LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ... ಮತದಾರರ ಪಟ್ಟಿ ಸೇರ್ಪಡೆ: ವರ್ಷಕ್ಕೆ ನಾಲ್ಕು ಅರ್ಹತಾ ದಿನಾಂಕ ನಿಗದಿ

ಚಿತ್ರದುರ್ಗ()ಮಾರ್ಚ್18:
ಭಾರತ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 14ಕ್ಕೆ ತಿದ್ದುಪಡಿ ಮಾಡಿ ಮತದಾರರ ನೋಂದಣಿ ನಿಯಮಗಳು 1960ಕ್ಕೆ ಅನುಗುಣವಾಗಿ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ವರ್ಷಕ್ಕೆ ನಾಲ್ಕು ಅರ್ಹತಾ ದಿನಾಂಕಗಳನ್ನು ನೀಡಿ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನೋಂದಾಯಿತ ಹಾಗೂ ಮಾನ್ಯತೆ ಪಡೆದ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವರ್ಷದಲ್ಲಿ ನಾಲ್ಕು ದಿನ ಅಂದರೆ, 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಹಾಗೂ 1ನೇ ಅಕ್ಟೋಬರ್‍ಗೆ 18 ವರ್ಷ ಪೂರ್ಣಗೊಳ್ಳುವವರು ಹಾಗೂ ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟು ಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನಸಭಾ ಕ್ಷೇತ್ರದ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ ನಿಗದಿಪಡಿಸಿರುವ ನಮೂನೆಗಳಲ್ಲಿ ಅರ್ಜಿ ಭರ್ತಿ ಮಾಡಿ, ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನಮೂನೆ-6 ಹೊಸದಾಗಿ ಹೆಸರುಗಳನ್ನು ಸೇರಿಸುವುದಕ್ಕೆ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ನಮೂನೆ-7 ಹೆಸರುಗಳನ್ನು ಕೈಬಿಡಲು ಮತ್ತು ಆಕ್ಷೇಪಣೆ ಅರ್ಜಿ, ನಮೂನೆ-8 ಮತದಾರರ ಪಟ್ಟಿಯಲ್ಲಿ ಮಾಹಿತಿ ತಪ್ಪಾಗಿದ್ದಲ್ಲಿ ತಿದ್ದುಪಡಿ ಬಗ್ಗೆ ಹಾಗೂ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ, ಎಪಿಕ್ ಕಾರ್ಡ್ ಬದಲಾಯಿಸಲು, ವಿಕಲಚೇತನ ಮತದಾರರನ್ನು ಗುರುತು ಮಾಡಲು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದರು.
ಮತದಾರರು ತಪ್ಪದೇ ತಮ್ಮ ಮತದಾನ ಕೇಂದ್ರಗಳಲ್ಲಿ ನೇಮಕಗೊಂಡಿರುವ ನಿರ್ಧಿಷ್ಠಾಧಿಕಾರಿಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜನವರಿ 06ರಂದು ಪ್ರಚುರ ಪಡಿಸಿದ ಅಂತಿಮ ಮತದಾರರ ಪಟ್ಟಿಯನ್ನು ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯಿತಿ ಕಚೇರಿ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ www.ceokarnataka.kar.nic.in , https://chitradurga.nic.in ವೆಬ್‍ಸೈಟ್‍ನಲ್ಲಿಯೂ ಸಹ ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ವೋಟರ್ ಹೆಲ್ಪ್‍ಲೈನ್ ನಲ್ಲಿ ಆನ್‍ಲೈನ್ ಮೂಲಕವೂ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ವಯಸ್ಸಿನ ಬಗ್ಗೆ ದಾಖಲೆಗಾಗಿ ಸಕ್ಷಮ ಸ್ಥಳೀಯ ಸಂಸ್ಥೆ, ಪುರಸಭಾ ಪ್ರಾಧಿಕಾರ, ಜನನ ಮತ್ತು ಮರಣಗಳ ರಿಜಿಸ್ಟ್ರಾರರು ನೀಡಿದ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾನ್‍ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಜನ್ಮ ದಿನಾಂಕ ಹೊಂದಿದ ಸಿಬಿಎಸ್‍ಸಿ, ಐಸಿಎಸ್‍ಇ, ರಾಜ್ಯ ಶಿಕ್ಷಣ ಮಂಡಳಿಗಳು ನೀಡಿದ 10ನೇ ತರಗತಿ ಅಥವಾ 12ನೇ ತರಗತಿಯ ಪ್ರಮಾಣ ಪತ್ರಗಳನ್ನು ವಯಸ್ಸಿನ ದಾಖಲೆಗಾಗಿ ನೀಡಬಹುದಾಗಿದೆ.
ವಿಳಾಸದ ಬಗ್ಗೆ ದಾಖಲೆಗಾಗಿ ಕನಿಷ್ಟ 1 ವರ್ಷದ ನೀರು, ವಿದ್ಯುತ್‍ಚ್ಛಕ್ತಿ, ಗ್ಯಾಸ್ ಸಂಪರ್ಕದ ಬಿಲ್, ಆಧಾರ್ ಕಾರ್ಡ್, ರಾಷ್ಟ್ರೀಕೃತ, ಶೆಡ್ಯೂಲ್ಡ್ ಬ್ಯಾಂಕ್, ಅಂಚೆ ಕಚೇರಿಯ ಚಾಲ್ತಿಯಲ್ಲಿರುವ ಪಾಸ್‍ಬುಕ್, ಪಾಸ್‍ಪೋರ್ಟ್, ಕಿಸಾನ್ ವಹಿಯನ್ನೊಳಗೊಂಡ ಕಂದಾಯ ಇಲಾಖೆಯ ಭೂ ಮಾಲೀಕತ್ವದ ದಾಖಲೆಗಳು, ನೋಂದಾಯಿತ ಬಾಡಿಗೆ ಭೋಗ್ಯ ಪತ್ರ, ನೋಂದಾಯಿತ ಕ್ರಯ ಪತ್ರ ವಿಳಾಸದ ಬಗ್ಗೆ ದಾಖಲೆಯನ್ನು ನೀಡಬಹುದಾಗಿದೆ ಎಂದು ತಿಳಿಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಪ್ರಜಾಪ್ರಾತಿನಿಧ್ಯ ಅಧಿನಿಯಮ1950, 1951 ಮತ್ತು ಮತದಾರರ ನೋಂದಣಿ ನಿಯಮಗಳು 1960 ಹಾಗೂ ಚುನಾವಣಾ ನಡವಳಿಗಳ ನಿಯಮಗಳು 1961 ಕುರಿತು, ಭಾರತ ಸಂವಿಧಾನ 15ನೇ ಭಾಗ 324 ರಿಂದ 329ರ ಅರ್ಟಿಕಲ್ ಬಗ್ಗೆ ತಿಳಿಸಲಾಯಿತು. ಭಾರತ ಚುನಾವಣಾ ಆಯೋಗ ಹೊರಡಿಸಿರುವ ಸುತ್ತೋಲೆಗಳು, ನಿಯಮ ಹಾಗೂ ಚೌಕಟ್ಟುಗಳ ಬಗ್ಗೆ ಸಂಪೂರ್ಣವಾಗಿ ಸಭೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಲಾಯಿತು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆ ಎಲ್ಲ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಏಜೆಂಟ್‍ರನ್ನು ಪಕ್ಷವಾರು ನೇಮಕಾತಿ ಮಾಡಬೇಕು, ನೇಮಕಾತಿ ಮಾಡಿರುವ ಮತಗಟ್ಟೆ ಏಜೆಂಟರವರ ಮಾಹಿತಿಯನ್ನು ಮತಗಟ್ಟೆವಾರು ಸಲ್ಲಿಸುವಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹಬೂಬ್ ಜಿಲಾನಿ ಖುರೇಷಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಟಿ.ಯಶವಂತ್ ಕುಮಾರ್, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಸಿಪಿಐ(ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್ ಸೇರಿದಂತೆ ಚುನಾವಣಾ ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಚುನಾವಣಾ ಶಾಖೆ ಸಿಬ್ಬಂದಿ ಇದ್ದರು.

==========
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು