LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೋಗಾನೆ ಲೇಔಟ್ ನಿರ್ಮಾಣ-ರೈತರನ್ನು ಒಕ್ಕಲೆಬ್ಬುಸುವುದಿಲ್ಲ : ಸುಂದರೇಶ್

ಶಿವಮೊಗ್ಗ, ಡಿಸೆಂಬರ್ 21
ಸೋಗಾನೆಯಲ್ಲಿ ಸೂಡಾ ವತಿಯಿಂದ ಅಭಿವೃದ್ದಿಪಡಿಸಲು ಉದ್ದೇಶಿಸಿರುವ ಲೇಔಟ್ ಕುರಿತು ರೈತರಲ್ಲಿ ತಪ್ಪು ತಿಳುವಳಿಕೆ ನಿವಾರಣೆ ಆಗಬೇಕು. ಅಲ್ಲಿ ಯಾವುದೇ ಬಗರ್ ಹುಕುಂ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮದ ಸ.ನಂ 156 ರ ಪ್ರದೇಶದಲ್ಲಿ ಸೂಡಾ ಲೇಔಟ್ ನಿರ್ಮಿಸುವ ಕುರಿತು ರೈತರೊಂದಿಗೆ ಚರ್ಚಿಸಲು ಶನಿವಾರ ಸೂಡಾ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೋಗಾನೆಯಲ್ಲಿ ಸಾರ್ವಜನಿಕರ ಹಿತಾಸಕ್ತಿಗಾಗಿ ಸೂಡಾ ವತಿಯಿಂದ ನಿವೇಶನ ನಿರ್ಮಿಸಲು ಜಿಲ್ಲಾಧಿಕಾರಿಗಳು ಮತ್ತು ಎಸಿ ಯವರಿಗೆ ಪತ್ರೆ ಬರೆದು 200 ಎಕರೆ ಜಾಗ ಮಂಜೂರು ಮಾಡುವಂತೆ ಮನವಿ ಮಾಡಲಾಗಿತ್ತು. ಅದರೆಂತೆ ನಿವೇಶನ ನಿರ್ಮಿಸಲು ಸರ್ವೇ ನಂ.156 ರ 96 ಎಕರೆ ಜಾಗ ಮಂಜೂರಾಗಿದೆ. ಈಗಾಗಲೇ ಅಲ್ಲಿ 600 ಎಕರೆ ಕೆಐಎಡಿಬಿ ವಶದಲ್ಲಿದೆ.
ಉದ್ದೇಶಿತ ಪ್ರದೇಶದಲ್ಲಿ ಪ್ರಸ್ತುತ 49 ಎಕರೆ ಜಾಗದಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. 2 ಎಕರೆ ಸ್ಮಶಾನ ಜಾಗವಿದೆ. ಮತ್ತೆ ಕೆಲ ರೈತರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ಎಷ್ಟು ಜನ ರೈತರು ಬಗರ್‌ಹುಕುಂ ಅರ್ಜಿಗಳನ್ನು ಸಲ್ಲಿಸಿದ್ದಾರೆ, ತೋಟ, ಗದ್ದೆ ಎಷ್ಟಿದೆ ಎಂದು ಸರ್ವೇ ಕಾರ್ಯ ಮಾಡಿದ ನಂತರವೇ ಹಾಗೂ ಸಾಧಕ ಬಾಧಕಗಳನ್ನು ನೋಡಿ, ಅಗತ್ಯ ಕ್ರಮ ಕೈಗೊಂಡು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಕ್ರಮ ವಹಿಸಲಾಗುವುದು.
ಹಾಗೂ ರೈತರ ಬೇಡಿಕೆಯಂತೆ ರೈತರಿಗೆ ಬಗರ್ ಹುಕುಂ ಸಮಿತಿಯಿಂದ ಹಕ್ಕು ಪತ್ರ ಕೊಡಿಸಲು ಸಹ ಸಹಕರಿಸುವುದಾಗಿ ರೈತರಿಗೆ ಭರವಸೆ ನೀಡಿದ ಅವರು, ಹಕ್ಕುಪತ್ರ ಪಡೆದ ನಂತರ ಸದರಿ ಭೂಮಿಯನ್ನು ಖಾಸಗಿಯಾಗಿ ಯಾರಿಗೇ ಆಗಲಿ 20 ವರ್ಷ ಪರಭಾರೆ ಮಾಡಲು ಬರುವುದಿಲ್ಲ. ಆದರೆ ಸರ್ಕಾರಿ ಉದ್ದೇಶಕ್ಕೆ ನೀಡಬಹುದಾಗಿದ್ದು, ಹಾಗೆ ರೈತರು ನೀಡಿದ ಭೂಮಿಯನ್ನು 50:50 ಅನುಪಾತದಲ್ಲಿ ಪಡೆಯಲಾಗುವುದು. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.
ರೈತರು ಮಾತನಾಡಿ, ಈ ಹಿಂದೆ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ ಸರಿಯಾದ ನ್ಯಾಯ ಒದಗಿಲ್ಲ. ಇದೀಗ ಸೂಡಾ ಲೇಔಟ್ ಮಾಡಲು ಇಲ್ಲಿ ಭೂಮಿ ಪಡೆಯಲು ಮುಂದಾಗಿದ್ದಾರೆ. ಮೊದಲು ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿ, ನಂತರ ಭೂಮಿ ಪಡೆಯುವ ಪ್ರಕ್ರಿಯೆ ಮಾಡುವಂತೆ ಮನವಿ ಮಾಡಿದರು.
ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದಾ ಪರ‍್ಯಾನಾಯ್ಕ ಮಾತನಾಡಿ, ಎಷ್ಟು ಜನ ರೈತರು ಅಲ್ಲಿ ಸಾಗುವಳಿ ಮಾಡುತ್ತಿದ್ದಾರೆ, ಬಗರ್ ಹುಕುಂ ಅಡಿಯಲ್ಲಿ ಎಷ್ಟು ಜನ ರೈತರು ಅರ್ಜಿ ಸಲ್ಲಿಸಿದ್ದಾರೆ ಎಂಬ ನಿಖರ ಮಾಹಿತಿಯೊಂದಿಗೆ ಸಮಿತಿಗೆ ಮಂಡಿಸಿರಿ. ಬಡವರು, ಎಸ್‌ಸಿ/ಎಸ್‌ಟಿ ಸೇರಿದಂತೆ ಅರ್ಹರಿಗೆ ಮಾತ್ರ ಹಕ್ಕುಪತ್ರ ನೀಡಲಾಗುವುದು. ಹೀಗೆ ಹಕ್ಕುಪತ್ರ ಪಡೆದವರು ಬೇರೆಯವರಿಗೆ ಪರಭಾರೆ ಮಾಡುವಂತಿಲ್ಲ. ಒಂದು ವೇಳೆ ಮಾಡಿದಲ್ಲಿ ಹಕ್ಕುಪತ್ರವನ್ನು ರದ್ದುಪಡಿಸಲಾಗುವುದು. ಸರ್ಕಾರಿ ಉದ್ದೇಶಕ್ಕೆ ನೀಡಬಹುದು. ಮುಂದಿನ ಸಮಿತಿ ಸಭೆಯಲ್ಲಿ ಸೋಗಾನೆ ಭಾಗದ ರೈತರ ಅರ್ಜಿಯನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು ಎಂದರು.
ಉಪವಿಭಾಗಾಧಿಕಾರಿ ಸತ್ಯನಾರಾಯಣ್ ಮಾತನಾಡಿ, ಸೋಗಾನೆಯ ಉದ್ದೇಶಿತ ಪ್ರದೇಶದಲ್ಲಿ 50 ರಿಂದ 54 ರೈತರು ಸಾಗುವಳಿ ಮಾಡುತ್ತಿದ್ದು 30 ಎಕರೆ ತೋಟವಿದೆ. ರೈತರ ರಿಟ್ ಪೆಟಿಷನ್ ಪೆಂಡಿಗ್ ಇವೆ. ಬಗರ್ ಹುಕುಂ ಸಾಗುವಳಿದಾರರು ಎಷ್ಟು ಜನ ಹಕ್ಕುಪತ್ರಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪರಿಶೀಲನೆ ನಡೆಸಬೇಕು. ಎಷ್ಟು ಗದ್ದೆ, ತೋಟ, ಕರಾಬು ಇದೆ ಎಂದು ಸರ್ವೇ ಕಾರ್ಯ ನಡೆಸಬೇಕು. ನಂತರ ಮುಂದಿನ ಕ್ರಮ ಎಂದು ತಿಳಿಸಿದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಸೂಡಾ ಸದಸ್ಯರು, ಸೂಡಾ ಆಯುಕ್ತರಾದ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್ , ಮುಖಂಡರು ರೈತರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು