LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೂರ್ವ ಮುಂಗಾರು ಬಿತ್ತನೆ ಪೂರ್ವ ಭೂಮಿ ಸಿದ್ದತೆ


ಧಾರವಾಡ  ಏ.03:ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ. ಮುಂಗಾರಿನ ಬೇಸಾಯಕ್ಕೆ ಭೂಮಿ ಸಿದ್ಧಗೊಳಸುವ ಮಾಗಿ ಉಳುಮೆ ಪಾರಂಪರಿಕ ಕೃಷಿ ವಿಧಾನ. ಈ ವಿಧಾನ ವೈಜ್ಞಾನಿಕವೂ ಆಗಿದೆ. ಮಾಗಿ ಉಳುಮೆ ಅಂದರೆ ಸರಿ ಸುಮಾರು ಹಿಂಗಾರು ಬೆಳೆಗಳ ಕಟಾವು ಮಾಡಿ ಮುಗಿಸಿದ ಕೃಷಿ ಜಮೀನನ್ನು ಆಳವಾಗಿ ಉಳುಮೆ ಮಾಡಿ ಮುಂದಿನ ಎರಡು ತಿಂಗಳಿನಲ್ಲಿ ಸೂರ್ಯನ ಬಿಸಿಲಿನ ತಾಪಕ್ಕೆ ಭೂಮಿಯನ್ನು ಒಡ್ಡುವ ಪದ್ಧತಿಯೇ ಮಾಗಿ ಉಳುಮೆಯಾಗಿದೆ. ಸಾಮಾನ್ಯವಾಗಿ ಇದನ್ನು ಇಳುಕಲಿಗೆ ಅಡ್ಡವಾಗಿ ಮಾಡಲಾಗುವುದು. ಇದನ್ನು ಸ್ಥಳೀಯವಾಗಿ ಮಾಗಿ ಬಿಡುವುದು, ನೆಲ ಕಾಯಸಿವುದು, ಬಿಸಿಲು ತಿನ್ನಿಸುವುದು ಎಂದೆಲ್ಲಾ ಕರೆಯಲಾಗುತ್ತದೆ.



ಮಾಗಿ ಉಳುಮೆ ಮಾಡುವ ಮೊದಲು ರೈತರು ತಮ್ಮ ಹೊಲಗಳಿಗೆ ಹೆಕ್ಟೇರಿಗೆ 10 ಟನ್ಗಳಷ್ಟು ಕೊಟ್ಟಿಗೆ ಅಥವಾ ಸಗಣಿ ಗೊಬ್ಬರವನ್ನು ಸಮನಾಗಿ ಹರಡಿ ನಂತರ ನೇಗಿಲಿನಿಂದ ಉಳುಮೆ ಮಾಡಿ ಗೊಬ್ಬರವನ್ನು ಮಣ್ಣಿನಲ್ಲಿ ಸೇರಿಸಬಹುದು.



*ಮಾಗಿ ಉಳುಮೆ ಪ್ರಯೋಜನಗಳು:* ಮಾಗಿ ಉಳುಮೆಯಿಂದ ಬೆಳೆ ಬೆಳೆಯುವ ಮಣ್ಣು ಪ್ರಾಕೃತಿಕವಾಗಿ ಸೂರ್ಯನ ಬೆಳಕಿನಿಂದ ಕಾಯ್ದು ಮಣ್ಣಿನಲ್ಲಿರುವ ಹಿಂದಿನ ಬೆಳೆಗೆ ಬಾದಿತ ಕೀಟಗಳ ಕೋಶಗಳು ಮತ್ತು ತತ್ತಿಗಳು ಮತ್ತು ರೋಗಾಣುಗಳು ನಾಶ ಹೊಂದಿ ಭೂಮಿಯ ಮರು ಚೈತನ್ಯಕ್ಕೆ ಸಹಾಯ ಮಾಡುತ್ತದೆ.

ಮಾಗಿ ಉಳುಮೆಯಿಂದ ಭೂಮಿಯ ಮಣ್ಣು ತಿರುವು ಮುರುವು ಆಗಿ ಬೇಸಿಗೆಯಲ್ಲಿ ಆಗುವ ಮುಂಗಾರು ಮಳೆಯ ನೀರು ಇಂಗುವುದು. ಮಣ್ಣಿನಲ್ಲಿ ಗಾಳಿನ ಸಂವಹನ ಕ್ರಿಯೆಯ ವೇಗ ವೃದ್ಧಿಸುವುದು, ಜೊತೆಗೆ ಭೂಮಿಯ ಮಣ್ಣಿನ ತಿರುವು ಮುರುವಿಕೆಯಿಂದ ಮಳೆಯ ನೀರು ಆಳವಾಗಿ ಭೂಮಿಯಲ್ಲಿ ಇಂಗುವುದು. ಮಾಗಿ ಉಳುಮೆಯಿಂದ ಬಹುವಾರ್ಷಿಕ ಕಳೆಗಳಾದ ಜೇಕು ಮತ್ತು ಕರಿಕೆಯ ಬೇರುಗಳು ಬಿಸಿಲಿನ ತಾಪಕ್ಕೆ ಸಿಲುಕಿ ಮೊಳಕೆ ಒಡೆಯುವ ಸಾಮಥ್ರ್ಯ ಇಳಿಮುಖವಾಗುವದು.



ಹಿಂದಿನ ಬೆಳೆಯ ಕಟಾವಿನ ನಂತರ ಉಳಿಯುವ ಬೆಳೆ ಉಳಿಕೆಗಳು ಮಣ್ಣಿನಲ್ಲಿ ಸೇರಿಸಿ ಬೇಗನೇ ಕಳೆತು ಸಾವಯವ ಗೊಬ್ಬರವಾಗಲು ಸಹಾಯ ಮಾಡುವುದರ ಜೊತೆಗೆ ಭೂಮಿಯ ಭೌತಿಕ, ರಾಸಾಯನಿಕ ಮತ್ತು ಜೈವಿಕ ಗುಣಧರ್ಮ ಸುಧಾರಿಸಿ ಭೂಮಿಯ ಫಲವತ್ತತೆ ಮತ್ತು ಗುಣಮಟ್ಟವನ್ನು ಉತ್ತಮ ಪಡಿಸಲು ಅತ್ಯಂತ ಪ್ರಮುಖ ಪ್ರಾಥಮಿಕ ಬೇಸಾಯ ಕ್ರಮವಾಗಿದೆ.



ಈ ಎಲ್ಲ ಪ್ರಯೋಜನಗಳನ್ನು ಪಡೆಯಲು ಕೆಂಪು ಮಣ್ಣಿನಲ್ಲಿ ಪ್ರತಿ ವರ್ಷ ಹಾಗೂ ಕಪ್ಪು ಮಣ್ಣಿನಲ್ಲಿ ಪರ್ಯಾಯ ವರ್ಷದಲ್ಲಿ ಮಾಡುವುದು ಸೂಕ್ತವಾಗಿದೆ.



ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು