LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿಗಳ ಸಮರ್ಪಕ ಅನುಷ್ಠಾನದಿಂದ  ಜನತೆಗೆ ನೆಮ್ಮದಿಯ ಬದುಕು 

ಶಿವಮೊಗ್ಗ, ಡಿ.20 : ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಹೇಳಿದರು.
 ಅವರು ಶುಕ್ರವಾರ  ಶಿಕಾರಿಪುರದ ತಾಲೂಕು ಪಂಚಾಯಿತಿ ಎದುರು ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿಯಂತಾಗಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಹೆಮ್ಮೆ ನನಗಿರುವುದಾಗಿ ಅವರು ತಿಳಿಸಿದರು.
ಈ ಎಲ್ಲಾ ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳು ಅರ್ಹರಾದ ಎಲ್ಲಾ ಪಲಾನುಭವಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ತಲುಪುತ್ತಿರುವುದು ಹರ್ಷವೆನಿಸಿದೆ. ರಾಜ್ಯದ ಪ್ರತಿ ಪಂಚಾಯಿತಿಗೆ ವಾರ್ಷಿಕವಾಗಿ ಸುಮಾರು 9 ಕೋಟಿಗೂ ಅಧಿಕ ಮೊತ್ತ ನೇರವಾಗಿ ತಲುಪುತ್ತಿದೆ. ಈ ಎಲ್ಲಾ ಯೋಜನೆಗಳು ಶೇ.99 ರಷ್ಟು ಯಶಸ್ವಿಯಾಗಿರುವುದು ಪ್ರಸ್ತುತ ಸರ್ಕಾರದ ಹೆಗ್ಗಳಿಕೆ ಎಂದವರು ನುಡಿದರು.
ಈ ಎಲ್ಲಾ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಜಾತ್ಯತೀತವಾಗಿ, ಪಕ್ಷತೀತವಾಗಿ ನೀಡಲಾಗುತ್ತಿದೆ. ಅರ್ಹರಾದ ಯಾರೊಬ್ಬರೂ ಈ ಯೋಜನೆಗಳ ಸೌಲಭ್ಯದಿಂದ ವಂಚಿತರಾಗದಂತೆ ಗಮನಿಸಲಾಗುವುದು ಎಂದವರು ನುಡಿದರು.
ಈಗಾಗಲೇ ಶಿಕಾರಿಪುರ ತಾಲೂಕಿನ ಈಸೂರು, ಹೊಸೂರು, ಬಗಣಕಟ್ಟೆ ಗ್ರಾಮದ ಸರ್ಕಾರಿ ಶಾಲೆಗಳನ್ನು ಕೆ. ಪಿ. ಎಸ್ ಶಾಲೆಗಳನ್ನಾಗಿ ಪರಿವರ್ತಿಸಿ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅಲ್ಲದೆ ಶಿರಾಳಕೊಪ್ಪದ ಒಂದು ಶಾಲೆ ಹಾಗೂ ಶಿಕಾರಿಪುರದ ನಗರದ ಹೃದಯ ಭಾಗದಲ್ಲಿರುವ ಹಾಗೂ ಹೆಚ್ಚಿನ ವಿದ್ಯಾರ್ಥಿಗಳಿರುವ 2 ಶಾಲೆಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ಕೆಪಿಎಸ್ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು ಎಂದರು.
 ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನಾಗರಾಜ ಗೌಡ, ಪಾರಿವಾಳದ ಭಂಡಾರಿ, ಮಾಲತೇಶ್, ನಗರದ ಮಹದೇವಪ್ಪ, ಪಾಲಾಕ್ಷಪ್ಪ ಗೌಡ, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಸೇರಿದಂತೆ ಅನೇಕ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST