LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ವತಿಯಿಂದ ಶಾಲೆಗಳಲ್ಲಿ ‘ಸಂಸ್ಕಾರ ನೋಟ್ ಬುಕ್ ವಿತರಣೆ

ಬೆಂಗಳೂರು : ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ವತಿಯಿಂದ “ಸಮಾಜ ಸಹಾಯ" ಅಭಿಯಾನದ ಅಡಿಯಲ್ಲಿ ಬೆಂಗಳೂರಿನ ಬನಶಂಕರಿಯಲ್ಲಿರುವ ಸ್ವಾಮಿ ವಿವೇಕಾನಂದ ವಿದ್ಯಾಶಾಲಾ (ಪ್ರೌಢಶಾಲೆ)ಯಲ್ಲಿ ‘ಸಂಸ್ಕಾರ ವಹಿ’ ಅಂದರೆ ನೋಟ್‌ಬುಕ್ ಗಳನ್ನು ವಿತರಿಸಲಾಯಿತು. 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಂಡರು ಎಂದು ಬಾಲಾಜಿ ಧರ್ಮಜಾಗೃತಿ ಸಮಿತಿ ಅಧ್ಯಕ್ಷ ವಿನೋದ್ ಕಾಮತ್ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿಯ ಕಾರ್ಯಕರ್ತರಾದ ಶ್ರೀಮತಿ ಧನಲಕ್ಷ್ಮೀ ವಿ.ಕೆ ಮಾತನಾಡಿ, ಸಂಸ್ಕಾರ ವಹಿಗಳ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ಮಕ್ಕಳಿಗೆ ಪ್ರಭೋದನೆ ನೀಡಿದರು. ‘ಇತ್ತೀಚಿನ ದಿನಗಳಲ್ಲಿ ಮಾರ್ಕೆಟ್‌ನಲ್ಲಿ ಸಿಗುವ ನೋಟ್ ಬುಕ್‌ಗಳ ಮುಖಪುಟದಲ್ಲಿ ಸಿನೆಮಾ ತಾರೆಯರ ಹಾಗೂ ಅರೆಬರೆ ಬಟ್ಟೆ ಧರಿಸಿದ ನಾನಾ ರೀತಿಯ ಚಿತ್ರ ಇರುವ ನೋಟ್‌ಬುಕ್ ಗಳನ್ನು ವಿದ್ಯಾರ್ಥಿಗಳು ಖರೀದಿಸಬೇಕಾಗುತ್ತದೆ. ಇಂತಹ ಸಂಸ್ಕಾರ ಹೀನ ಚಿತ್ರಗಳನ್ನು ನೋಡುತ್ತ ಅವರಲ್ಲಿ ನೈತಿಕತೆಯ ಬದಲು ಕೆಟ್ಟ ಸ್ವಭಾವಗಳ ಸಂಸ್ಕಾರವಾಗುವ ಸಂಭವವಿರುತ್ತದೆ. ಬಾಲ್ಯದಲ್ಲಿಯೇ ಸುಸಂಸ್ಕಾರಗಳ ಅಭ್ಯಾಸವಾದರೆ ಅವರ ಮುಂದಿನ ಜೀವನ ಆದರ್ಶ ಮತ್ತು ಉಜ್ವಲವಾಗುತ್ತದೆ. ಇಂದಿನ ಮಕ್ಕಳು ನಾಳಿನ ಪ್ರಜೆಗಳು, ಅದಕ್ಕಾಗಿ ಪ್ರತಿಯೊಬ್ಬರ ಭವಿಷ್ಯ ಆದರ್ಶವಾಗಲು ಈ ಸಂಸ್ಕಾರ ವಹಿಗಳನ್ನು ವಿತರಿಸಲಾಗುತ್ತಿದೆ’ ಎಂದರು.

ಅವರು ನೋಟ್ ಬುಕ್‌ಗಳ ವಿಶೇಷತೆಯನ್ನು ವಿವರಿಸುತ್ತಾ, ‘ಸಂಸ್ಕಾರ ವಹಿಯ ಮುಖಪುಟ ಹಾಗೂ ಹಿಂಬದಿಯ ಪುಟದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಷ್ಟ್ರ ಪುರುಷರ, ಒಳ್ಳೆಯ ರಾಜ್ಯಾಡಳಿತ ನಡೆಸಿ ಪ್ರಜೆಗಳ ಹಿತಕ್ಕಾಗಿಯೇ ದುಡಿದ ರಾಜ-ಮಹಾರಾಜರ ಆದರ್ಶಗಳು, ಒಳಗಿನ ಪುಟದಲ್ಲಿ ಸುಸಂಸ್ಕಾರ, ನೈತಿಕತೆಯ ಬಗ್ಗೆ ವಿಷಯ ಒಳಗೊಂಡಿರುತ್ತದೆ. ಅದನ್ನು ಓದಿ ತಿಳಿದುಕೊಂಡು ಜೀವನದಲ್ಲಿ ಆಳವಡಿಸಿಕೊಂಡರೆ ಮಕ್ಕಳು ‘ಆದರ್ಶ ವಿದ್ಯಾರ್ಥಿ’ಯಾಗಿ ರೂಪುಗೊಳ್ಳುವುದರಲ್ಲಿ ಸಂದೇಹವಿಲ್ಲ, ಇದರಿಂದ ಮುಂದೆ ಅವರು ‘ಆದರ್ಶ ರಾಷ್ಟ್ರ’ ಕಟ್ಟಲು ಸಾಧ್ಯವಾಗುವುದು’ ಎಂದರು. ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಕರ್ತರಾದ ಸೌ. ಕೋಮಲ ಕಾಶಿ, ಶ್ರೀಮತಿ ಪುಣ್ಯವತಿ , ಸೌ. ಜಯಂತಿ, ಶಾಲೆಯ ಮುಖ್ಯೋಪಾಧ್ಯಾಯರಾದ ಕೆ. ಜಿ. ನಾಗರಾಜ್ ನಾಯ್ಕ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

 

ತಮ್ಮ ವಿಶ್ವಾಸಿ

ಬಾಲಾಜಿ ಧರ್ಮಜಾಗೃತಿ ಸಮಿತಿ ಅಧ್ಯಕ್ಷ ವಿನೋದ್ ಕಾಮತ್

ಶ್ರೀ ಬಾಲಾಜಿ ಧರ್ಮಜಾಗೃತಿ ಸಮಿತಿ

ಸಂಪರ್ಕ : 9342599299
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳು