ಮಾದಿಗ ಮೀಸಲಾತಿ ಹೋರಾಟ ಸಮಿತಿ (ಪಾವಗಡ ಶ್ರೀರಾಮ್ ಬಣ) ಜಿಲ್ಲಾಧ್ಯಕ್ಷ ಶಿವರಾಜ್ ದಾಸನಕೇರಿ ಅವರು ಈ ಕುರಿತು ಶನಿವಾರ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಸಿದರು.
ಲೇಔಟ್ನ ಸರ್ವೆ ಸಂಖ್ಯೆ 689/*/4, 5, 6, 9 ವ್ಯಾಪ್ತಿಯಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಪೈಪ್ಲೈನ್ ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಇದ್ದರೂ, ಇ-ಖಾತಾ ನೀಡಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ನಗರಾಭಿವೃದ್ಧಿ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2ಎ) ಮತ್ತು 17(2ಬಿ) ಪ್ರಕಾರ, ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಿದ ನಂತರವೇ ನಿವೇಶನಗಳನ್ನು ಬಿಡುಗಡೆ ಮಾಡಬೇಕು. ಆದರೆ ಇಲ್ಲಿ ಕಾಮಗಾರಿ ಪ್ರಾರಂಭವಾಗುವ ಮುನ್ನವೇ ನಿವೇಶನಗಳನ್ನು ಬಿಡುಗಡೆ ಮಾಡಿರುವುದು ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.
ಪೌರಾಯುಕ್ತರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಭಾರದಲ್ಲಿದ್ದು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ದೂರಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ನಿಯಮಗಳ ಅರಿವು ಇದ್ದರೂ ಉದ್ದೇಶಪೂರ್ವಕವಾಗಿ ಅವುಗಳನ್ನು ಮೀರಿ ಕಾರ್ಯನಿರ್ವಹಿಸಿರುವುದು ಕಂಡು ಬರುತ್ತಿದೆ ಎಂದರು.
ಈ ಹಿನ್ನೆಲೆಯಲ್ಲಿ ಅನಧಿಕೃತವಾಗಿ ನೀಡಲಾದ ಇ-ಖಾತಾಗಳನ್ನು ರದ್ದುಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ನಾಗಪ್ಪ ಹೊಸಮನಿ, ರಾಜು ಎದುರಮನಿ, ಮಹದೇವಪ್ಪ ಧರೆನ್, ಹಣಮಂತ ವಲ್ಲ್ಯಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.