ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳುವಲ್ಲಿ ಎಲ್ಲರೂ ಮುಂದಾಗಬೇಕು: ಡಾ.ಎಂ.ಚಂದ್ರಪ್ಪ.!
ಹೊಳಲ್ಕೆರೆ : ಬೇರೆ ಸಮಾಜದವರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಹೇಗೆ ಪ್ರಯತ್ನಿಸುತ್ತಾರೋ ಅದೇ ರೀತಿ ನೀವುಗಳು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳುವಲ್ಲಿ ಮುಂದಾಗಬೇಕೆಂದು ಶಾಸಕ ಡಾ.ಎಂ.ಚಂದ್ರಪ್ಪ ಬಲಿಜ ಜನಾಂಗಕ್ಕೆ ಕರೆ ನೀಡಿದರು.
ಪಟ್ಟಣದ ಸಂವಿಧಾನ ಸೌಧದಲ್ಲಿ ಭಾನುವಾರ ಕಾಲಜ್ಞಾನಿ ಯೋಗಿ ನಾರೇಯಣ ಯತೀಂದ್ರರ 299 ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಕಳೆದ ವರ್ಷ ಒಂದು ಎಕರೆ ಜಮೀನು ನೀಡುವಂತೆ ಕೇಳಿದ್ದೀರಿ. ಮತ್ತೆ ಮುಂದಿನ ವರ್ಷವೆ ನೀವುಗಳು ನೆನಪು ಮಾಡಿಕೊಂಡು ಕೇಳುವುದು. ಒಂದು ಎಕರೆ ಜಮೀನು ನೀಡುವಂತೆ ಕಳೆದ ವರ್ಷವೆ ತಹಶೀಲ್ದಾರ್ಗೆ ಆದೇಶಿಸಿದ್ದೇನೆ. ಮುತುವರ್ಜಿ ವಹಿಸಿ ಪಡೆದುಕೊಳ್ಳಬೇಕು. ದೇವಸ್ಥಾನವನ್ನು ಕಟ್ಟಿಸಿಕೊಳ್ಳಿ. ಯಾದವ, ಕುಂಚಿಟಿಗ ಸಮಾಜದವರು ಈಗಾಗಲೆ ಭೂಮಿಯನ್ನು ಮಂಜೂರು ಮಾಡಿಸಿಕೊಂಡಿದ್ದಾರೆಂದು ಹೇಳಿದರು.
31 ವರ್ಷಗಳ ಹಿಂದೆಯೇ ಶಾಸಕನಾಗಿ ಅಂದಿನಿಂದ ಇಲ್ಲಿಯವರೆಗೂ ಸಾರ್ವಜನಿಕರ ಬದುಕನ್ನು ಅರ್ಥಮಾಡಿಕೊಂಡು ಎಲ್ಲಿ ಯಾರಿಗೆ ಏನು ಅನುಕೂಲ ಮಾಡಿದರೆ ಒಳ್ಳೆಯದಾಗುತ್ತದೆನ್ನುವ ಅರಿವಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ತಾಳಿಕಟ್ಟೆಯಲ್ಲಿ ಎಂಟು ದಿನಗಳ ಕಾಲ ನಡೆಯುವ ತೋಪು ಜಾತ್ರೆಗೆ ರಸ್ತೆ, ದೀಪ, ಕುಡಿಯುವ ನೀರಿಗಾಗಿ 30 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಣವಂತರನ್ನಾಗಿ ಮಾಡುವ ಜವಾಬ್ದಾರಿ ತಾಯಂದಿರ ಮೇಲಿದೆ. ವಿದ್ಯೆ ಜೊತೆ ಸಂಸ್ಕಾರ ಕಲಿಸಿದಾಗ ಸಮಾಜದಲ್ಲಿ ಗೌರವದಿಂದ ಬಾಳಬಹುದು ಎಂದು ತಿಳಿಸಿದರು.
ಬಲಿಜ ಸಂಘದ ರಾಜ್ಯಾಧ್ಯಕ್ಷ ಬೆಂಗಳೂರಿನ ಎಂ.ಎನ್.ಮುನಿಕೃಷ್ಣ, ಹೊಳಲ್ಕೆರೆ ತಾಲ್ಲೂಕು ಯೋಗಿನಾರೇಯಣ ಬಲಿಜ ಸಂಘದ ಅಧ್ಯಕ್ಷ ಬಿ.ಎಸ್.ಮಂಜುನಾಥ್, ಪುರಸಭೆ ಅಧ್ಯಕ್ಷ ಎಲ್.ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ಹೆಚ್.ಆರ್.ನಾಗರತ್ನ ವೇದಮೂರ್ತಿ, ಡಾ.ಓಬಳೇಶ್ಘಟ್ಟಿ, ಎಸ್.ನರಸಿಂಹಮೂರ್ತಿ, ಎಂ.ಜೆ.ಸೂರ್ಯನಾರಾಯಣ
ಬಿ.ಆರ್.ಮಂಜುನಾಥ್, ಎಂ.ಕೆ.ಪ್ರಹ್ಲಾದ್, ಹನುಮಂತಪ್ಪ, ಅನುಗ್ರಹ ಶ್ರೀನಿವಾಸ್, ವಾಣಿಘಟ್ಟಿ ಕೊಂಡಪ್ಪ, ಗುರುರಾಜ್, ಸೋಮಶೇಖರಪ್ಪ ಹಾಗೂ ಬಲಿಜ ಸಮಾಜದ ಮುಖಂಡರುಗಳು ಜಯಂತಿಯಲ್ಲಿ ಭಾಗವಹಿಸಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.