Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಜೈಲು ಪರಿಸ್ಥಿತಿ ಬಗ್ಗೆ ಸುಪ್ರೀಂನಲ್ಲಿ ದರ್ಶನ್ ಅಳಲು

ನವದೆಹಲಿ, ಮೇ 3: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ ಅವರು, ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ಜೈಲಿನ ಒಳಗಿನ ಸ್ಥಿತಿಗತಿ ಹಾಗೂ ತಮ್ಮ ವೃತ್ತಿಜೀವನದ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ಸುದೀರ್ಘ ಅಳಲು ತೋಡಿಕೊಂಡಿದ್ದಾರೆ. ಅರ್ಜಿಯ ವಿಚಾರಣೆ ಮೇ 4ರಂದು ನಡೆಯಲಿದ್ದು, ನ್ಯಾಯಾಲಯ ವಿಷಯದಲ್ಲಿ ಯಾವ ರೀತಿಯ ತೀರ್ಪು ನೀಡಲಿದೆ ಎಂಬುದರ ಬಗ್ಗೆ ಕಾನೂನು ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.

ದರ್ಶನ್ ತಮ್ಮ ಅರ್ಜಿಯಲ್ಲಿ, ಜೈಲಿನಲ್ಲಿ ತಮಗೆ ಅಮಾನವೀಯ ವರ್ತನೆ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಿಯಮಗಳನ್ನು ಮೀರಿ ತಮಗೆ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದ್ದು, ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ತೀವ್ರ ಹಾನಿ ಉಂಟಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ದೀರ್ಘಕಾಲ ಒಂಟಿತನದಲ್ಲಿ ಇರಿಸಲಾಗಿರುವುದು ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಇದರ ಜೊತೆಗೆ, ಜೈಲಿನೊಳಗಿನ ಇತರ ಕೈದಿಗಳಿಂದ ತಮಗೆ ನಿರಂತರವಾಗಿ ಬೆದರಿಕೆ, ನಿಂದನೆ ಹಾಗೂ ಪ್ರಚೋದನೆ ಎದುರಾಗುತ್ತಿದೆ ಎಂದು ದರ್ಶನ್ ದೂರಿದ್ದಾರೆ. ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರದಿಂದ ಸಮಸ್ಯೆಗಳು ಇನ್ನಷ್ಟು ಗಂಭೀರವಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಇದರಿಂದ ತಮ್ಮ ಭದ್ರತೆಗೆ ಆತಂಕ ಉಂಟಾಗಿದೆ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

ಇತರ ಕೈದಿಗಳೊಂದಿಗೆ ಹೋಲಿಸಿದರೆ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪವನ್ನೂ ಅವರು ಮುಂದಿಟ್ಟಿದ್ದಾರೆ. ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಸಮಾನ ಅವಕಾಶ ನೀಡಲಾಗುತ್ತಿಲ್ಲ, ಹೊರಗಿನಿಂದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ಅಂಶಗಳು ತಮ್ಮ ಮಾನವೀಯ ಹಕ್ಕುಗಳ ಉಲ್ಲಂಘನೆಯಾಗಿವೆ ಎಂದು ಅವರು ವಾದಿಸಿದ್ದಾರೆ.

ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನೂ ದರ್ಶನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದರೂ ಕೇವಲ ಎರಡು ಅಥವಾ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಮರ್ಪಕ ವೈದ್ಯಕೀಯ ಚಿಕಿತ್ಸೆ ದೊರೆಯದಿರುವುದು ತಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂಬುದಾಗಿ ಅವರು ಹೇಳಿದ್ದಾರೆ.

ಇದೇ ವೇಳೆ, ತಮ್ಮ ವೃತ್ತಿಜೀವನದ ಮೇಲೆ ಜೈಲು ವಾಸ ಬೀರುತ್ತಿರುವ ಪರಿಣಾಮಗಳ ಕುರಿತು ದರ್ಶನ್ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಎರಡುರಿಂದ ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದ ಅವರು, ಜಾಮೀನು ರದ್ದಾಗುವ ಮೊದಲು ಪ್ರಮುಖ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮೀಡಿಯಾ ಹೌಸ್ ಸ್ಟೂಡಿಯೋಸ್ ಚಿತ್ರಗಳಿಗೆ ಸಹಿ ಮಾಡಿದ್ದಾಗಿ ಹೇಳಿದ್ದಾರೆ. ಚಿತ್ರಗಳಿಗೆ ನಿರ್ಮಾಪಕರು ಈಗಾಗಲೇ ಸುಮಾರು ಆರು ಕೋಟಿ ರೂಪಾಯಿ ಹೂಡಿಕೆ ಮಾಡಿರುವುದಾಗಿ ತಿಳಿಸಿ, ದೀರ್ಘಕಾಲ ಜೈಲಿನಲ್ಲಿ ಉಳಿಯುವುದರಿಂದ ತಮ್ಮ ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳುತ್ತಿದೆ ಎಂದು ವಿವರಿಸಿದ್ದಾರೆ. ಪರಿಸ್ಥಿತಿ ತಮ್ಮ ವೃತ್ತಿಜೀವನಕ್ಕೆಮರಣಗಂಟೆಯಾಗಬಹುದು ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಪ್ರಕರಣದ ತನಿಖೆ ಹಾಗೂ ಸಾಕ್ಷ್ಯ ವಿಚಾರಣೆಯ ವಿಳಂಬವನ್ನೂ ದರ್ಶನ್ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ ಒಟ್ಟು 262 ಸಾಕ್ಷಿಗಳ ವಿಚಾರಣೆ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದ್ದು, ಕಳೆದ ಎಂಟು ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ವೇಗದಲ್ಲಿ ವಿಚಾರಣೆ ಮುಂದುವರಿದರೆ ಪ್ರಕರಣ ಅಂತ್ಯಗೊಳ್ಳಲು ಇನ್ನೂ ದೀರ್ಘಕಾಲ ಬೇಕಾಗಬಹುದು ಎಂಬ ಅಭಿಪ್ರಾಯವನ್ನು ವಕೀಲರು ವ್ಯಕ್ತಪಡಿಸಿದ್ದಾರೆ.

ಹಿನ್ನೆಲೆಯಲ್ಲಿ, ದೀರ್ಘಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಇರಿಸುವುದು ತಮ್ಮ ವೃತ್ತಿ ನಡೆಸುವ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ವಾದಿಸಿ, ತಮಗೆ ಜಾಮೀನು ನೀಡುವಂತೆ ಸುಪ್ರೀಂ ಕೋರ್ಟ್ಗೆ ದರ್ಶನ್ ಮನವಿ ಮಾಡಿದ್ದಾರೆ.

ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದ್ದು, ಜೈಲು ಪರಿಸ್ಥಿತಿ, ಮಾನವ ಹಕ್ಕುಗಳ ಪ್ರಶ್ನೆ ಹಾಗೂ ವಿಚಾರಣೆಯ ವಿಳಂಬದಂತಹ ಅಂಶಗಳನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಯಾವ ರೀತಿಯ ಆದೇಶ ನೀಡಲಿದೆ ಎಂಬುದು ಈಗ ಗಮನಾರ್ಹವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ