಲ್ಲ. ಎದುರುದಾರರ ಅಂತಹ ನಡಾವಳಿಕೆಯಿಂದ ಅವರು ತಮಗೆ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆಂದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ:01/02/2025 ರಂದು ದೂರು ಸಲ್ಲಿಸಿದ್ದರು.



ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿ.ಅ. ಬೋಳಶೆಟ್ಟಿ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ಪ್ಲಾಟನ್ನು ಕೊಡದೇ ಇರುವುದು ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ಅಭಿಪ್ರಾಯಪಟ್ಟಿದೆ. ಆ ಬಗ್ಗೆ ಎದುರುದಾರರ ಮಾಲೀಕರಾದ ಶಿವನಗೌಡ ಪಾಟೀಲ ಇವರಿಗೆ ದೂರುದಾರರಿಂದ ಪಡೆದಂತಹ ಮುಂಗಡ ಹಣ ಬಡ್ಡಿ ಲೆಕ್ಕಿ ಹಾಕಿ ಸಂದಾಯ ಮಾಡುವಂತೆ ಆದೇಶಿಸಿದೆ. ಜೊತೆಗೆ ಸೇವಾ ನ್ಯೂನ್ಯತೆಯಿಂದ ದೂರುದಾರರಿಗೆ ಆಗಿರುವ ತೊಂದರೆ ಹಾಗೂ ಮಾನಸಿಕ ಹಿಂಸೆಗೆ ತಲಾ ರೂ.50,000 ಪರಿಹಾರ ಹಾಗೂ ತಲಾ ರೂ.10,000 ಪ್ರಕರಣದ ಖರ್ಚು ವೆಚ್ಚ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಎದುರುದಾರರಿಗೆ ಆಯೋಗ ಆದೇಶಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು