LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಂದು ದೇಶದಲ್ಲಿ ಸಾಂಪ್ರದಾಯಿಕ ಆರೋಗ್ಯದ ಸೂತ್ರಗಳಿವೆ: ಡಾ.ವೆಂಕಟ ನಾರಾಯಣ ಜೋಶಿ

ಬಳ್ಳಾರಿ,ಜ.03

ಪ್ರತಿ ದೇಶಕ್ಕೂ ತಮ್ಮದೇ ಆದ ಸಾಂಪ್ರದಾಯಿಕ ಆರೋಗ್ಯದ ಸೂತ್ರಗಳಿವೆ. 95ಕ್ಕೂ ಹೆಚ್ಚು ಪಶ್ಚಿಮ ದೇಶಗಳಲ್ಲಿ ವಿವಿಧ ಔಷಧ ದ್ರವ್ಯಗಳ ವ್ಯಾಪಾರ ವಹಿವಾಟು ನಡೆಯುತ್ತಿವೆ ಎಂದು ಲಂಡನ್ ಆಯುರ್ವೇದ ಅಕಾಡೆಮಿಯ ನಿರ್ದೇಶಕ ಡಾ.ವೆಂಕಟ ನಾರಾಯಣ ಜೋಶಿ ಅವರು ಹೇಳಿದರು.
ತಾರಾನಾಥ ಹಳೆಯ ವಿದ್ಯಾರ್ಥಿಗಳ ಸಂಘ, ನಿಮಾ ಬಳ್ಳಾರಿ ಮತ್ತು ನಿಮಾ ಮಹಿಳಾ ವೇದಿಕೆ ಸಹಭಾಗಿತ್ವದಲ್ಲಿ ನಗರದ ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಮಂಥನ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ “ಯುರೋಪ್ ಮತ್ತು ಯುಕೆಯಲ್ಲಿ ಆಯುರ್ವೇದ” ವಿಷಯದ ಮೇಲೆ ಒಂದು ದಿನದ “ತಜ್ಞರ ತರಬೇತಿ ಕಾರ್ಯಕ್ರಮ”ದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
ಪಶ್ಚಿಮ ದೇಶಗಳಲ್ಲಿ ಶಿವಲಿಂಗಿ ಮತ್ತು ಪುತ್ರಂಜೀವ ಬೀಜಗಳ ಸಂರಕ್ಷಣೆ ಮತ್ತು ಮಾರಾಟ ಮಾಡಲಾಗುತ್ತಿದೆ. ದೇವದಾರುವಿನ ಸುಗಂಧ ಸಾರವನ್ನು ಪುರುಷ ಬಂಜೆತನದಲ್ಲಿ ಉತ್ತರ ಬಸ್ತಿಯ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಅಮೃತ ಸತ್ವವು ಏಡ್ಸ್ ಚಿಕಿತ್ಸೆಯಲ್ಲಿ ಸಹಾಯಕವಾಗಿದೆ. ನಿರ್ಗುಂಡಿ, ಕಡಲ ಬೆಳ್ಳುಳ್ಳಿ ಮತ್ತು ಮರಿಚಾ ಇತ್ಯಾದಿ ಔಷಧೀಯ ಸಸ್ಯಗಳು ಯೂರೋಪ್‌ನಲ್ಲಿ ಲಭ್ಯವಿವೆ ಮತ್ತು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ತಯಾರಿಸಲಾದ ಸ್ವಯಂ ಔಷಧಿಗಳು ಪರಿಣಾಮಕಾರಿಯಾಗಿವೆ ಎಂದರು.
ಲಂಡನ್ ಮತ್ತು ಯುಕೆಯಲ್ಲಿ ಆಯುರ್ವೇದದ ವ್ಯಾಪ್ತಿ ಮತ್ತು ವಿಶ್ವಮಟ್ಟದ ಆರೋಗ್ಯ ಸೇವೆಗಳ ಭವಿಷ್ಯದ ಯೋಜನೆಗಳ ಕುರಿತು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದಲ್ಲಿ ನೂತನವಾಗಿ ಅನುಸಂಧಾನ, ಹೊಸಪರಿಕಲ್ಪನೆ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಲಾಯಿತು.
ಈ ವೇಳೆ ಆಯುಷ್ ಇಲಾಖೆಯ ಮಾಜಿ ಜಂಟಿ ನಿರ್ದೇಶಕ ಡಾ.ಎನ್.ಎ.ಮೂರ್ತಿ, ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಡಾ.ಜಿ.ಆರ್.ವಸ್ತçದ್, ತಾರಾನಾಥ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮಾಧವ ದಿಗ್ಗಾವಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ತಿತರಿದ್ದರು.
-----------
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು