LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರು ಮಂದಿ ಉಪನ್ಯಾಸಕರು ಕರ್ತವ್ಯದಿಂದ ವಜಾ

ಬೆಂಗಳೂರು: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ಆರು ಮಂದಿ ಉಪನ್ಯಾಸಕರನ್ನು ವಜಾ ಮಾಡಲಾಗಿದೆ.

ಜ. 8 ರಂದು ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಸಾವಿಗೆ ಕಾಲೇಜಿನ ಉಪನ್ಯಾಸಕರೇ ಕಾರಣ ಎಂದು ಉಪನ್ಯಾಸಕರು ಮತ್ತು ಆಕೆಯ ಸಹಪಾಠಿಗಳು ಆರೋಪಿಸಿದ್ದರು. ಉಪನ್ಯಾಸಕರು ಮಾಡಿದ ಜನಾಂಗೀಯ ನಿಂದನೆ, ಕಿರುಕುಳದಿಂದ ‌ನೊಂದು, ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಈ ಹಿನ್ನೆಲೆ ಕಾಲೇಜಿನ ಪ್ರಾಂಶುಪಾಲರೂ ‌ಸೇರಿದಂತೆ ಒಟ್ಟು ಐವರು ಉಪನ್ಯಾಸಕರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬೆನ್ನಲ್ಲೇ ಕಾಲೇಜಿನ ಆಡಳಿತ ಮಂಡಳಿ ಆರು ಮಂದಿ ಉಪನ್ಯಾಸಕರನ್ನು ಕರ್ತವ್ಯದಿಂದ ವಜಾ ಮಾಡಿದೆ. ಒಎಂಆರ್ ವಿಭಾಗದ ಉಪನ್ಯಾಸಕರಾದ ಡಾ. ಅನಿಮೋಲ್, ಡಾ. ಶಬಾನಾ, ಡಾ. ಫೈಕಾ, ಡಾ. ಸಿಂಧು, ಡಾ. ಸುಶ್ಮಿನಿ, ಡಾ. ಅಲ್ಬಾ ಅವರನ್ನು ವಜಾ ಮಾಡಲಾಗಿದೆ.

ಮೃತ ಯಶಸ್ವಿನಿ ತಾಯಿ ಪರಿಮಳ ತಮ್ಮ ಮಗಳ ಸಾವಿಗೆ ಸಿಗುವ ನ್ಯಾಯ ಎಲ್ಲರಿಗೂ ಸಂದೇಶವಾಗಬೇಕು. ಅವಳು ವೈದ್ಯೆಯಾಗಿ ಸಮಾಜ ಸೇವೆ ಮಾಡಬೇಕು ಎನ್ನುವ ಕನಸು ಹೊತ್ತುಕೊಂಡಿದ್ದಳು. ಅವಳ‌ ಕನಸುಗಳನ್ನು ಹಿಚುಕಿ ಹಾಕಲಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಆಕೆಯ ಸಾವಿಗೆ ಕಾರಣರಾದವರ ವಿರುದ್ಧ ಆಕೆಯ ಸಹಪಾಠಿಗಳು ಪ್ರತಿಭಟನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026