LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ

 

ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ನಗರದಲ್ಲಿ ಸ್ತಬ್ದಚಿತ್ರಗಳು ಹಾಗೂ ಕಲಾತಂಡಗಳೊAದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ಮಾಡಲಾಯಿತು.

ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಆನೆಬಾಗಿಲು, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚನ್ನಮ್ಮ, ಮಹಾವೀರ, ಅಂಬೇಡ್ಕರ್, ಮದರಕರಿ ನಾಯಕ ವೃತ್ತಗಳ ಮಾರ್ಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ತಲುಪಿತು.

ಮೆರವಣಿಗೆಯಲ್ಲಿ ನಾಸಿಕ್ ಡೋಲ್, ತಾಷರಾಮ್ ಡೋಲ್ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನಾ ಸಭೆಯ ಅಧ್ಯಕ್ಷ ಡಾ.ಬಾಬು ರಾಜೇಂದ್ರ ಪ್ರಸಾದ್ ಅವರಿಗೆ ಸಂವಿಧಾನ ಪ್ರತಿ ಹಸ್ತಾಂತರಿಸುವ ಸ್ತಬ್ದ ಗಮನ ಸೆಳೆಯಿತು. ಇದರೊಂದಿಗೆ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳ ಅಡಿ ದೊರೆಯುವ ಸರ್ಕಾರದ ಸೌಲತ್ತುಗಳ ಮಾಹಿತಿಯನ್ನು ಪ್ರಚುರಪಡಿಸಲಾಯಿತು.

ಮೆರವಣಿಗೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿ.ಪಂ. ಸಿಇಓ ಡಾ.ಆಕಾಶ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಉಪ ವಿಭಾಗಾಧಿಕಾರಿ ಕಾಂತರಾಜು ಸೇರಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಮುಖಂಡರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026