LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರಿಂದ ದೂರು : ಉಪ ಲೋಕಾಯುಕ್ತರಿಂದ ವಿಚಾರಣೆ-ವಿಲೇವಾರಿ


ಶಿವಮೊಗ್ಗ.ಮಾ.19ಬುಧವಾರ ನಗರದ ಕುವೆಂಪು ರಂಗಮ0ದಿರದಲ್ಲಿ ಜನರು ಸರ್ಕಾರಿ ಅಧಿಕಾರಿಗಳ ವಿರುದ್ದ, ಸರ್ಕಾರಿ ಕೆಲಸ ಪಡೆಯುವಲ್ಲಿ ಆಗುತ್ತಿರುವ ವಿಳಂಬ ಇತರೆ ಕುರಿತು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಇವರಿಗೆ ನೇರವಾಗಿ ದೂರು ಸಲ್ಲಿಸಿದರು.

“ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಸಭಾ ಕಾರ್ಯಕ್ರಮದಲ್ಲಿ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವೆಗೆ ವಿವಿಧ ಸರ್ಕಾರಿ ಇಲಾಖೆಗಳು, ಸಂಸ್ಥೆಗಳಿಗೆ ಸಂಬ0ಧಿಸಿದ0ತೆ ಸುಮಾರು 160 ದೂರುಗಳು ಸ್ವೀಕೃತಗೊಂಡಿದ್ದು, ವಿಚಾರಣೆ ಕೈಗೊಂಡು, 35 ಅರ್ಜಿಗಳನ್ನು ಮಾನ್ಯ ಉಪ ಲೋಕಾಯುಕ್ತರು ವಿಲೇವಾರಿ ಮಾಡಿದರು.

ಮಹಾನಗರಪಾಲಿಕೆ, ಕಂದಾಯ ಇಲಾಖೆ, ಗ್ರಾ.ಪಂ ಗಳು, ಕುವೆಂಪು ವಿಶ್ವವಿದ್ಯಾಲಯ, ಅರಣ್ಯ ಇಲಾಖೆ, ಪಿಡಬ್ಲುö್ಯಡಿ, ಸಹಕಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ದ ಅರ್ಜಿದಾರರು ದೂರನ್ನು ಸಲ್ಲಿಸಿದರು. ಉಪ ಲೋಕಾಯುಕ್ತರು ಸದರಿ ದೂರುಗಳ ವಿಚಾರಣೆ ನಡೆಸಿ, ಮಧ್ಯಾಹ್ನದ ಹೊತ್ತಿಗೆ ಸ್ಥಳದಲ್ಲೇ 35 ಅರ್ಜಿಗಳನ್ನು ವಿಲೇವಾರಿ ಮಾಡಿದರು. ತಮ್ಮ ವ್ಯಾಪ್ತಿಗೆ ಒಳಪಡದ ಪ್ರಕರಣಗಳಿಗೆ ಎಲ್ಲಿ ಹೋಗಬೇಕೆಂದು ಮಾರ್ಗದರ್ಶನ ಮಾಡಿದರು. ರೂ.3 ಲಕ್ಷದೊಳಗಿನ ಆದಾಯ ಇರುವ ದೂರುದಾರರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಪಡೆಯಲು ಸಲಹೆ ನೀಡಿದರು.

ಶಿವಮೊಗ್ಗ ತಾಲ್ಲೂಕಿನ ಭಾಗೀರಥಮ್ಮ ನವರು ಪೌತಿಯಾದ ಪತಿಯ ಮೂರನೇ ಪತ್ನಿಯಾಗಿದ್ದು ತಮ್ಮ ಪತಿಯ ಪಿಂಚಣಿ ಪಡೆಯುವ ಸಂಬAಧ ಮರಣ ಪ್ರಮಾಣ ಪತ್ರ ಇತರೆ ದಾಖಲೆ ಕೋರಿ ಅರ್ಜಿ ಸಲ್ಲಿಸಿದ ಸಂಬ0ಧ ದೂರು ನೀಡಿದ್ದು, ಈ ಕುರಿತು ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು ಈ ಅರ್ಜಿಯು ತಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ, ಎಸಿ ಯವರಿಗೆ ಮೇಲ್ಮನವಿ ಸಲ್ಲಿಸುವಂತೆ ತಿಳಿಸಿದರು.

ಭದ್ರಾವತಿ ತಾಲ್ಲೂಕಿನ ಸಿದ್ಲೀಪುರ ಗ್ರಾಮದ ರವಿ ಆರ್ ಎಂಬುವವರು ಭದ್ರಾವತಿ ತಹಶೀಲ್ದಾರರು, ಎಡಿಎಲ್‌ಆರ್ ವಿರುದ್ದ ದೂರು ಸಲ್ಲಿಸಿ, ಪೋಡಿ ಮಾಡಿಕೊಡುವಂತೆ ಕೋರಿದರು. ಉಪ ಲೋಕಾಯುಕ್ತರು, ದೂರುದಾರರಿಗೆ ನಿಯಮಾನುಸಾರ ಪೋಡಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

ಕುವೆಂಪು ವಿವಿ ಯ ಪ್ರೊ. ರವೀಂದ್ರ ಅವರು ಹಳೆ ಪಿಂಚಣಿಯನ್ನು ಮುಂದುವರೆಸುವ0ತೆ ಕುವೆಂಪು ವಿವಿಯ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ವಿರುದ್ದ ದೂರು ಸಲ್ಲಿಸಿದ್ದು, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ವಿಶ್ವವಿದ್ಯಾಲಯದಲ್ಲೇ ಈ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ತಿಳಿಸಿದರು.

ವಿನೋಬನಗರದ ಎಸ್.ಸಿ.ಪ್ರಕಾಶ್‌ರವರು ಕಟ್ಟಡದಲ್ಲಿ ಬಹು ಮಹಡಿಗಳನ್ನು ಕಟ್ಟುತ್ತಲೇ ಹೋಗುತ್ತಿರುವ ಬಗ್ಗೆ ಪಾಲಿಕೆಯ ಆಯುಕ್ತರ ವಿರುದ್ಧ ದೂರು ನೀಡಿದಾಗ, ಲೋಕಾಯುಕ್ತರು ಈ ಕುರಿತಂತೆ ಸಂಬ0ಧಿಸಿದ ಪಾಲಿಕೆ ಆಯುಕ್ತರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. ವಿದ್ಯಾನಗರದ ಜಿ.ಪಿ.ಚಂದ್ರಶೇಖರಪ್ಪ ಸರ್ವೇ ನಂ 8 ರಲ್ಲಿ ನಿರ್ಮಾಣವಾಗಿರುವ ಕಾಲುವೆ ತರೆವುಗೊಳಿಸುವಂತೆ ಪಾಲಿಕೆಯ ಆಯುಕ್ತರ ವಿರುದ್ಧ ದೂರ ಸಲ್ಲಿಸಿದ್ದು, ಲೋಕಾಯುಕ್ತರು ಈ ಕಾಲವೆಯ ಸ್ಥಳ ಪರಿಶೀಲನೆ ಮಾಡಲು ಸೂಚಿಸಿ, ಒಂದು ವೇಳೆ ಕಾಲುವೆ ಅವರ ಜಾಗದಲ್ಲಿ ಹೋಗಿದ್ದರೆ ಅದಕ್ಕೆ ಸೂಕ್ತ ಪರಿಹಾರ ಒದಗಿಸಬೇಕೆಂದು ತಿಳಿಸಿದರು.

ಕಾರ್ಗಲ್‌ನ ಸೀತಾಕಟ್ಟೆ ಜೋಗದ ಶಂಕರ್ ರವರು ಕಾರ್ಗಲ್‌ನ ವಲಯ ಅರಣ್ಯಾಧಿಕಾರಿಗಳು ತಮ್ಮ ಅರ್ಜಿ ಬಾಕಿ ಇರುವಾಗಲೆ ಕಾನೂನು ಬಾಹಿರವಾಗಿ ಜಮೀನಿನಿಂದ ನಮ್ಮನ್ನು ಒಕ್ಕಲೆಬ್ಬಿಸಿದ್ದಾರೆ ಎಂದು ದೂರು ನೀಡಿದ್ದು, ಲೋಕಾಯುಕ್ತರು ಇದನ್ನು ಪರಿಶೀಲಿಸಿ ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸಿದ್ದರೆ ಸೂಕ್ತ ಪರಿಹಾರ ನೀಡಬೇಕೆಂದು ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ಗಣೇಶ್ ರವರು ಗ್ರಾ. ಪಂ ಒಂದರ ಸದಸ್ಯರು ಪಿಡಿಓ ಸಹಿಯನ್ನು ನಕಲಿ ಮಾಡಿದ್ದು ಈ ಸಂಬ0ಧ ಜಿ.ಪಂ ಸಿಇಓ ಹೇಮಂತ್ ಅವರ ವಿರುದ್ಧ ದೂರು ನೀಡಿದ್ದು, ಲೋಕಾಯುಕ್ತರು ಇದು ರೆಗ್ಯುಲರ್ ದೂರು ಆಗಿರುವುದರಿಂದ ನೀವು ಪೊಲೀಸರಿಗೆ ದೂರು ನೀಡಿ ಎಂದ ಅವರು ಜಿ.ಪಂ. ಸಿಇಓ ಗೆ ಪೂರ್ವಭಾವಿ ವರದಿ ನೀಡಿ ಎಂದು ತಿಳಿಸಿದರು.

ಶಿವಮೊಗ್ಗ ಅಶೋಕನಗರದ ಎ.ಸುಮತಿ ಮತ್ತು ಎ.ಸರೋಜರವರು ಪ್ರತ್ಯೇಕವಾಗಿ ವಾರ್ಡ್ ನಂ 31 ರ ವಿಷಯ ನಿರ್ವಾಹಕ ಗುರುಮೂರ್ತಿಯವರ ಕುರಿತು ಮನೆ ಖಾತೆ ವಿಚಾರವಾಗಿ ಪಾಲಿಕೆ ಆಯುಕ್ತರ ವಿರುದ್ಧ ದೂರು ನೀಡಿದರು. ಈ ದೂರಿನ ವಿಚಾರಣೆ ನಡೆಸಿ ಸ್ಥಳದಲ್ಲೇ ವಿಲೇವಾರಿ ಮಾಡಿ ದೂರುದಾರರಿಗೆ ಖಾತೆಗಳನ್ನು ನೀಡಲಾಯಿತು.

ಆದರ್ಶ ಪ್ರಾವಿಜನ್ ಸ್ಟೋರ್ ಮಾಲೀಕರು ಎಪಿಎಂಸಿಯ ಕಾರ್ಯದರ್ಶಿ ನಾಗರಾಜ ವಿರುದ್ಧ ದೂರು ನೀಡಿದ್ದು, ವಿಚಾರಣೆ ಕೈಗೊಂಡ ಉಪ ಲೋಕಾಯುಕ್ತರು ಇದು ಸಿವಿಲ್ ನ್ಯಾಯಾಲಯ ವ್ಯಾಪ್ತಿಗೆ ಬರುವುದರಿಂದ ಅಲ್ಲಿ ಪ್ರಕರಣ ದಾಖಲಿಸಲು ತಿಳಿಸಿದರು.

ಶಿವಮೊಗ್ಗ ಗೋಪಿ ಸರ್ಕಲ್‌ನ ಎಂ.ಎಸ್. ಅರುಂಧತಿ, ನಮ್ಮ ಕೈಗಾರಿಕಾ ಜಾಗದಲ್ಲಿ ಇತರೆ ವ್ಯಕ್ತಿ ಕಟ್ಟಡ ಕಟ್ಟಿಕೊಂಡಿದ್ದಾರೆ ಅದನ್ನು ಬಿಡಿಸಿಕೊಡಬೇಕೆಂದು ಪಾಲಿಕೆ ಆಯುಕ್ತ ವಿರುದ್ಧ ದೂರು ನೀಡಿದ್ದು, ಇದು ಖಾಸಗಿ ವ್ಯಕ್ತಿಗಳ ನಡುವಿನ ವಿವಾದವಾದ್ದರಿಂದ ಇದನ್ನು ಕೋರ್ಟ್ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಲೋಕಾಯುಕ್ತರು ಸೂಚನೆ ನೀಡಿದರು.

ಶಿವಮೊಗ್ಗದ ಬಿ.ಮಂಜುನಾಥ್ ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣವಾಗಿದ್ದು ಅದನ್ನು ತೆರವುಗೊಳಿಸುವಂತೆ ಕೋರಿದರು. ಉಪ ಲೋಕಾಯುಕ್ತರು ಸದರಿ ರಸ್ತೆ ಸರ್ಕಾರಿ ಅಥವಾ ಖಾಸಗಿ ಜಮೀನಿನಲ್ಲಿ ಇದೆಯಾ ಎಂದು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.

ಗೀತ ಮತ್ತು ಗ್ರಾಮಸ್ಥರು ಮೋಜಪ್ಪನ ಹೊಸೂರು ಅಬ್ಬಲಗೆರೆ ಇವರು ಗ್ರಾಮ ಆಡಳಿತ ಅಧಿಕಾರಿ ಯೋಗೇಶ್ ನಾಯಕ್ ವಿರುದ್ದ ಸಲ್ಲಿಸಿದ್ದು ಈ ಪ್ರಕರಣಕ್ಕೆ ಸಂಬ0ಧಿಸಿದ0ತೆ ಸಿವಿಲ್ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇದ್ದು, ಇತ್ಯರ್ಥವಾದ ನಂತರ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

ಬೆಳಿಗ್ಗೆಯಿಂದಲೇ ಕುವೆಂಪು ರಂಗಮ0ದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರತ್ಯೇಕ ಕೌಂಟರ್‌ಗಳನ್ನು ತೆರೆದು ಸಾರ್ವಜನಿಕರಿಂದ ಕುಂದು ಕೊರತೆಗಳ ದೂರು ಅರ್ಜಿಗಳನ್ನು ಸ್ವೀಕರಿಸಿ ಅವರಿಗೆ ಟೋಕನ್ ನಂ. ನೀಡಿ ಸಭೆ ಸರಾಗವಾಗಿ ಜರುಗುವಂತೆ ವ್ಯವಸ್ಥೆ ಮಾಡಲಾಗಿತ್ತು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಎನ್. ಹೇಮಂತ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-05 ರ ಜಿ.ವಿ. ವಿಜಯನಂದ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಎಂ.ಎಸ್ ಸಂತೋಷ್, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದ ಕಿರಣ್ ಪಿ.ಎಂ. ಪಾಟೀಲ್, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ, ಜಿಲ್ಲಾ ಅರಣ್ಯಾಧಿಕಾರಿ ಶಿವಶಂಕರ್, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು