LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಲಿಂಡ‌ರ್ ಸ್ಪೋಟ: ಬಾಲಕ ಸಾವು, 10 ಮನೆಗಳು ಛಿದ್ರ? 7 ಜನರಿಗೆ ಗಂಭೀರ ಗಾಯ

ಬೆಂಗಳೂರು: ಭೀಕರ ಸಿಲಿಂಡ‌ರ್ ಸ್ಪೋಟಗೊಂಡು ಹತ್ತು ಮನೆಗಳು ಛಿದ್ರಗೊಂಡಿದ್ದು, ಬಾಲಕನೊಬ್ಬ ಮೃತಪಟ್ಟು, ಏಳು ಜನ ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಆ.15ರ ಶುಕ್ರವಾರ ನಡೆದಿದೆ.

ತಿಮ್ಮರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಘಟನೆ ನಡೆದಿದ್ದು, ಈ ಪರಿಣಾಮ 10 ಕ್ಕೂ ಹೆಚ್ಚು ಮನೆಗಳು ಛಿದ್ರಗೊಂಡಿದೆ ಎಂದು ತಿಳಿದು ಬಂದಿದೆ. ಹಲವರು ಕಟ್ಟಡ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳದಲ್ಲಿ ಎನ್.ಡಿ.ಆ‌ರ್.ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಘಟನೆಯಲ್ಲಿ ಮುಬಾರಕ್ ಎಂಬ ಬಾಲಕ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.


ಹಲವರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ. ಕಸ್ತೂರಿ, ನರಸಮ್ಮ, ಸಬ್ರಿನ್ ಬಾನು, ಫಾತೀಮಾ ಸೇರಿದಂತೆ ಹಲವರಿಗೆ ಗಾಯಗಳಾಗಿವೆ.

ಇದು ಸಿಲಿಂಡ‌ರ್ ಸ್ಫೋಟದಿಂದ ಸಂಭವಿಸಿದ ಅವಘಡವೇ ಅಥವಾ ಇನ್ನಾವುದಾದರು ಸ್ಫೋಟದಿಂದ ಸಂಭವಿಸಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇನ್ನಷ್ಟೇ ನಿಖರ ಕಾರಣ ತಿಳಿದು ಬರಬೇಕಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026