LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ ಪುರಸಭೆ: ಆಸ್ತಿ ತೆರಿಗೆ ಪಾವತಿಸಲು ಸೂಚನೆ


ಬಳ್ಳಾರಿ,ಫೆ.14:



ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಕಟ್ಟಡ, ನಿವೇಶನ ಹೊಂದಿರುವ ಆಸ್ತಿ ಮಾಲೀಕರು ಕಡ್ಡಾಯವಾಗಿ ತಮ್ಮ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.

ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗ, ಅರೆ ಸರ್ಕಾರಿ, ಸ್ಥಳೀಯ ಸಂಸ್ಥೆಗಳ ಒಡೆತನದಲ್ಲಿರುವ ಸ್ವತ್ತುಗಳನ್ನು ಹೊರತುಪಡಿಸಿ ಇನ್ನುಳಿದ ಕಟ್ಟಡ, ನಿವೇಶನಗಳ ಮಾಲೀಕರು ತಮ್ಮ ಆಸ್ತಿಗಳ ಆಸ್ತಿ ತೆರಿಗೆ ಪಾವತಿಸಬೇಕು

ಸಂಬoಧಿಸಿದ ಪೂರಕ ನೋಂದಾಯಿತ ದಾಖಲೆ ಪತ್ರಗಳು, ಸ್ವತ್ತಿನ ಭಾವಚಿತ್ರ, ಮಾಲೀಕರ ಫೋಟೋ, ನಮೂನೆ-15, ವಿದ್ಯುತ್ ಬಿಲ್, ಕುಡಿಯುವ ನೀರಿನ ಬಿಲ್, ಕಟ್ಟಡ ಪರವಾನಗಿ ಮತ್ತು ಅನುಮೋದಿತ ನಕ್ಷೆ, ನಿವೇಶನ ವಿನ್ಯಾಸ ಅನುಮೋದನೆ ಅಥವಾ ಅನುಮೋದಿತ ಬಡಾವಣೆಯ ನಕ್ಷೆ, ಆರ್‌ಟಿಸಿ, ಮ್ಯೂಟೇಶನ್ ನಕಲು ಪ್ರತಿ, ಮಾಲೀಕರ ಆಧಾರ್ ಕಾರ್ಡ್ ಪ್ರತಿ, ಮಾಲೀಕರ ಪಾನ್ ಕಾರ್ಡ್ ಪ್ರತಿ ಅಥವಾ ಚುನಾವಣಾ ಗುರುತಿನ ಚೀಟಿ ಹಾಗೂ ಇತರೆ ಅವಶ್ಯಕ ದಾಖಲಾತಿಗಳನ್ನು ಪುರಸಭೆ ಕಚೇರಿಗೆ ಸಲ್ಲಿಸಿ ಸ್ವತ್ತಿಗೆ ಸಂಬAಧಪಟ್ಟ ತೆರಿಗೆ ಪಾವತಿಸಬೇಕು.

ಆಸ್ತಿಯನ್ನು ಗಣಕೀಕರಿಸಿಕೊಂಡು ನಮೂನೆ-3, ನಮೂನೆ-3ಎ ಪಡೆದುಕೊಂಡು ನೋಂದಾಯಿತ ಕಚೇರಿಯಲ್ಲಿ ಕ್ರಯ ಪತ್ರ, ದಾನ ಪತ್ರ, ವಿಭಾಗ ಪತ್ರ ಹಕ್ಕು, ಖುಲಾಸೆ ಹಾಗೂ ಇತರೆ ದಾಖಲೆ ಪತ್ರ ನೋಂದಣಿ ಮಾಡಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಬಹುದು.

ತಪ್ಪಿದಲ್ಲಿ ಸಂಬAಧಪಟ್ಟ ಆಸ್ತಿ ಮಾಲೀಕರುಗಳಿಗೆ ನಿಯಮ 10ಎ ರಂತೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಗಳ ಕಚೇರಿ, ಕಂದಾಯ ಶಾಖೆಯ ಕಂದಾಯ ಅಧಿಕಾರಿ ಅಥವಾ ಮೊ.9886362003, 9916907008, 9845509950 ಗೆ ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು