LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷಯರೋಗದ ಔಷಧಿಗಳ ಕೊರತೆಯಾಗದಂತೆ ನಿರ್ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ನಿಕ್ಷಯ ತಂತ್ರಾಂಶ ಡಿವಿಡಿಎಮ್‌ಎಸ್ ನಲ್ಲಿ ಕ್ಷಯರೋಗಿಗಳಿಗೆ ನೀಡುವ ಔಷಧಿಗಳನ್ನು ದಾಖಲಿಸಿ ಕ್ಷಯರೋಗಿಗಳಿಗೆ ನಿಗದಿತ ಸಮಯಕ್ಕೆ ಔಷಧಿಗಳನ್ನು ತಲುಪಿಸಬೇಕು. ಡಿಎಸ್‌ಟಿಬಿ, ಡಿಆರ್‌ಟಿಬಿ ಹಾಗೂ ಟಿಪಿಟಿ ಔಷಧಿಗಳ ದಾಸ್ತಾನುಗಳನ್ನು ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಫಾರ್ಮಸಿ ಅಧಿಕಾರಿಗಳಿಗೆ ಹಾಗೂ ರಾಷ್ಟ್ರಿಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಸಿಬ್ಬಂದಿ ವರ್ಗದವರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಗತ್ಯವಿರುವ ಎಲ್ಲಾ ಔಷಧಿಗಳನ್ನು ಸಮಯಕ್ಕೆ ತಕ್ಕಂತೆ ಲಭ್ಯವಾಗುವಂತೆ ಮಾಡಬೇಕು. ಪ್ರತಿದಿನ/ವಾರದ ಕೋಷ್ಟಕ ಪರಿಶೀಲನೆ ಮಾಡಬೇಕು. ಬೇಡಿಕೆ ಮತ್ತು ಬಳಕೆ ಆಧಾರದ ಮೇಲೆ ಮುಂಚಿತವಾಗಿ ಬೇಡಿಕೆ ಕುರಿತು ಪತ್ರ ಬರೆಯಬೇಕು ಎಂದರು.
ಅವಧಿ ಮುಗಿಯುವ ಔಷಧಿಗಳನ್ನು ಗಮನಿಸಿ, ಮೊದಲು ಬಳಸುವ ವ್ಯವಸ್ಥೆ ಅನುಸರಿಸಬೇಕು. ಔಷಧಿ ಕೊರತೆ ಸಂಭವಿಸುವ ಮುಂಚೆ ಎಚ್ಚರಿಕೆ ವ್ಯವಸ್ಥೆ ಇರಬೇಕು. ಸಮೀಪದ ಆರೋಗ್ಯ ಕೇಂದ್ರಗಳೊಂದಿಗೆ ಸಮನ್ವಯ ಸಾಧಿಸಿ ತುರ್ತು ಪೂರೈಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ದಾಸ್ತಾನು ಕುರಿತು ನಿಯಮಿತ ವರದಿ ಮತ್ತು ಹಂತಗೊಳಿಸಿದ ಮೇಲ್ವಿಚಾರಣೆ ನಡೆಸುವುದು, ಕೋಷ್ಟಕದ ಸ್ಥಿತಿ ಬಗ್ಗೆ ನಿಯಮಿತ ವರದಿ ಸಲ್ಲಿಸಬೇಕು. ನಿಯಮಿತವಾಗಿ ಪರಿಶೀಲನೆ ನಡೆಸಬೇಕು. ಇ-ಔಷಧ ಪೋರ್ಟಲ್‌ನಲ್ಲಿ ಪ್ರತಿ ದಾಸ್ತಾನು ನಿರ್ವಹಣೆ ಮಾಡಲು ತಿಳಿಸಿದರು.
ಅಂತರಾಷ್ಟ್ರಿಯ ಫಾರ್ಮಸಿ ಅಧಿಕಾರಿಗಳ ದಿನಾಚರಣೆ ಅಂಗವಾಗಿ ಎಲ್ಲಾ ಫಾರ್ಮಸಿ ಅಧಿಕಾರಿಗಳಿಗೆ ತಮ್ಮ ಕರ್ತವ್ಯ ಶ್ಲಾಘಿಸಿ ಶುಭ ಕೋರಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಡಾ.ಹರೀಶ್, ಜಿಲ್ಲೆಯ ಎಲ್ಲಾ ಫಾರ್ಮಸಿ ಅಧಿಕಾರಿಗಳು, ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು