Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಂಗ್ರೆಸ್ಸಿಗೆ ಸಿಎಂ ಆಯ್ಕೆ ದೊಡ್ಡ ಸವಾಲು..!

 

 

ಬೆಂಗಳೂರು:
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ ತನ್ನ ಏಕೈಕ ಭದ್ರಕೋಟೆ ಕರ್ನಾಟಕವನ್ನು ಕಳೆದುಕೊಂಡಿದ್ದು, ರಾಜ್ಯದ 223 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 65 ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.30 ವರ್ಷಗಳ ನಂತರ ಸ್ಥಾನಗಳು ಮತ್ತು ಮತಗಳ ಹಂಚಿಕೆಯಲ್ಲಿ ಕಾಂಗ್ರೆಸ್‌ ದಾಖಲೆ ಮಾಡಿದೆ.

ಕರ್ನಾಟಕದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿರುವ ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ನಡುವೆ ಸಮತೋಲನ ಸಾಧಿಸುವುದು ದೊಡ್ಡ ಸವಾಲಾಗಿದೆ. ಇಬ್ಬರೂ ಪ್ರಬಲ ಬೆಂಬಲಿಗರನ್ನು ಹೊಂದಿರುವ ಪ್ರಬಲ ನಾಯಕರು, ಅವರು ವರ್ಷಗಳಿಂದ ಭಿನ್ನಾಭಿಪ್ರಾಯದಲ್ಲಿದ್ದರೂ ಪ್ರಚಾರಕ್ಕಾಗಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಫಲಿತಾಂಶ ಘೋಷಣೆಗೂ ಮುನ್ನವೇ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ತಮ್ಮ ಪ್ರಬಲ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪುತ್ರ ಮತ್ತೊಮ್ಮೆ ತಮ್ಮ ತಂದೆ ಮುಖ್ಯಮಂತ್ರಿ ಹುದ್ದೆಗೆ ಏರಬೇಕು ಎಂದು ಬಯಸುತ್ತಿರುವುದಾಗಿ ಮಾಧ್ಯಮದ ಮುಂದೆ ಹೇಳಿದ್ದು, ಇದಕ್ಕೆ ಡಿ.ಕೆ ಶಿವಕುಮಾರ ಅವರು ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಭಾನುವಾರ (ಮೇ 14) ಸಂಜೆ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿರುವ ಕಾಂಗ್ರೆಸ್ ತನ್ನ ಎಲ್ಲಾ ಶಾಸಕರನ್ನು ಬೆಂಗಳೂರಿಗೆ ಬರುವಂತೆ ಸೂಚಿಸಿದೆ. “ನಾವು ಅಭ್ಯರ್ಥಿಗಳಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಕುರಿತು ವಿವರಿಸುತ್ತೇವೆ. ಹೈಕಮಾಂಡ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕರ್ನಾಟಕದ ಜನತೆ ಮತ್ತು ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ ಕಾಂಗ್ರೆಸ್‌ನ ರಾಹುಲ್ ಗಾಂಧಿ, “ದ್ವೇಷದ ಮಾರುಕಟ್ಟೆಯನ್ನು ಮುಚ್ಚಲಾಗಿದೆ ಮತ್ತು ಪ್ರೀತಿಯ ಅಂಗಡಿಗಳು ತೆರೆದಿವೆ” ಎಂದು ಹೇಳಿದ್ದಾರೆ. “ರಾಹುಲ್ ಗಾಂಧಿ ಅವರು ನಡೆದ ಹಾದಿಯಲ್ಲಿ (ಭಾರತ್ ಜೋಡೋ ಯಾತ್ರೆಗಾಗಿ) ನಾವು ಸುಮಾರು 99% ಸ್ಥಾನಗಳನ್ನು ಗೆದ್ದಿದ್ದೇವೆ” ಎಂದು ಖರ್ಗೆ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶನಿವಾರ ಮಧ್ಯಾಹ್ನದ ನಂತರ ಸೋಲನ್ನು ಒಪ್ಪಿಕೊಂಡ ಅವರು, “ಪ್ರಧಾನಿ ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಮಗೆ ಗೆಲ್ಲಲು ಸಾಧ್ಯವಾಗಲಿಲ್ಲ” ಎಂದು ಹೇಳಿದರು. “ಲೋಕಸಭಾ ಚುನಾವಣೆಯಲ್ಲಿ ಹಿಂತಿರುಗಲು ಪಕ್ಷವು ಈ ಫಲಿತಾಂಶವನ್ನು ಸವಾಲಾಗಿ ತೆಗೆದುಕೊಳ್ಳುತ್ತದೆ” ಎಂದು ಬೊಮ್ಮಾಯಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೈ-ಪಿಚ್ ಪ್ರಚಾರ, ಕೇಂದ್ರ ಮಂತ್ರಿಗಳು ಮತ್ತು ಸರ್ಕಾರದ ಬಲದ ಹೊರತಾಗಿಯೂ ಕರ್ನಾಟಕವು ಸುಮಾರು 40 ವರ್ಷಗಳ ನಡೆದು ಬಂದ ವಾಡಿಕೆಯಂತೆ ಅಧಿಕಾರದಲ್ಲಿರುವವರನ್ನು ಮತ್ತೆ ಆಯ್ಕೆ ಮಾಡಿಲ್ಲ. ಪ್ರಧಾನಿ ಮೋದಿ ರಾಜ್ಯದಲ್ಲಿ 19 ಸಾರ್ವಜನಿಕ ಸಭೆಗಳು ಮತ್ತು ಆರು ರೋಡ್‌ಶೋಗಳನ್ನು ನಡೆಸಿದ್ದರು. ಆದರೂ ಅದು ಫಲ ನೀಡಲಿಲ್ಲ.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳು ಮತ್ತು ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದ ಫಲಿತಾಂಶಗಳು ಕಾಂಗ್ರೆಸ್‌ಗೆ ಸದ್ಯಕ್ಕೆ ಟಾನಿಕ್‌ ರೂಪದಲ್ಲಿ ಬಂದಿದೆ. ಪಕ್ಷವು ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮತ್ತೆ ಅಧಿಕಾರ ನೀಡುವ ನಿರೀಕ್ಷೆ ಇಟ್ಟುಕೊಂಡಿದೆ. 2020 ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ನಿಷ್ಠಾವಂತರ ಪಕ್ಷಾಂತರದ ನಂತರ ಸರ್ಕಾರವು ಕುಸಿದುಬಿದ್ದ ಮಧ್ಯಪ್ರದೇಶವನ್ನು ಮರಳಿ ಗೆಲ್ಲಲು ಅದು ಬಯಸುತ್ತಿದೆ.
ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಚುನಾವಣೆಯ ದೃಷ್ಟಿಯಿಂದ ಬಿಜೆಪಿಗೆ ಈ ಫಲಿತಾಂಶ ನಿರ್ಣಾಯಕವಾಗಲಿದೆ. ರಾಜ್ಯವು 28 ಲೋಕಸಭಾ ಸ್ಥಾನಗಳನ್ನು ಹೊಂದಿದೆ. 2018ಕ್ಕೆ ಹೋಲಿಸಿದರೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳಿಕೆ ಕಡಿಮೆಯಾಗಿಲ್ಲವಾದರೂ, ಒಕ್ಕಲಿಗ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮತಗಳಲ್ಲಿ ಪಕ್ಷಕ್ಕೆ ಅಗತ್ಯವಾದ ಪ್ರಗತಿ ಸಾಧಿಸಲು ಸಾಧ್ಯವಾಗಲಿಲ್ಲ ಮತ್ತು ಲಿಂಗಾಯತರ ಬೆಂಬಲವನ್ನು ಕೂಡ ಗಣನೀಯ ಪ್ರಮಾಣದಲ್ಲಿ ಕಳೆದುಕೊಂಡಿದೆ ಎಂದು ಚುನಾವಣೆಗಳು ಫಲಿತಾಂಶಗಳು ಸೂಚಿಸುತ್ತವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ