LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಂತ ವೆಚ್ಚದಲ್ಲಿ ಅಂಗನವಾಡಿಗಳಿಗೆ ಹಣ್ಣಿನ ಗಿಡಗಳ ವಿತರಣೆ


ಕಾರವಾರ. ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉತ್ತಮ ಗುಣಮಟ್ಟದ ಹಣ್ಣು ಹಾಗೂ ತೆಂಗಿನಕಾಯಿ ಸಿಗಲಿ ಎಂಬ ಉದ್ದೇಶದಿಂದ ಹಾಗೂ ಪರಿಸರ ಕಾಳಜಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ್ ತಮ್ಮ ಸ್ವಂತ ವೆಚ್ಚದಲ್ಲಿ ಮಾವಿನ ಗಿಡ ಮತ್ತು ತೆಂಗಿನ ಗಿಡಗಳನ್ನು ವಿತರಿಸಿದ್ದಾರೆ.



ಭಾನುವಾರ ಅಂಕೋಲಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ 35 ಅಂಗನವಾಡಿಗಳಿಗೆ ತೆಂಗಿನ ಮತ್ತು ಮಾವಿನ ಗಿಡಗಳನ್ನು ವಿತರಿಸಿದರು.

ಅಂಗನವಾಡಿಯ ಮಕ್ಕಳಿಗಾಗಿಯೇ ವಿಶೇಷವಾಗಿ ಉತ್ತಮ ಗುಣಮಟ್ಟದ ಮಾವಿನ ಗಿಡಗಳನ್ನು ಹಳಿಯಾಳದಿಂದ ಹಾಗೂ ಉತ್ತಮ ಗುಣಮಟ್ಟದ ತೆಂಗಿನ ಗಿಡಗಳನ್ನು ಅಂಕೋಲಾದಿ0ದ ಸ್ವಂತ ವೆಚ್ಚದಲ್ಲಿ ಖರೀದಿಸಿ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರಿಗೆ ವಿತರಿಸಿದ ಅವರು, ಈ ಗಿಡಗಳನ್ನು ಹೆಚ್ಚಿನ ಕಾಳಜಿ ವಹಿಸಿ ಆರೈಕೆ ಮಾಡಿ, ಇವುಗಳ ಫಲಗಳನ್ನು ಮಕ್ಕಳಿಗೆ ಒದಗಿಸಬೇಕು ಎಂದು ಕೋರಿದರು.



ಈ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಪಾಟೀಲ್ ಗೌಡ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿನೋದ್ ಅಣ್ವೇಕರ್ ಅಧ್ಯಕ್ಷತೆ ವಹಿಸಿದ್ದರು.



ಅಂಕೋಲಾ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ ಜಿ ಭಟ್, ಅಂಕೋಲಾ ತಾಲೂಕಿನ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತರು ಹಾಗೂ ಸಹಾಯಕರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು