LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹತ್ತಿ ಬೆಳೆಗಾರರ ಹಾಗೂ ಬೀಜೋತ್ಪಾದಕ ಕಂಪನಿ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ



ಕೊಪ್ಪಳ ಜುಲೈ 10 : ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಹತ್ತಿ ಬೆಳೆಗಾರರು ಮತ್ತು ಬೀಜ ಉತ್ಪಾದನಾ ಕಂಪನಿಗಳ ಪ್ರತಿನಿಧಿಗಳ ಸಭೆ ಜರುಗಿದ್ದು, ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಕೆಲವು ಸೂಚನೆಗಳನ್ನು ಪಾಲಿಸಲು ಸೂಚಿಸಿರುತ್ತಾರೆ.

ಹತ್ತಿ ಬಿತ್ತನೆ ಬೀಜ ಉತ್ಪಾದನಾ ಕ್ಷೇತ್ರದಲ್ಲಿ ಬಂದ ಇಳುವರಿಯನ್ನು ಯಾವುದೇ ಗರಿಷ್ಟ ಮಿತಿ ಹಾಕದೆ ಸಂಪೂರ್ಣವಾಗಿ ಕಂಪನಿಗಳು ಖರೀದಿ ಮಾಡಬೇಕು. ಈ ವರ್ಷದಿಂದ ರೈತರು, ಬೀಜ ಸಂಘಟಕರು ಹಾಗೂ ಕಂಪನಿಗಳ ನಡುವೆ ಕರಾರು ಒಪ್ಪಂದ ಮಾಡಿಕೊಳ್ಳಲು ಪ್ರೆರೇಪಿಸಬೇಕು. ಎಲ್ಲಾ ಸಂಘಟಕರ ಹೆಸರು, ಪೋನ್ ನಂಬರ್ಗಳನ್ನು ಕಂಪನಿಯವರಿಂದ ಪಡೆದು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಬಿತ್ತನೆ ಬೀಜ ಕಂಪನಿಗಳು ನೀಡಿರುವ ಉತ್ಪಾದನಾ ಕ್ಷೇತ್ರಗಳ ಪಟ್ಟಿ, ರೈತರ ಹೆಸರು, ಸರ್ವೆ ಸಂಖ್ಯೆ ಮತ್ತು ಸಂಘಟಕರ ವಿವರಗಳನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು.

ಇನ್ನು ಮುಂದೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಕಂಪನಿಗಳು ಹಾಗೂ ಬೀಜೋತ್ಪಾದನೆ ಮಾಡುವ ರೈತರು ಕಡ್ಡಾಯವಾಗಿ ಕರಾರು ಒಪ್ಪಂದ ಮಾಡಿಕೊಂಡು, ಒಪ್ಪಂದದಲ್ಲಿ ನಮೂದು ಮಾಡಲಾದ ಅಂಶಗಳಂತೆ ಕಾರ್ಯನಿರ್ವಹಿಸಬೇಕು. ಈ ಎಲ್ಲಾ ಅಂಶಗಳನ್ನು ಕಂಪನಿಗಳು ಹಾಗೂ ಬೀಜ ಸಂಘಟಕರು ತಪ್ಪಿದಲ್ಲಿ ಅವರ ವಿರುದ್ಧ ದೂರನ್ನು ಲಿಖಿತ ರೂಪದಲ್ಲಿ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ನೀಡುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ ಅವರು ಪ್ರಕಟಣೆ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು