LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೊಂದಲ ಗೂಡಾದ ವಸತಿ ಶಾಲೆಗಳ ಸೀಟು ಹಂಚಿಕೆ : ಸಾರ್ವಜನಿಕರ ಪರದಾಟ ವಿದ್ಯಾರ್ಥಿಗಳ ಸಂಕಟ

ಮೊರಾರ್ಜಿ ದೇಸಾಯಿ, ಗಾಂಧಿ ತತ್ವ, ನವೋದಯ ಸೇರಿದಂತೆ ಕೇಂದ್ರ ಸರ್ಕಾರಿ ಸ್ವಾಮ್ಯದ ವಸತಿ ಶಾಲೆಗಳಿಗೆ ಪ್ರವೇಶವನ್ನು ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು, ಅಷ್ಟೇ ಅಲ್ಲದೆ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳು ವರ್ಗಾವಣೆಯನ್ನು ಬಯಸಿ ಹಲವಾರು ಅರ್ಜಿಗಳನ್ನು ಆಯಾ ಮುಖ್ಯ ಉಪಾಧ್ಯಾಯರಲ್ಲಿ ಸಲ್ಲಿಸಿಕೊಂಡಿದ್ದು ಅವುಗಳನ್ನು ಇಂದು ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸುವ ಮೂಲಕ ಇತ್ಯರ್ಥಪಡಿಸಲಾಯಿತು. 


 ಆದರೆ ಈ ವಿದ್ಯಾರ್ಥಿಗಳ ಅರ್ಜಿಗಳನ್ನು ಇಂದು ಇತ್ಯರ್ಥಪಡಿಸದೆ ಮತ್ತೆ ಮುಂದಿನ ವಾರಕ್ಕೆ ಸಭೆಯನ್ನು ಮುಂದೂಡಿರುವುದಾಗಿ ಸಾಯಕ ಆಯುಕ್ತರು ಸಭೆಯನ್ನು ಮುಕ್ತಾಯಗೊಳಿಸಿದರು. ಇದರಿಂದ ಸಹಾಯಕ ಆಯುಕ್ತರ ಕಚೇರಿಗೆ ಬಂದಿದ್ದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಗೊಂದಲದಿಂದ ಮರಳಿದರು. 


 ಹೀಗೆ ಪದೇ ಪದೇ ಹಲವಾರು ಸಲ ಕಚೇರಿಗೆ ಅಲೆದಾಡಿಸುತ್ತಿರುವ ಪ್ರಾಂಶುಪಾಲರು ಮತ್ತು ಸಂಬಂಧಿಸಿದ ಅಧಿಕಾರಿಗಳನ್ನು ಪೋಷಕರು ತರಾಟೆಗೆ ತೆಗೆದುಕೊಂಡರು. ದಲಿತ ಮುಖಂಡರು ಮತ್ತು ಹಿರಿಯ ಪತ್ರಕರ್ತರಾದ ಚಳ್ಳಗುರ್ಕಿ ಸೋಮಶೇಖರ್ ಅವರು ಹೀಗೆ ಪದೇ ಪದೇ ವಿದ್ಯಾರ್ಥಿಗಳನ್ನು ಮತ್ತು ಪೋಷಕರ ಕಚೇರಿಗೆ ಅಲೆದಾಟ ತಪ್ಪಿಸುವಂತೆ ವಸತಿ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಕೂಡಲೇ ಪ್ರವೇಶ ಮತ್ತು ವರ್ಗಾವಣೆಯ ಸಮಸ್ಯೆಯನ್ನು ಪರಿಹರಿಸಬೇಕೆಂದು ಒತ್ತಾಯಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು