LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಸಭೆ ಅರ್ಥಪೂರ್ಣ ಶತಮಾನೋತ್ಸವ ಆಚರಣೆ: ಸಚಿವ ಎಚ್.ಕೆ.ಪಾಟೀಲ

ಬೆಳಗಾವಿ, ನ.5 ಮಹಾತ್ಮಾ‌ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ(ನ.5) ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು.

ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು.
ಎಲ್ಲ ವಿವಿ ಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ಪೂರ್ಣಗೊಳಿಸಬೇಕಿದೆ ಎಂದರು.

ರಚನಾತ್ಮಕ ಕಾರ್ಯಕ್ರಮ ಆಯೋಜನೆ:

ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ ಮತ್ತು ಮೆಲುಕು ಹಾಕಲು ಶತಮಾನೋತ್ಸವ ಆಚರಣೆ ಮಾಡಲಾಗುವುದು ಎಂದು ಪಾಟೀಲ ತಿಳಿಸಿದರು.

ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು.

ಅಕ್ಟೋಬರ್ 2 ರಿಂದ ಒಂದು ವರ್ಷಗಳ ಕಾಲ ಶತಮಾನೋತ್ಸವ ವರ್ಷಾಚರಣೆ. ಅಂತರರಾಷ್ಟೀಯ ಮಹತ್ವ ಪಡೆಯಲು ವಿಧಾನಮಂಡಳ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆಸಲು ಉದ್ಧೇಶಿಸಲಾಗಿದೆ.

ಬೆಳಗಾವಿ ಅಧಿವೇಶನ ಕುರಿತು ಸ್ಥಳೀಯ ನಾಟಕಕಾರರು ಒಂದು ವಿಶೇಷ ನಾಟಕವನ್ನು ರಚಿಸುವಂತೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ವೀರಪ್ಪ ಮೊಯ್ಲಿ ಅವರು, ಶತಮಾನೋತ್ಸವ ಸ್ಮರಣೀಯವಾಗಿಸಲು ಶತಮಾನೋತ್ಸವ ಉದ್ಯಾನ ಮತ್ತು ಭವನ‌ ನಿರ್ಮಾಣ ಮಾಡಬೇಕಿದೆ ಎಂದರು.

ಇದಲ್ಲದೇ ಮಹಾತ್ಮಾ ಗಾಂಧಿ ಪುತ್ಥಳಿ ನಿರ್ಮಾಣ; ಅಧಿವೇಶನ ಸ್ಥಳದಲ್ಲಿ ಗಾಂಧಿ ಸ್ಮಾರಕ; ಛಾಯಾಚಿತ್ರ ಹಾಗೂ ವಸ್ತುಪ್ರದರ್ಶನ ಹಾಗೂ ಖಾಯಂ ಮ್ಯೂಸಿಯಂ ಸ್ಥಾಪಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಶತಮಾನೋತ್ಸವ ಅಂಚೆ ಚೀಟಿ ಬಿಡುಗಡೆ; ಬೆಳಗಾವಿಯಲ್ಲಿ ವಿಚಾರಸಂಕಿರಣ ರೂಪುರೇಷೆ ಸಿದ್ಧಪಡಿಸಬೇಕು ಮತ್ತು ಶತಮಾನೋತ್ಸವ ಸಂದರ್ಭದಲ್ಲಿ ವಿವಿಧ ಸಮ್ಮೇಳನ ಹಮ್ಮಿಕೊಳ್ಳಲು ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶತಮಾನೋತ್ಸವ ಸಮಿತಿಯ ಸಂಚಾಲಕರಾದ ವಿಧಾನಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ ಅವರು, ಅಧಿವೇಶನದ ಶತಮಾನೋತ್ಸವವು ಒಂದು ವರ್ಷದ ಕಾರ್ಯಕ್ರಮ. ಮುಂದಿನ ಅಕ್ಟೋಬರ್ 2 ರವರೆಗಿನವರೆಗೆ ಅಳವಡಿಸಿಕೊಳ್ಳಲಾಗುವುದು ಎಂದು ವಿವರಿಸಿದರು.

ಹಿರಿಯ ಸಾಹಿತಿ ಡಾ.ಸರಜೂ ಕಾಟ್ಕರ್, ದೇಶಪಾಂಡೆ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ರವೀಂದ್ರ ದೇಶಪಾಂಡೆ, ಪ್ರೊ.ಮರಾಠೆ, ನಿಲೇಶ್ ಬೇನಾಳ ಮತ್ತಿತರರು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಸಲಹೆಗಳನ್ನು ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಬೆಳಗಾವಿ ಉತ್ತರ ಶಾಸಕರಾದ ಆಸಿಫ್ (ರಾಜು) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಸಮಿತಿಯ ಸದಸ್ಯರಾದ ಎನ್.ಆರ್.ವಿಶುಕುಮಾರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.



ಅಧಿವೇಶನ ಸ್ಥಳ; ಹುದಲಿ ಭೇಟಿ:

ಸಭೆಯ ಬಳಿಕ ಸಮಿತಿಯ ಅಧ್ಯಕ್ಷರು, ಗೌರವ ಅಧ್ಯಕ್ಷರು, ಸಂಚಾಲಕರು, ಸದಸ್ಯರು ಕಾಂಗ್ರೆಸ್ ಅಧಿವೇಶನ‌ನಡೆದ ಸ್ಥಳವಾದ ಟಿಳಕವಾಡಿ, ವೀರಸೌಧಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನ ಹಾಗೂ ಕಾಂಗ್ರೆಸ್ ಬಾವಿಯನ್ನು ವೀಕ್ಷಿಸಿ, ಜಿಲ್ಲಾಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ನಂತರ ಲೆಲೆ ಮೈದಾನ, ಸಿಪಿಎಡ್ ಮೈದಾನ; ಕಣಬರಗಿಯಲ್ಲಿರುವ ಗಂಗಾಧರರಾವ್ ದೇಶಪಾಂಡೆ ಸ್ಮಾರಕ ಮತ್ತು ಹುದಲಿಯಲ್ಲಿರುವ ಮಹಾತ್ಮಾ ಗಾಂಧೀಜಿ ಸ್ಮಾರಕವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಎಚ್‌.ಕೆ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಗೌರವ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಸಮಿತಿಯ ರಾಜ್ಯ ಸಂಚಾಲಕರಾದ ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ, ಸದಸ್ಯರಾದ ಎನ್.ಆರ್.ವಿಶುಕುಮಾರ್, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಫ್(ರಾಜು) ಸೇಠ್, ವಿನಯ ನಾವಲಗಟ್ಟಿ, ಶಿವನಗೌಡ ಪಾಟೀಲ, ರಮೇಶ ಜನಗಲ, ರಾಮಕೃಷ್ಣ ಮರಾಠೆ, ಮತ್ತಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು