Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಾಲೆಗೆ ಸಾಮಗ್ರಿ ದೇಣಿಗೆ; ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡಿದ ಪ್ರಯತ್ನ ಸಂಘಟನೆ

ಬೆಳಗಾವಿ: ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಪ್ರಯತ್ನ ಸ್ವಯಂ ಸೇವಾ ಸಂಘಟನೆಯಿಂದ ಪ್ರಭುನಗರದ ಸರ್ಕಾರಿ ಶಾಲೆಗೆ ವಿವಿಧ ಉಪಯೋಗಿ ಸಾಮಗ್ರಿಗಳನ್ನು ದೇಣಿಗೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶಾಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಖುರ್ಚಿಗಳು, ಧ್ವನಿವರ್ಧಕ, ನೀರಿನ ಡ್ರಮ್ ಸೇರಿದಂತೆ ಅಗತ್ಯವಾದ ಹಲವು ವಸ್ತುಗಳನ್ನು ಸಂಘಟನೆಯಿಂದ ಒದಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷೆ ಶಾಂತಾ ಆಚಾರ್ಯ ಅವರು, “ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸ್ಥಾನಗಳನ್ನು ಪಡೆಯಬೇಕು. ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವೇ ಶಾಶ್ವತ ಸಂಪತ್ತು. ಶಿಕ್ಷಣವಿದ್ದರೆ ವ್ಯಕ್ತಿಯ ಭವಿಷ್ಯ ಮಾತ್ರವಲ್ಲ, ಸಮಾಜದ ಭವಿಷ್ಯವೂ ಪ್ರಕಾಶಮಾನವಾಗುತ್ತದೆ,” ಎಂದು ಹೇಳಿದರು. ಸಮಾಜದ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯದ ಮಟ್ಟಿಗೆ ಶಿಕ್ಷಣ ಕ್ಷೇತ್ರಕ್ಕೆ ಕೈಜೋಡಿಸಿದರೆ ದೇಶದ ಅಭಿವೃದ್ಧಿ ವೇಗವಾಗುತ್ತದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.

ಶಿಕ್ಷಕಿ ಶುಭಾ ಭಟ್ ಅವರು ಮಾತನಾಡಿ, “ಪ್ರಯತ್ನ ಸಂಘಟನೆ ಕಳೆದ ಒಂದೂವರೆ ದಶಕಗಳಿಂದ ನಿಸ್ವಾರ್ಥ ಸೇವಾ ಮನೋಭಾವದಿಂದ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಇಂತಹ ಸಂಘಟನೆಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ದಾರಿಯನ್ನೊಡ್ಡುತ್ತವೆ. ಇದರ ಸದಸ್ಯರ ಸೇವಾಭಾವ ಮತ್ತು ನಿಷ್ಠೆ ಶ್ಲಾಘನೀಯ,” ಎಂದು ಅಭಿಪ್ರಾಯಪಟ್ಟರು.
ಶಾಲೆಯ ಮುಖ್ಯಾಧ್ಯಾಪಕ ಬಸವರಾಜ ಹಂಜಿ ಅವರು ಸಂಘಟನೆಯ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಿ, ವಿದ್ಯಾರ್ಥಿಗಳ ಕಲಿಕೆ ವಾತಾವರಣವನ್ನು ಉತ್ತಮಗೊಳಿಸಲು ಈ ಸಾಮಗ್ರಿಗಳು ಬಹಳ ಉಪಯುಕ್ತವಾಗಲಿವೆ ಎಂದು ಹೇಳಿದರು. ಕಾರ್ಯಕ್ರಮದ ಆರಂಭದಲ್ಲಿ ಶಿಕ್ಷಕಿ ಪೂರ್ಣಿಮಾ ನಾಯ್ಕ ಸ್ವಾಗತಿಸಿದರು. ಶಾಲೆಯ ಮಕ್ಕಳು ಪ್ರಾರ್ಥನೆ, ಸ್ವಾಗತಗೀತೆ, ನೃತ್ಯ ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಪ್ರಯತ್ನ ಸಂಘಟನೆಯ ಸದಸ್ಯರಾದ ಗೌರಿ ಸರ್ನೋಬತ್, ಶೋಭಾ ರಘುನಾಥ, ಅಪರ್ಣಾ ಪವಾರ, ಲತಾ ಕಟ್ಟಿ, ವೆಂಕಟೇಶ ಕುಲಕರ್ಣಿ, ಶೈಲೇಶ ಭೂರ್ಸೆ, ಮೇಘನಾ ಭೂರ್ಸೆ, ಬೀನಾ ರಾವ್, ಮಂಗಲಾ ಧಾರವಾಡಕರ್, ಹೇಮಾ ಮುತಾಲಿಕ, ಶ್ವೇತಾ ಬಿಜಾಪುರೆ, ಶುಭಾ ಹೆಗಡೆ, ಉಷಾ ಬಾಳಗಿ, ಸಂಗೀತಾ ಪಾಟೀಲ, ಗೋಪಾಲ ದೇಶಪಾಂಡೆ, ಶಾಲೆಯ ಶಿಕ್ಷಕರಾದ ಕೆ.ಎನ್.ಮಿರಜಕರ್, ದೀಪಾ ಹುಕ್ಕೇರಿಮಠ, ಸವಿತಾ ಶಿಂತ್ರೆ, ಮಮತಾ ತಂಗಡಗಿ, ಕೃಷ್ಣಾ ಪೂಜೇರ್, ಜಯಲಕ್ಷ್ಮೀ, ಜ್ಯೋತಿ ರಂಗಿ, ಶಿಕ್ಷಣ ಸಂಯೋಜಕಿ ಕ್ರಾಂತಿ ಪಾಟೀಲ, ಪ್ರಭಾವತಿ ಮಠಪತಿ, ಬಸಗೌಡ ಪಾಟೀಲ, ಬಸಪ್ಪಣ್ಣ ಕೊಣ್ಣೂರಿ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪೋಷಕರು ಹಾಗೂ ಪ್ರಭುನಗರ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮವು ಸಮಾಜಸೇವೆಯ ಮಹತ್ವವನ್ನು ಸಾರುವಂತಿದ್ದು, ಶಿಕ್ಷಣದ ಬೆಂಬಲಕ್ಕೆ ಸಮುದಾಯ ಒಟ್ಟಾಗಿ ನಿಲ್ಲುವ ಅಗತ್ಯತೆಯನ್ನು ನೆನಪಿಸಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ