Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ರಾಜಕೀಯ ಕಾರಣಕ್ಕೆ ಭೇಟಿ ಮಾಡಿಲ್ಲ-ಡಾ.ಪರಮೇಶ್ವರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜಕೀಯ ಕಾರಣಕ್ಕಾಗಿ ಭೇಟಿ ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು. ‌

ಬೆಂಗಳೂರಿನಲ್ಲಿ ‌ ಕುಮಾರಸ್ವಾಮಿ ಭೇಟಿಯಾದ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಹೊಸ ಕೈಗಾರಿಕೆಗಳ ಸ್ಥಾಪನೆ ಸಂಬಂಧ ಭೇಟಿ ಮಾಡಿದ್ದೆ. ನಾವು ಹಿಂದೆ ಒಟ್ಟಾಗಿ ಸರ್ಕಾರ ನಡೆಸಿದವರು. ಭೇಟಿ ಆಗಿರೋದೇ ತಪ್ಪು ಅನ್ನೋದು ಸರಿಯಲ್ಲ. ನಾನು ರಾಜಕೀಯ ಕಾರಣಕ್ಕೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿಲ್ಲ. ಮೈತ್ರಿ ಸರ್ಕಾರದ ಅವಧಿಯಲ್ಲೂ ನಮ್ಮ ಸಿದ್ಧಾಂತ ನಾವು ಕಾಪಾಡಿಕೊಂಡೆವು, ಅವರ ಸಿದ್ಧಾಂತ ಅವರು ಕಾಪಾಡಿಕೊಂಡರು ಎಂದು ಗೃಹ ಸಚಿವರು ತಿಳಿಸಿದರು.

ಕೇಂದ್ರ ಸಚಿವ ಹೆಚ್​. ಡಿ. ಕುಮಾರಸ್ವಾಮಿ ಹಾಗೂ ಜಿ. ಪರಮೇಶ್ವರ್ ಭೇಟಿ ಸಾಕಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕುಮಾರಸ್ವಾಮಿ ಅವರನ್ನು ಪ್ರತ್ಯೇಕವಾಗಿ ಪರಮೇಶ್ವರ್ ಅವರು ಭೇಟಿ ಮಾಡಿರುವುದು ನಾನಾ ಆಯಾಮಗಳನ್ನು ಹುಟ್ಟು ಹಾಕಿದ್ದು ಚರ್ಚೆಗೆ ಗ್ರಾಸವಾಗುತ್ತಿದೆ. ಗೌಪ್ಯವಾಗಿ ಭೇಟಿ ಮಾಡಿರುವ ಉದ್ದೇಶ ಏನು ಎಂಬುದು ಕೂಡಾ ಚರ್ಚೆಗೆ ಗ್ರಾಸವಾಗಿದೆ.

ಮೊದಲ ಬಾರಿ ಗೆದ್ದ ಶಾಸಕರು ಬರೆದಿರುವ ಪತ್ರ ಕುರಿತು ಮಾತನಾಡಿದ ಅವರು, ಮೊದಲ ಸಲ ಶಾಸಕರಾಗಿ ಆಯ್ಕೆಯಾಗಿರುವ ಶಾಸಕರು ಸಂಪುಟ ಸೇರುವ ಬೇಡಿಕೆ ಇಟ್ಟಿದ್ದಾರೆ.‌ಅವರನ್ನು ಸಂಪುಟಕ್ಕೆ ತಗೋಬಾರದು ಅಂತ ಏನೂ ಇಲ್ಲ. ಆದರೆ, ಅನುಭವ ಬರಲಿ ಅಂತ ಕೇಳಿದ್ದಾರೆ. ಅವರ ಬೇಡಿಕೆ ತಪ್ಪೇನಿಲ್ಲ. ನಾನೂ 1999ರಲ್ಲಿ ಸಚಿವ ಆದವನು. ಅವರನ್ನು ಸಂಪುಟಕ್ಕೆ ತಗೊಳ್ಳೋದು ಹೈಕಮಾಂಡ್ ಹಾಗೂ ಸಿಎಂಗೆ ಬಿಟ್ಟದ್ದು. ಅವರ ಬೇಡಿಕೆ ಸರಿಯಾಗಿದೆ. ಆದ್ರೆ ಹೈಕಮಾಂಡ್ ಯಾವ ರೀತಿ ಸ್ವೀಕರಿಸುತ್ತೆ ಅಂತ ನೋಡಬೇಕು ಎಂದು ಪರಮೇಶ್ವರ್ ತಿಳಿಸಿದರು.

ಶಾಸಕರಾಗಿ ಗೆದ್ದವರೆಲ್ಲ ಮಂತ್ರಿ ಆಗಲು ಅರ್ಹರೇ ಆಗಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ಕೇವಲ 33 ಮಂದಿಗೆಷ್ಟೇ ಸಚಿವರನ್ನಾಗಿ ಮಾಡಲು ಅವಕಾಶ ಇರೋದು, ಹೊಸಬರೂ ಬೇಕು, ಹಳಬರೂ ಬೇಕು. ಈಗ ಪುನಾರಚನೆ ಚರ್ಚೆ ನಡೀತಿದೆಯಲ್ಲ. ಈ ಸಂದರ್ಭ ಅಂತ ಅವರು ಪತ್ರ ಬರೆದಿರಬಹುದು ಎಂದು ಪರಮೇಶ್ವರ್ ಹೇಳಿದರು.
ಸಂಪುಟ ಪುನಾರಚನೆ ಆಗುತ್ತೋ ಅಥವಾ
ನಾಯಕತ್ವ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಏನೋ ಒಂದು ವಿದ್ಯಮಾನ ಅಂತೂ ಆಗುತ್ತಲ್ವಾ ಎಂದು ಪರಮೇಶ್ವರ್ ಮಾರ್ಮಿಕವಾಗಿ ಮಾಧ್ಯಮದವರನ್ನೇ ಪ್ರಶ್ನಿಸಿದರು.

ದಲಿತ ಮುಖ್ಯಮಂತ್ರಿ ಕೂಗು ಮುನ್ನಲೆಗೆ ಬಂದಿರುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ದಲಿತ ಸಿಎಂ ಚರ್ಚೆ ಆಗಲಿ, ಇನ್ನೂ ಹೆಚ್ಚು ಚರ್ಚೆ ಆಗಲಿ. ಅದರಲ್ಲಿ ನನಗೆ ತಪ್ಪು ಕಾಣ್ತಿಲ್ಲ. ಆದ್ರೆ ತೀರ್ಮಾನ ಮಾಡೋದು ಹೈಕಮಾಂಡ್ ಎಂದು ಡಾ.ಜಿ ಪರಮೇಶ್ವರ್ ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ