ದೆಹಲಿ ಕಾರ್ ಸ್ಪೋಟ: ಪೊಲೀಸರು ಯುಎಪಿಎ ಪ್ರಕರಣ ದಾಖಲು.!
ನವದೆಹಲಿ: ದೆಹಲಿ ಕಾರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಯುಎಪಿಎ ಪ್ರಕರಣ ದಾಖಲಿಸಿದ್ದು, ವಾಹನ ಸ್ಫೋಟದ ಬಗ್ಗೆ ವ್ಯಾಪಕ ತನಿಖೆ ಕೈಗೊಳ್ಳಲಾಗಿದೆ.
ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಮತ್ತು ಬಿಎನ್ಎಸ್ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಭಾರತದ ಪ್ರಾಥಮಿಕ ಭಯೋತ್ಪಾದನಾ ನಿಗ್ರಹ ಕಾನೂನು. ಇದು ಸರ್ಕಾರಕ್ಕೆ ಸಂಘಟನೆಗಳನ್ನು ನಿಷೇಧಿಸಲು ಮತ್ತು ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಹೆಸರಿಸಲು ಅವಕಾಶ ನೀಡುತ್ತದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.