LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆ ಮಂಟಪಕ್ಕೆ ಇಡಿ ದಾಳಿ: ಬೆಚ್ಚಿಬಿದ್ದ ಮದುಮಗ ಮಾಡಿದ್ದೇನು ಗೊತ್ತೇ?

ಮದುವೆ ಮಂಟಪಕ್ಕೆ ಇಡಿ ದಾಳಿ ನಡೆಸಿದ ಕುತೂಹಲಕಾರಿ ಘಟನೆ ವರದಿಯಾಗಿದೆ.

ರಾಜಸ್ಥಾನದ ಪ್ರಸಿದ್ಧ ಫೇರ್‌ಮಾಂಟ್ ಹೋಟೆಲ್‌ನಲ್ಲಿ ಸೌರಭ್ ಅಹುಜಾ ಎನ್ನುವವರ ವಿವಾಹ ಭಾರೀ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ಸೌರಭ್ ಅಹುಜಾ ಮಹಾದೇವ್ ಬೆಟ್ಟಿಂಗ್ ಆಪ್ ಹಗರಣದ ಆರೋಪಿ. 15000 ಕೋಟಿ ರೂಪಾಯಿಗಳ ಮಹಾದೇವ್ ಬೆಟ್ಟಿಂಗ್ ಆಪ್ ಹಗರಣಕ್ಕೆ ಸಂಬಂಧಪಟ್ಟಂತೆ ಈ ದಾಳಿ ಮಾಡಲಾಗಿತ್ತು.

ಇಡಿ ಅಧಿಕಾರಿಗಳಿಗೆ ಮದುವೆ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದಿದ್ದು, ಸಪ್ತಪದಿ ತುಳಿಯುವ ಮುನ್ನವೇ ಬಂಧನಕ್ಕೆ ಬರುತ್ತಿರುವ ಸೂಚನೆ ದೊರಕಿದ ಸೌರಭ್ ಮಂಟಪದಿಂದಲೇ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಮಂಟಪಕ್ಕೆ ಬಂದ ಅಧಿಕಾರಿಗಳು ಹಗರಣಕ್ಕೆ ಸಂಬಂಧಪಟ್ಟಂತೆ ಪ್ರಣವೇಂದ್ರ ಹಾಗೂ ಇತರ ಇಬ್ಬರನ್ನು ಬಂಧನ ಮಾಡಿದ್ದಾರೆ.



ಮೂವರ ಬಂಧನ:

ಮಂಟಪಕ್ಕೆ ಸೌರಭ್ ಬಂಧನಕ್ಕೆ ಬಂದಿದ್ದ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿದ ಪ್ರಣವೇಂದ್ರ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ಇದಲ್ಲದೆ ಸೌರಭ್ ಎಲ್ಲಿದ್ದಾನೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲು ವಧು, ಅವರ ಕುಟುಂಬ ಸದಸ್ಯರು ಮತ್ತು ಇತರ ನಿಕಟ ಸಂಬಂಧಿಗಳನ್ನು ಸಹ ಪ್ರಶ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

ಸೌರಭ್ ಬಂಧನಕ್ಕೆ ಜೈಪುರಕ್ಕೆ ಬಂದಿದ್ದ ಇ.ಡಿ:

ಮಹಾದೇವ್‌ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಅಕ್ರಮ ವಹಿವಾಟುಗಳನ್ನು ನಿರ್ವಹಿಸಿದ ಆರೋಪ ಸೌರಭ್ ಮೇಲಿದೆ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಸ್ವಲ್ಪ ಸಮಯದಿಂದ ಸೌರಬ್‌ನನ್ನು ಟ್ರ್ಯಾಕ್ ಮಾಡುತ್ತಿತ್ತು. ಮದುವೆ ವೇಳೆಯೇ ಅವನನ್ನು ಬಂಧಿಸುವ ನಿಟ್ಟಿನಲ್ಲಿ ರಾಯ್‌ಪುರದಿಂದ ಜೈಪುರಕ್ಕೆ ಒಂದು ತಂಡವನ್ನು ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.



ಮಹಾದೇವ್ ಬೆಟ್ಟಿಂಗ್ ಆ್ಯಪ್ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಖ್ಯಾತನಾಮರು ಸೇರಿ ಹಲವರ ಹೆಸರು ಕೂಡ ಹರಿದಾಡಿದೆ. ಬಾಲಿವುಡ್‌ನಲ್ಲೂ ಈ ಸಂಬಂಧ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಈ ಹಿಂದೆ ನಟ ಮತ್ತು ಫಿಟೈಸ್ ಪ್ರಭಾವಿ ಸಾಹಿಲ್ ಖಾನ್ ನನ್ನು ಈ ಹಗರಣ ಸಂಬಂಧ ಬಂಧಿಸಲಾಗಿತ್ತು.

ಸದ್ಯ ಜೈಪುರದಲ್ಲಿ ಬಂಧಿತರಾಗಿರುವ ಅರೋಪಿಗಳನ್ನು ವಿಚಾರಣೆ ನಡೆಸಿ, ಸೌರಬ್ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವರದಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026