Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗುಡುಗು-ಸಿಡಿಲು ಸಹಿತ ಭಾರೀ ಮಳೆ: ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ- ಜಿಲ್ಲಾಧಿಕಾರಿ

ಚಂದ್ರವಳ್ಳಿ ನ್ಯೂಸ್, ತುಮಕೂರು:
ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ ೫ ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.


ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ :
ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು-ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ  ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ.

ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. 

ಸಾರ್ವಜನಿಕರಲ್ಲಿ ಮನವಿ :
ನದಿ/ಹಳ್ಳದ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ/ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದುಮತ್ತಿತರೆ ಚಟುವಟಿಕೆಗಳನ್ನು ನಡೆಸಬಾರದು.  ನದಿ/ಹಳ್ಳ/ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ/ಸೆಲ್ಫಿಗಳನ್ನು ತೆಗೆಯಬಾರದು.

ಮಕ್ಕಳು ಮತ್ತು ವಯೋವೃದ್ಧರನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ತೆರಳದಂತೆ ಎಚ್ಚರಿಕೆ ವಹಿಸಬೇಕು.  ಗುಡುಗು-ಮಿಂಚು, ಸಿಡಿಲು ಬಡಿಯುವ ಸಂದರ್ಭದಲ್ಲಿ ಮನೆಯ ಹೊರಗಡೆ ಇರುವವರು ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಿ ರಕ್ಷಣೆ ಪಡೆದುಕೊಳ್ಳಬೇಕು.

ಮರ, ವಿದ್ಯುತ್ ಕಂಬ, ಜಲಾಶಯ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ,

ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನ?ವಾಗಿದ್ದಲ್ಲಿ, ಇತರೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಾದ ೭೩೦೪೯೭೫೫೧೯,   ೦೮೧೬-೨೨೧೩೪೦೦, ೧೫೫೩೦೪ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ