LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ರಮ ಆಟೋಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ದೇಶನ:

 

 ಚಿತ್ರದುರ್ಗ: ಪರವಾನಿಗೆ ಪಡೆಯದೇ ಹಾಗೂ ನೊಂದಣಿ ಇಲ್ಲದೇ ಸಂಚರಿಸುತ್ತಿರುವ ಆಟೋ ರಿಕ್ಷಾಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. 20 ವರ್ಷಗಳ ಮೇಲ್ಪಟ್ಟ ಮೈನ್ಸ್ ಲಾರಿಗಳು ಓಡಾಟ ಈಗಾಗಲೇ ನಿರ್ಬಂಧಿಸಲಾಗಿದ್ದು, ಒಂದು ವೇಳೆ ಇಂತಹ ಲಾರಿಗಳು ಸಂಚಾರ ಮಾಡಿದರೆ ಅಂತಹ ವಾಹನಗಳನ್ನು ಸೀಜ್ ಮಾಡಬೇಕು. ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಟ್ಯಾಕ್ಟರ್-ಟ್ರಾö್ಯಲಿಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಪ್ರಸ್ತುತ 7,993 ಆಟೋಗಳಿಗೆ ಅಧಿಕೃತ ಪರವಾನಗಿ ನೀಡಲಾಗಿದೆ. ಆದರೆ, ಒಟ್ಟು ನೋಂದಾಯಿತ ಆಟೋಗಳ ಸಂಖ್ಯೆ 10,223 ರಷ್ಟಿದ್ದು, ಸುಮಾರು 2,230 ಆಟೋಗಳು ಪರವಾನಗಿ ಇಲ್ಲದೆ ರಸ್ತೆಗಿಳಿಯುತ್ತಿರುವುದು ಗಮನಕ್ಕೆ ಬಂದಿದೆ. ಪರವಾನಗಿ ಇಲ್ಲದ ಆಟೋಗಳ ಪೈಕಿ ಸುಮಾರು 1,000 ವಾಹನಗಳು ಬೇರೆಡೆಗೆ ಸ್ಥಳಾಂತರವಾಗಿರಬಹುದು ಅಥವಾ ನೋಂದಣಿ ರದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದಾಗ್ಯೂ, ಇನ್ನುಳಿದ ಒಂದು ಸಾವಿರಕ್ಕೂ ಅಧಿಕ ಆಟೋಗಳು ಕಾನೂನುಬಾಹಿರವಾಗಿ ಸಂಚರಿಸುತ್ತಿದ್ದು, ಇವುಗಳ ವಿರುದ್ಧ ತಕ್ಷಣವೇ ಜಂಟಿ ಕಾರ್ಯಾಚರಣೆ ನಡೆಸಲಾಗುವುದು. ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಟ್ಯಾಕ್ಟರ್‌ಗಳಿದ್ದು, ಆಂದೋಲದನದ ಮೂಲಕ 2500 ಟ್ಯಾಕ್ಟರ್‌ಗಳಿಗೆ ಮಾತ್ರ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿದ್ದು, ಎಲ್ಲ ಟ್ಯಾಕ್ಟರ್‌ಗಳಿಗೆ ರೇಡಿಯಂ ಸ್ಟಿಕ್ಕರ್ ಅಳವಡಿಕೆ ಆಂದೋಲನ ಮುಂದುವರಿಸುವುದಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ ಸಭೆಯಲ್ಲಿ ಮಾಹಿತಿ ನೀಡಿದರು.

ಇದೇ ವೇಳೆ ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ, ರಬ್ಬರ್ ಹಂಪ್ಸ್, ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026