Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾವೇರಿ, ರಾಜ್ಯದ ಹಿತಾಸಕ್ತಿ ರಕ್ಷಣೆಗೆ ಬದ್ದ: ಡಿಸಿಎಂ ಡಿ.ಕೆ.ಶಿವಕುಮಾರ್

 

ಬೆಂಗಳೂರು:
"ಕಾವೇರಿ ನೀರು ಹರಿಸಬೇಕೊ, ಬೇಡವೋ ಎಂಬುದರ ಕುರಿತು ಯೋಚನೆ ಮಾಡಲಾಗುತ್ತಿದೆ, ಮಂಗಳವಾರ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಹಾಕುತ್ತಿದ್ದೇವೆ ನಂತರ ತೀರ್ಮಾನ ಮಾಡಲಾಗುವುದು" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ಸೋಮವಾರ ಆದೇಶ ನೀಡಿದ ನಂತರ ಸದಾಶಿವನಗರದ ನಿವಾಸದಲ್ಲಿ ಸೋಮವಾರ ರಾತ್ರಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದ್ದಿಷ್ಟು.

ದೆಹಲಿಗೆ ಯಾವ ಸಮಯದಲ್ಲಾದರೂ ಭೇಟಿ ನೀಡಲು ನಾವು ತಯಾರಿದ್ದೇವೆ. ರಾಜ್ಯದ ಎಂಪಿಗಳು ಹಾಗೂ ಮುಖ್ಯಮಂತ್ರಿಗಳು ಶೀಘ್ರವೇ ಒಂದು ದಿನಾಂಕ ನಿಗದಿ ಮಾಡೋಣ ಎಂದು ಹೇಳಿದ್ದಾರೆ. ರಾಜ್ಯದ ಎಂಪಿಗಳು ಎಲ್ಲಾ ರಾಜಕಾರಣ ಬಿಟ್ಟು ನಮಗೆ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾವು ನೀರನ್ನು ಹೆಚ್ಚು ಬಿಟ್ಟಿಲ್ಲ, ಕಳೆದ ಎರಡು ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ನೀರನ್ನು ಹರಿಸಿದ್ದೇವೆ. ಕಾವೇರಿ ನೀರು ನೀರು ನಿರ್ವಹಣಾ ಸಮಿತಿಯವರು 5 ಸಾವಿರ ಕ್ಯೂಸೆಕ್ಸ್ ಬಿಡುಗಡೆ ಮಾಡಿ ಎಂದು ಹೇಳುತ್ತಾರೆ, ಆದರೆ ಅಲ್ಲಿಗೆ ತಲುಪುವುದು ಕೇವಲ 2 ರಿಂದ 3 ಸಾವಿರ ಕ್ಯೂಸೆಕ್ಸ್ ಮಾತ್ರ. "ಪ್ರಧಾನಿ ಕಚೇರಿಗೆ ಎರಡು ಬಾರಿ ಪತ್ರ ಬರೆದಿದ್ದೇವೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ, ಕಾಯುತ್ತೇವೆ".

ಮಾಜಿ ಪ್ರಧಾನಿ ದೇವೆಗೌಡರು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಕಾನೂನು ಹೋರಾಟ ಮತ್ತು ಉಭಯ ರಾಜ್ಯಗಳ ಸಭೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ ಎನ್ನುವ ಪ್ರಶ್ನೆಗೆ " ಅವರ ಸಲಹೆಯಲ್ಲಿ ಅರ್ಥವಿದೆ, ಗೌರವವಿದೆ. ಅವರ ಸಲಹೆಗಳನ್ನು ಕೇಳುತ್ತೇವೆ. ಮೇಕೆದಾಟು ಯೋಜನೆಯೇ ಇದಕ್ಕೆ ಪರಿಹಾರ. ಸುಪ್ರೀಂ ಕೋರ್ಟ್ ತಾಂತ್ರಿಕ ವಿಚಾರಗಳಲ್ಲಿ ನಾವು ತಲೆಹಾಕುವುದಿಲ್ಲ ಎಂದು ಹೇಳಿದ ಕಾರಣ ಕೇಂದ್ರ ಜಲ ಆಯೋಗದ ಬಳಿ ಹೋಗಬೇಕಾಯಿತು.

ಬೊಮ್ಮಾಯಿ ಅವರು ನೀರು ಬಿಡುಗಡೆ ಮಾಡುವುದು ಬೇಡ ಸುಪ್ರೀಂಕೋರ್ಟ್‌ಗೆ ಹೋಗಿ ಎಂದು ಟ್ಚೀಟ್ ಮಾಡಿರುವ ಬಗ್ಗೆ ಪ್ರಶ್ನೆ ಕೇಳಿದಾಗ "ಹೌದು ಅವರು ಹೇಳುವುದು ಸರಿ ಇದೆ. ನೀರು ಬಿಡದೆ ಇದ್ದರೆ ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡುತ್ತದೆ, ಸಮಿತಿಯ ಮಾತು ಪಾಲಿಸದವರು ಇಲ್ಲಿಗೆ ಬಂದಿದ್ದೀರಿ ಎಂದು ಕೇಳಿದಾಗ ನಮ್ಮ ವಾದ ಬಿದ್ದು ಹೋಗುತ್ತದೆ"

ಬೊಮ್ಮಾಯಿ ಅವರು ಸುಪ್ರೀಂ ಕೋರ್ಟ್ ಇದೆ ಎಂದು ಹೇಳುತ್ತಾರೆ ಅಷ್ಟೇ. ಆದರೆ ನೀರಿನ ಹಂಚಿಕೆಯ ಬಗ್ಗೆಯೇ ಸೂತ್ರ ಹೊಂದಾಣಿಕೆಯಾಗಿಲ್ಲದೆ ಹೇಗೆ ಮುಂದುವರೆಯುವುದು? "ರಾಜ್ಯವೂ ಉಳಿಯ ಬೇಕು ಹಾಗೂ ಆದೇಶ ಉಲ್ಲಂಘನೆ ಆಗದಂತೆಯೂ ನೋಡಿಕೊಳ್ಳಬೇಕು ಈ ನಿಟ್ಟಿನಲ್ಲಿ ಕಾನೂ‌ನು ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ"

"ನೀರನ್ನು ಬಿಡದೆ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದರೆ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸುವ ಕುರಿತು ಯೋಚಿಸುತ್ತೇವೆ" ಎಂದು ಹೇಳಿದರು.

"ಸುಪ್ರೀಂ ಕೋರ್ಟಿನಲ್ಲಿ ಬಲವಾಗಿ ವಾದ ಮಂಡಿಸುತ್ತೇವೆ, ಎರಡೂ ರಾಜ್ಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಹೇಗಿದೆ ಎಂದು ಅವಲೋಕಿಸಿ, ಆನಂತರ ತೀರ್ಪು ನೀಡಿ ಎಂದು ಮನವಿ ಮಾಡುತ್ತೇವೆ.

ನಾನು ಸಹ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿ ವಸ್ತುಸ್ಥಿತಿ ವಿವರಿಸಿದ್ದೇನೆ, ತಮಿಳುನಾಡಿನವರು ಭೇಟಿ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ. ಮಳೆ ಬೀಳದ ಪರಿಣಾಮ ನೀರಿನ ಹರಿವು ಕಡಿಮೆಯಾಗಿದೆ, ಕುಡಿಯುವ ನೀರಿಗೆ ತೊಂದರೆಯಾಗುತ್ತದೆ ಎಂಬುದನ್ನು ಮನವರಿಕೆ ಮಾಡುತ್ತೇವೆ.

*ಕುಡಿಯುವ ನೀರಿಗೆ ಆದ್ಯತೆ*

ಕುಡಿಯುವ ನೀರಿಗೆ ತೊಂದರೆಯಾಗುವುದಿಲ್ಲ, ಇದಕ್ಕೆ ಸರ್ಕಾರದ ಮೊದಲ ಆದ್ಯತೆ, ನಂತರ ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು. ರೈತರು ಸಹ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಎಲ್ಲದಕ್ಕೂ ಕಾದು ನೋಡಬೇಕಿದೆ.

*ಅವಘಡಗಳು ನಡೆಯದಂತೆ ಗಣೇಶೋತ್ಸವ ಆಚರಣೆಗೆ ಸೂಚನೆ*

ಗಣೇಶೋತ್ಸವದ ಸಂದರ್ಭದಲ್ಲಿ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಜರುಗಿದ್ದವು, ಈ ಬಾರಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದೇವೆ.
ಪೊಲೀಸ್ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಾದ ಆದೇಶ ನೀಡಲಾಗಿದೆ. ಇಕ್ಕಟ್ಟಾದ ರಸ್ತೆಯಲ್ಲಿ ಭಾರಿ ಮೆರವಣಿಗೆಗಳಿಗೆ ಅವಕಾಶ ನೀಡದೆ ಸ್ಥಳವಾಕಾಶ ನೋಡಿಕೊಂಡು ಅನುಮತಿ ನೀಡಬೇಕು ಎಂದು ಸೂಚಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ