LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ದೇಶದ ಕೀರ್ತಿಯನ್ನು ಜಾಗತಿಕವಾಗಿ ಉತ್ತುಂಗಕ್ಕೇರಿಸಬೇಕು : ಡಾ. ಜಿ.ಕೆ.ಬಡಿಗೇರ*


ಧಾರವಾಡ  ಆ.15:* ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಧಾರವಾಡ ಇಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.



ಪ್ರಾಂಶುಪಾಲರಾದ ಪೆÇ್ರ. ಜಿ.ಕೆ. ಬಡಿಗೇರ ಅವರು ದ್ವಜಾರೋಹಣವನ್ನು ನೆರವೇರಿಸಿದರು. ನಂತರ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಹಲವು ಮಹನೀಯರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ಭಾರತ ದೇಶಕ್ಕೆ ಸ್ವಾತಂತ್ರ್ಯಲಭಿಸಿದೆ. ಈ ಸ್ವಾತಂತ್ರ್ಯದ ಎಚ್ಚರ ನಮ್ಮಲ್ಲಿ ಜಾಗೃತವಾಗಿರಬೇಕು. ದೇಶದ ಮುಂದಿರುವ ಸವಾಲುಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಿ ದೇಶದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಉತ್ತುಂಗಕ್ಕೇರಿಸಬೇಕು. ಅದಕ್ಕಾಗಿ ಯುವಜನತೆ ದೇಶಪ್ರೇಮ, ಸ್ವತಂತ್ರ ವಿಚಾರಶೀಲತೆ, ಪ್ರಾಮಾಣಿಕತೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಿಡಿಸಿ ಸದಸ್ಯರಾದ ಮಲ್ಲಿಕಾರ್ಜುನ ಹಡಪದ, ಸುರೇಶ ಯಲಿಗಾರ ಅವರು ಪಾಲ್ಗೊಂಡಿದ್ದರು. ಸಾಂಸ್ಕøತಿಕ ಸಂಚಾಲಕರಾದ ಡಾ. ಗಿರೀಶ ದೇಸೂರ ಅವರು ನಿರೂಪಿಸಿದರು. ರೇಂಜರ್ಸ ಮತ್ತು ರೋವರ್ಸ ಅಧಿಕಾರಿಗಳಾದ ಶಿವಾನಂದ ನರಹಟ್ಟಿ ಹಾಗೂ ಸುಮಿತ್ರಾ ಅಣ್ಣಿಗೇರಿ, ಎನ್.ಎಸ್.ಎಸ್. ಅಧಿಕಾರಿಗಳಾದ ಡಾ. ಡಿ.ಜಿ.ತಾಪಸ್, ಡಾ. ವಿಜಯಲಕ್ಷ್ಮಿ ದಾನರೆಡ್ಡಿ, ಡಾ. ಜಯಾನಂದಹಟ್ಟಿ, ಎನ್.ಸಿ.ಸಿ. ಅಧಿಕಾರಿ ಡಾ. ರೂಪಾ ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು. ಎನ್.ಸಿ.ಸಿ. ವಿದ್ಯಾಥಿಗಳು ಶಿಸ್ತುಬದ್ಧವಾಗಿ ಪರೇಡ ಮಾಡಿ ಗೌರವ ಧ್ವಜವಂದನೆ ಸಲ್ಲಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು