LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ರಾಯಚೂರು,ಮೇ.28(ಕ.ವಾ):- ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ಕ್ಕೆ ಸಂಬAಧಿಸಿದAತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಮೇ.೨೮ರಂದು ನಗರದ ಎಸ್.ಆರ್.ಪಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿರುವ ಭದ್ರತಾ ಕೊಠಡಿಗಳು ಹಾಗೂ ಮತಎಣಿಕೆ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೇ.೭ರಂದು ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಜೂ.೪ರಂದು ಮತೆಣಿಕೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತಎಣಿಕೆ ಕೆಂದ್ರಕ್ಕೆ ಭೇಟಿ ನೀಡಿದ ಅವರು, ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸರಿಯಾದ ರೀತಿಯಲ್ಲಿ ನೀಡಿಕೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಮತ ಎಣಿಕೆ ಸಿಬ್ಬಂದಿ, ರಾಜಕೀಯ ಪಕ್ಷಗಳ ಏಜಂಟರುಗಳಿಗೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಮತ ಎಣಿಕೆ ಕೇಂದ್ರದ ಸುತ್ತಲೂ ಸ್ವಚ್ಛತೆಯನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ನಂತರ ಮಾದ್ಯಮ ಕೊಠಡಿಗೆ ಭೇಟಿ ನೀಡಿ, ಮತ ಎಣಿಕೆ ವರದಿಗಾಗಿ ಬರುವ ಮಾದ್ಯಮದವರಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಿಕೊಳ್ಳಬೇಕು. ಮತ್ತು ಮಾದ್ಯಮ ಕೊಠಡಿಯಲ್ಲಿ ಎಲ್.ಇ.ಡಿ ಪರದೆಗಳು ಹಾಗೂ ಅಂತರ್ಜಾಲದ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಮಾಡಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು