LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಂಬಾಕು ನಿಯಂತ್ರಣ ದಾಳಿ ಹೆಚ್ಚಿಸಲು ತಹಶೀಲ್ದಾರ್ ನಿರ್ದೇಶನ

ಚಿತ್ರದುರ್ಗ  ಮಾರ್ಚ್.21:

ತಂಬಾಕು ನಿಯಂತ್ರಣ ಮಾಡಲು ಹೆಚ್ಚು ಅನಿರೀಕ್ಷಿತ ದಾಳಿ ನಡೆಸುವಂತೆ ಹೊಸದುರ್ಗ ತಹಶೀಲ್ದಾರ್ ತಿರುಪತಿ ಪಾಟೀಲ್ ನಿರ್ದೇಶನ ನೀಡಿದರು.

ಮಾರ್ಚ್ 20 ರಂದು ಹೊಸದುರ್ಗ ತಹಶೀಲ್ದಾರ್‌ರವರ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಕೊಟ್ಪಾ ಕಾಯ್ದೆ ಅನುಷ್ಠಾನ ಕುರಿತಂತೆ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಮಟ್ಟದಲ್ಲಿ ತಂಬಾಕು ದಾಳಿಗಳನ್ನು ಕೈಗೊಳ್ಳಬೇಕು. ಪ್ರತಿ ದಿನ ಕಸ ವಿಲೇವಾರಿ ವಾಹನಗಳಲ್ಲಿ ತಂಬಾಕು ನಿಯಂತ್ರಣ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಡಿಯೋ ಜಿಂಗಲ್ಸ್ಗಳ ಮೂಲಕ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು. ತಂಬಾಕು ಮುಕ್ತ ಶಾಲೆಗಳನ್ನು ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಲು ಮುಖ್ಯೋಪಾಧ್ಯಾಯರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ನಿರ್ದೇಶನ ನೀಡಬೇಕು. ತಾಲ್ಲೂಕಿನಾದ್ಯಂತ ತಂಬಾಕು ಕಾರ್ಯಾಚರಣೆ ನಡೆಸುವಾಗ ಪೊಲೀಸ್ ಇಲಾಖೆಯವರು ಹೆಚ್ಚಿನ ಸಹಕಾರ ನೀಡುವಂತೆ ತಹಶೀಲ್ದಾರರು ತಿರುಪತಿ ಪಾಟೀಲ್ ಸೂಚಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಬಿ.ಎಂ.ಪ್ರಭುದೇವ ಮಾತನಾಡಿ ಕೋಟ್ಪಾ-2003 ರ ಕಾಯ್ದೆಯ ಅಡಿಯಲ್ಲಿ 2024-25ನೇ ಸಾಲಿನಲ್ಲಿ ಹೊಸದುರ್ಗ ತಾಲ್ಲೂಕಿನಲ್ಲಿ ಏಪ್ರಿಲ್-2024 ರಿಂದ ಫೆಬ್ರವರಿ-2025 ರವರೆಗೆ 9 ತಂಬಾಕು ದಾಳಿಗಳನ್ನು ನಡೆಸಿದ್ದು, ಸೆಕ್ಷನ್-4, 6ಎ & 6ಬಿ ಅಡಿಯಲ್ಲಿ ಒಟ್ಟು 187 ಕೇಸುಗಳನ್ನು ದಾಖಲಿಸಿ ರೂ. 14,750/- ದಂಡವನ್ನು ಸಂಗ್ರಹಿಸಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಜಂಟಿ ಖಾತೆಗೆ ಕಟ್ಟಿರುವ ಬಗ್ಗೆ ಮಾಹಿತಿ ನೀಡಿದರು.

ತಂಬಾಕು ಮಾರಾಟ ಮಾಡುವ ಅಂಗಡಿಗಳಿಗೆ ಉದ್ದಿಮೆ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಪುರಸಭೆಯಲ್ಲಿ ರೂ. 500/- ಶುಲ್ಕವನ್ನು ಪಡೆದುಕೊಂಡು ಆರೋಗ್ಯ ನಿರೀಕ್ಷಣಾಧಿಕಾರಿಗಳು ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಸಲಹೆಗಾರ ಪ್ರಭುದೇವ್ ತಿಳಿಸಿದರು.

ತಾ.ಪಂ.ಕಾರ್ಯನಿರ್ವಹಕಾಧಿಕಾರಿ ಸುನೀಲ್ ಕುಮಾರ್ , ಕ್ಷೇತ್ರಶಿಕ್ಷಣಾಧಿಕಾರಿ ಸೈಯದ್ ಮೋಸಿನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಭಿಲಾಷ , ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದರಾಮಪ್ಪ ಸೇರಿದಂತೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ದಂತ ಆರೋಗ್ಯಾಧಿಕಾರಿ, ಆರ್‌ಬಿಎಸ್‌ಕೆ ವೈದ್ಯಾಧಿಕಾರಿಗಳು, ಸಮಾಜ ಕಾರ್ಯಕರ್ತರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳು, ಜಿ.ತಂ.ನಿ.ಕೋಶ, ಜಿಲ್ಲಾ ಸರ್ವೇಕ್ಷಣ ಘಟಕದ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು