Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಸ್ ಪ್ರಯಾಣಿಕರ ತಂಗುದಾಣದ ಕಾಮಗಾರಿಗೆ ಈರಣ್ಣ ಕಡಾಡಿ ಭೂಮಿ ಪೂಜೆ

ಬೆಳಗಾವಿ: ಬಸ್ ಪ್ರಯಾಣಿಕರ ತಂಗುದಾಣವು ದಿನ ನಿತ್ಯ ಕೆಲಸಕ್ಕೆ ಸಂಚರಿಸುವ ಜನ ಸಾಮಾನ್ಯರ ಮತ್ತು ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳ ತ್ವರಿತ ಆಶ್ರಯ ತಾಣಗಳಾಗಿದ್ದು ಮಹಿಳೆಯರು, ಮಕ್ಕಳು ಹಾಗೂ ವೃದ್ದರಿಗೆ ಪ್ರಯಾಣದ ಸಂದರ್ಭದಲ್ಲಿ ಮಳೆ, ಗಾಳಿ, ಬಿಸಲುಗಳಿಂದ ಈ ತಂಗುದಾಣಗಳು ರಕ್ಷಣೆ ನೀಡಲಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಹಲವು ವಾರ್ಡಗಳಲ್ಲಿ ಬಸ್ ಪ್ರಯಾಣಿಕರ ತಂಗುದಾಣಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಜಿಲ್ಲೆಯಲ್ಲಿ 100 ಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ 60 ಬಸ್ ಪ್ರಯಾಣಿಕರ ತಂಗುದಾಣಗಳಿಗೆ ಮಂಜೂರಾತಿ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. 10 ಬಸ್ ತಂಗುದಾಣಗಳ ಕಾಮಗಾರಿ ಪೂರ್ಣಗೊಂಡಿದೆ ಎಂದರು.
ನಗರ ಸೇವಕರಾದ ಹಣಮಂತ ಕೊಂಗಾಲಿ ಅವರ ವಾರ್ಡ ನಂ 46 ರ ರಾಮತೀರ್ಥ ನಗರದ ಬಸವೇಶ್ವರ ಬಡಾವಣೆ ಕ್ರಾಸ್ ಹತ್ತಿರ ಮತ್ತು ಆಂಜನೇಯ ದೇವಸ್ಥಾನದ ಹತ್ತಿರ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣವಾಗಲಿದೆ. ವಾರ್ಡ ನಂ 35ರ ನಗರ ಸೇವಕರಾದ ಶ್ರೀಮತಿ ಲಕ್ಷ್ಮೀ ರಾಠೋಡ ಅವರ ವಾರ್ಡಿನ ಚನ್ನಮ್ಮ ಹೌಸಿಂಗ್ ಸೊಸಾಯಿಟಿ ಹತ್ತಿರ ಸೆಕ್ಟರ್ 6/1 ರಲ್ಲಿ ಮತ್ತು ಶ್ರೀನಗರದ ಸೆಕ್ಟರ್ ನಂ 05 ಹತ್ತಿರ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣವಾಗಲಿದೆ. ನಗರ ಸೇವಕರಾದ ಶ್ರೇಯಸ್ ನಾಕಾಡಿ ಅವರ ವಾರ್ಡ ನಂ 34 ರ ಶಾಹುನಗರ ಗಣೇಶ ಚೌಕ್ ಹತ್ತಿರ ಬಸ್ ಪ್ರಯಾಣಿಕರ ತಂಗುದಾಣಗಳಿಗೆ ಭೂಮಿ ಪೂಜೆ ನೇರವೇರಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಾದೇವ ರಾಠೋಡ, ಮಂಡಲ ಅಧ್ಯಕ್ಷ ವಿಜಯ ಕೊಡಗನೂರ, ಮಾಜಿ ಮೇಯರ ಎನ್. ಬಿ ನಿರ್ವಾಣಿ, ಅಣ್ಣಾಸಾಹೇಬ ದೇಸಾಯಿ, ನಿರುಪಾದಯ್ಯ ಕಲ್ಲೋಳಿಮಠ, ಅಪ್ಪಾಸಾಹೇಬ ಕಾಂಬಳೆ, ವಿಜಯಾ ಹಿರೇಮಠ, ಎಸ್. ಎಸ್ ಶೀಲವಂತ, ಎಸ್. ಎಂ ವಕ್ಕುಂದ, ಶ್ರೀ ಮಹಾಂತೇಶ ಮೂಲಿಮನಿ, ವಿನಾಯಕ ಪತ್ತಾರ, ಶಿವಾನಂದ ಕಣಗನಿ, ಕೃಷ್ಣಾ ಪಾಟೀಲ, ಸುರೇಶ ಯಾದವ, ಸಂತೋಷ ದೇಸಾಯಿ, ಶಂಕರ ಗುಡಸ, ಸಂಜು ಭಾಂವಿ, ವಿಠ್ಠಲ ಬಡಿಗೇರ, ಆರ್ ಸಿ ಪಾಟೀಲ ಸೇರಿದಂತೆ ಸ್ಥಳೀಯ ನಿವಾಸಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ