Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೋಡ ಬಿತ್ತನೆಗೆ ಚಿಂತನೆ ಡಿಸಿಎಂ ಡಿ.ಕೆ.ಶಿವಕುಮಾರ್

 

ಬೆಂಗಳೂರು: "ಮೋಡ ಬಿತ್ತನೆ ಮಾಡಲು ಎರಡು- ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಮಾಡಲಿದೆ" ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಸೋಮವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತ್ರಿಕೆಯೆ ನೀಡಿದ ಅವರು ಹೇಳಿದ್ದಿಷ್ಟು;

"ಎರಡು ದಿನಗಳಿಂದ ಬೆಂಗಳೂರು ನಗರ ಹಾಗೂ ಸುತ್ತಾಮುತ್ತ ಸುರಿದ ಮಳೆಯಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಮೋಡ ಬಿತ್ತನೆಯಿಂದ ಪರಿಸ್ಥಿತಿ ಸುಧಾರಿಸಬಹುದು ಎನ್ನುವ ನಂಬಿಕೆ ಇದೆ. ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಹಾಗೂ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆ ಮಾಡುತ್ತೇವೆ" ಎಂದು ತಿಳಿಸಿದರು.

*ಎರಡು ಪಕ್ಷಗಳ ಅಸಮಧಾನಿತ ನಾಯಕರ ಸೇರ್ಪಡೆಗೆ ಚರ್ಚೆ*

ವಿರೋಧ ಪಕ್ಷಗಳ ಮೈತ್ರಿಯಿಂದ ಅಸಮಾಧಾನಿತರು ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದಾಗ, "ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರವಾಗಿ ಎರಡೂ ಪಕ್ಷಗಳ ಅಸಮಾಧಾನಿತರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ, ಮುಖ್ಯಮಂತ್ರಿಗಳು ಹಾಗೂ ಸಂಪುಟ ಸಹೋದ್ಯೋಗಿಗಳ ಜೊತೆ ಈ ವಿಚಾರ ಚರ್ಚೆ ನಡೆಸಲಾಗುತ್ತದೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದೇವೆ. ಪಕ್ಷಾಂತರ ಕಾಯ್ದೆ ಬಗ್ಗೆಯೂ ನಮಗೆ ಎಚ್ಚರಿಕೆ ಇದೆ.

ಸಚಿವರುಗಳನ್ನು ಲೋಕಸಭೆ ಕ್ಷೇತ್ರಗಳ ವೀಕ್ಷಕರನ್ನಾಗಿ ನೇಮಿಸಿರುವ ಬಗ್ಗೆ ಕೇಳಿದಾಗ, "28 ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ವೀಕ್ಷಕರನ್ನಾಗಿ ನೇಮಕ‌ ಮಾಡಲಾಗಿದೆ. ಇಬ್ಬರು -ಮೂವರು ಸಚಿವರನ್ನು ನೇಮಕ ಮಾಡಲು ಆಗಿಲ್ಲ. ಎಂ.ಬಿ. ಪಾಟೀಲರು ವಿದೇಶದಲ್ಲಿ, ಕೆ.ಜೆ.ಜಾರ್ಜ್ ಅವರು ಪಕ್ಷದ ಕೇಂದ್ರ ಸಮಿತಿಯಲ್ಲಿ ಇರುವ ಕಾರಣ ನೇಮಕ ಮಾಡಲು ಆಗಲಿಲ್ಲ. ಎಲ್ಲಾ ಕ್ಷೇತ್ರಗಳ ವರದಿ 10 ದಿನಗಳಲ್ಲಿ ಕೈ ಸೇರಲಿದ್ದು, ಎರಡು ಅಥವಾ ಮೂರು ಹೆಸರುಗಳನ್ನು ಸೂಚಿಸಬಹುದೆಂದು ನಿರೀಕ್ಷೆಯಿದೆ. ಜನವರಿ ಮುಂಚಿತವಾಗಿ ಮೊದಲ‌ ಪಟ್ಟಿ ಬಿಡುಗಡೆ ಮಾಡುತ್ತೇವೆ" ಎಂದು ತಿಳಿಸಿದರು.

*ಪ್ರತಿಭಟನೆಗೆ ಸಹಕಾರ*

ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಕಾವೇರಿ ನೀರಿನ ವಿಚಾರವಾಗಿ ಬಂದ್ ಹಾಗೂ ಪ್ರತಿಭಟನೆ ಕುರಿತಾಗಿ "ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ.‌ ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು". ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ.

ಪ್ರತಿಭಟಿಸುವುದು ಪ್ರಜಾಪ್ರಭುತ್ವದ ಹಕ್ಕು, ಯಾವ ಪಕ್ಷದವರಿಗೂ ತೊಂದರೆ, ಅಡಚಣೆ ಮಾಡಲು ನಾವು ಮುಂದಾಗುವುದಿಲ್ಲ. ನಾವು ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಪಕ್ಷದವರು ಸಹ ಏನು ಮಾಡುವುದು ಎಂದು ಕೇಳಿದರು, ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಿ ಎಂದು ಹೇಳಿದ್ದೇವೆ.

ಸುಪ್ರೀಂ ಕೋರ್ಟ್, ಹೈಕೋರ್ಟ್ ತೀರ್ಪು ಬಾಕಿ ಇದೆ, ಮಾಧ್ಯಮಗಳಲ್ಲಿ ಹೆಸರು ಬರುತ್ತದೆ ಎಂದು ಹೋರಾಟಕ್ಕೆ ಕರೆ ನೀಡಿದರೆ ಲಾಭವೇನು? ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಪು ಬಂದರೆ ಏನು ಮಾಡುತ್ತಾರೆ?"

ಹೋರಾಟಗಳಿಂದ ಕಾನೂನಾತ್ಮಕ ತೊಂದರೆ ಆಗುವುದಿಲ್ಲವೇ ಎನ್ನುವ ಪ್ರಶ್ನೆಗೆ "ಮಂತ್ರಿಯಾಗಿ ಇದಕ್ಕೆ ಉತ್ತರ ನೀಡಲು ಆಗುವುದಿಲ್ಲ. ನ್ಯಾಯಾಲಯಕ್ಕೆ ಹಾಗೂ ಜನ ಇಬ್ಬರಿಗೂ ಗೌರವ ಕೊಡಬೇಕು. ಜನ ಸಹಕಾರ ಕೊಡದೆ ಇದ್ದರೆ 'ಬಂದ್' ಎನ್ನುವ ಹೋರಾಟಕ್ಕೆ ಮರ್ಯಾದೆ ಇರುವುದಿಲ್ಲ" devil and the deep blue sea ಪರಿಸ್ಥಿತಿಯಲ್ಲಿದ್ದೇವೆ, ಹೇಗೆ ಉತ್ತರಿಸಲಿ? ಎಂದು ತಿಳಿಸಿದರು.

ಹೆಚ್ಚುವರಿ ಡಿಸಿಎಂ ವಿಚಾರ ಬಹಿರಂಗವಾಗಿ ಚರ್ಚೆ ಮಾಡುವಂತಿಲ್ಲ ಎಂದು ಹೈಕಮಾಂಡಿನಿಂದ ಪತ್ರ ಬಂದಿದೆ ಎನ್ನುವ ಪ್ರಶ್ನೆಗೆ "ಇದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ" ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ