LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಲಿಸುತ್ತಿರುವ ಬಸ್ ಹತ್ತಲು ಪ್ರಯತ್ನಿಸಬೇಡಿ: ಸಾರ್ವಜನಿಕರಿಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ

ಬೆಂಗಳೂರು: ಚಲಿಸುತ್ತಿರುವ ಬಸ್’ಗಳನ್ನು ಹತ್ತಲು ಪ್ರಯತ್ನಿಸಬೇಡಿ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮನಾಭ ನಗರದ ಬಳಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್‌ನ ಚಕ್ರಗಳ ಕೆಳಗೆ ಸಿಲುಕಿದ 20 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಕುರಿತು ಸಚಿವರು ಪ್ರತಿಕ್ರಿಯೆ ನೀಡಿದರು.

ಒಬ್ಬ ವ್ಯಕ್ತಿ ಚಲಿಸುತ್ತಿರುವ ಬಸ್ಸನ್ನು ಹತ್ತಯಲು ಪ್ರಯತ್ನಿಸಿದರೆ ಅಥವಾ ಬಸ್ ಹತ್ತುವಾಗ ನಿರ್ಲಕ್ಷ್ಯ ವಹಿಸಿದರೆ ಅಥವಾ ಫುಟ್‌ಬೋರ್ಡ್‌ನಲ್ಲಿ ನಿಂತಾಗಲೂ ಕೂಡ ಅಪಘಾತ ಸಂಭವಿಸುವ ಸಾಧ್ಯತೆಯಿದೆ. ಈ ವಿಷಯಗಳ ಬಗ್ಗೆ ನಾವು ಈಗಾಗಲೇ ಜಾಗೃತಿ ಮೂಡಿಸಿದ್ದೇವೆ, ಆದರೆ ಜನರು ಅದೇ ತಪ್ಪನ್ನು ಮಾಡುತ್ತಿದ್ದಾರೆಂದು ಹೇಳಿದರು.

ಬಿಎಂಟಿಸಿ 6,500 ಕ್ಕೂ ಹೆಚ್ಚು ಬಸ್‌ಗಳನ್ನು ಹೊಂದಿದ್ದು, ಬಸ್ ಗಳ ಕೊರತೆಯಿಲ್ಲ. ರಾಜಧಾನಿ ಬೆಂಗಳೂರಿನ ಜನರು ಆತಂಕ ಪಡುವ ಅಗತ್ಯವಿಲ್ಲ. ಒಂದು ಬಸ್ ಮಿಸ್ ಆದರೂ, ಮುಂದಿನ ವಾಹನಕ್ಕಾಗಿ ಕಾಯಬೇಕು. ಜೀವಗಳನ್ನು ಅಪಾಯಕ್ಕೆ ಸಿಲುಕಿಸುವ ಬದಲು ತಮ್ಮ ಗಮ್ಯಸ್ಥಾನವನ್ನು ತಲುಪಲು ಮತ್ತೊಂದು ಬಸ್ ಹತ್ತಬೇಕು ಎಂದು ತಿಳಿಸಿದರು.

ಬಸ್ ಪ್ರಯಾಣಿಕ ವೇದಿಕೆಯ ಸದಸ್ಯ ವಿನಯ್ ಶ್ರೀನಿವಾಸ ಅವರು ಮಾತನಾಡಿ,. ಕೆಲವು ಸ್ಥಳಗಳಲ್ಲಿ ಬಸ್‌ಗಳ ಕೊರತೆಯಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಗಮ್ಯಸ್ಥಾನಗಳನ್ನು ತಲುಪುವಲ್ಲಿ ವಿಳಂಬವಾಗುತ್ತದೆ ಎಂದು ಆತಂಕಗೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಬಸ್‌ಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಮತ್ತು ಸುರಕ್ಷತಾ ಕ್ರಮಗಳ ಕುರಿತು ಅಭಿಯಾನಗಳನ್ನು ನಡೆಸಬೇಕು ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಎಂಟಿಸಿ, ಬಸ್ ಚಾಲಕನಿಂದ ಯಾವುದೇ ತಪ್ಪಿಲ್ಲ ಎಂದು ಹೇಳಿದೆ. ಆದಾಗ್ಯೂ, ಪ್ರಯಾಣಿಕರು ಬಸ್‌ಗಳನ್ನು ಹತ್ತುವಾಗ ಮತ್ತು ಇಳಿಯುವಾಗ ಜಾಗರೂಕರಾಗಿರುವಂತೆ ಮನವಿ ಮಾಡಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಖರೀದಿಗೆ ನೋದಣಿ ಪ್ರಾರಂಭ.!ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್