Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪ್ರತಿಯೊಬ್ಬ ಕನ್ನಡಿಗರು ಬೆಳಗಾವಿ ಒಂದು ಅಧ್ಯಯನ" ಎಂಬ ಪುಸ್ತಕವನ್ನು ಓದಬೇಕು : ಎಂ. ಜಿ. ಹಿರೇಮಠ

ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡಿಗರು ನಡೆಸಿರುವ ಚಳುವಳಿಗಳು, ಭಾಷಾ ಸಂಘರ್ಷ ಸೇರಿದಂತೆ ಬೆಳಗಾವಿಯ ಸಮಗ್ರ ಇತಿಹಾಸ ವನ್ನು ಈ ಪುಸ್ತಕ ಒಳಗೊಂಡಿದೆ. ಹೀಗಾಗಿ ಪ್ರತಿಯೊಬ್ಬ ಕನ್ನಡಿಗರು ಬೆಳಗಾವಿ ಒಂದು ಅಧ್ಯಯನ" ಎಂಬ ಪುಸ್ತಕವನ್ನು ಓದಬೇಕು ಎಂದು ನಿವೃತ್ತ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಹೇಳಿದರು.

ಬೆಳಗಾವಿ ಜನಸಾಹಿತ್ಯ ಪೀಠ, ಕವಿ ಎಸ್. ಡಿ. ಇಂಚಲ ಮತ್ತು ಕವಿ ಉಳುವೀಶ ಹುಲೆಪ್ಪನವರಮಠ ಸ್ಮಾರಕ ಪ್ರತಿಷ್ಠಾನ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ನಡೆದ ಪ್ರಾ. ಬಿ. ಎಸ್. ಗವಿಮಠ ಅವರ ಸಂಪಾದಿತ " ಬೆಳಗಾವಿ ಒಂದು ಅಧ್ಯಯನ" ಎಂಬ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಹಿಂದೆ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ದೊಡ್ಡ ಪ್ರಮಾಣದಲ್ಲಿ ಸಂಘರ್ಷ ಏರ್ಪಡುತ್ತಿತ್ತು. ಆದರೆ, ಕಾಲಕ್ರಮೇಣ ಬಹಳಷ್ಟು ಬದಲಾವಣೆಯಾಗಿದೆ. ರಾಜ್ಯದಲ್ಲಿಯೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಬೆಳಗಾವಿ ಮಾದರಿಯಾಗಿದೆ. ಅಲ್ಲದೆ, ಬೆಳಗಾವಿಯಲ್ಲಿ ಈಗ ಎಲ್ಲಾ ಭಾಷಿಕರು ಅನೋನ್ಯತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಈ ಪ್ರವೃತ್ತಿ ಹೀಗೆ ಮುಂದುವರೆಯುವುದು ಅಗತ್ಯವಾಗಿದೆ ಎಂದರು.

ಗುರುಗಳ ಸೇವೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕನ್ನಡ ಹೋರಾಟ ಕಂಡ ಗವಿಮಠ ಅವರು ಅಪಾರ ಅನುಭವದ ಕಣಜವಾಗಿದ್ದಾರೆ ಎಂದು ಹೇಳಿದರು.

ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಬೆಳಗಾವಿ ಕರ್ನಾಟಕ ರಾಜ್ಯದಲ್ಲಿ ಉಳಿಯಬೇಕು ಎಂಬ ಹೋರಾಟ ಈ ಪುಸ್ತಕದಲ್ಲಿ ಇದ್ದು ಪ್ರತಿಯೊಬ್ಬ ಕನ್ನಡಿಗರು ಪುಸ್ತಕ ಓದಿ ಎಂದು ಸಲಹೆ ನೀಡಿದರು.

ಬೆಳಗಾವಿಯಲ್ಲಿ ಈಗ
ಬದಲಾವಣೆ ಸಾಕಷ್ಟು ಆಗಿದೆ. ಗದ್ದಲ, ಗಲಾಟೆ ಕಡಿಮೆ ಆಗಿದೆ. ಆರ್ ಸಿಯು, ವಿಟಿಯು, ಸುವರ್ಣ ಸೌಧ ನಿರ್ಮಾಣವಾಗಿದೆ. ಕನ್ನಡ ಕಡ್ಡಾಯವಾಗಿದೆ. ಬೆಳಗಾವಿ ಬದಲಾಗಿದೆ. ಅದ್ದೂರಿ ರಾಜ್ಯೋತ್ಸವ ಆಚರಣೆ ಆಗುತ್ತಿದೆ ಎಂದು ಹೇಳಿದರು.

ನಿಪ್ಪಾಣಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯಾಗುತ್ತಿದ್ದು, ಕನ್ನಡ ಹಾಡುಗಳನ್ನು ಮರಾಠಿ ಭಾಷಿಕರು ಹಾಡುತ್ತಿದ್ದಾರೆ. ಹಿಂದೆ ಬೆಳಗಾವಿ ಜಿಲ್ಲೆಯಿಂದ ಐದು ಜನ ಎಂಇಎಸ್ ಎಂಎಲ್ಎ ಇದ್ದರು. ಈಗ ಯಾರೂ ಇಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಈಗ ಕನ್ನಡಿಗರು ಹಾಗೂ ಮರಾಠಿಗರು ಅನ್ಯೋನ್ಯತೆಯಿಂದ ಇದ್ದಾರೆ. ಬದಲಾವಣೆ ಕಾಣುತ್ತಿದೆ.

ಮರಾಠ ಮಂಡಳ ಶಿಕ್ಷಣ ಸಂಸ್ಥೆ ಕನ್ನಡ ಮಾಧ್ಯಮ ಶಾಲೆಗಳನ್ನು ಸ್ಥಾಪಿಸಿದೆ.‌ಸಂವಿಧಾನ ಎಲ್ಲರಿಗೂ ರಕ್ಷಣೆ ನೀಡುತ್ತದೆ. ಕರ್ನಾಟಕದಲ್ಲಿ ಅಧಿಕಾರಿಗಳಾಗಲು ಕನ್ನಡ ಕಲಿಯಬೇಕು ಎಂದು ಹೇಳಿದರು.

ನಿವೃತ್ತ ಪ್ರಾಚಾರ್ಯ ಬಿ. ಎಸ್. ಗವಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಹಳ ಪರಿಶ್ರಮದಿಂದ ಈ ಪುಸ್ತಕವನ್ನು ಬರೆದಿದ್ದೇನೆ. ಈ ಪುಸ್ತಕ ಲೋಕಾರ್ಪಣೆ ಯಾಗಿರುವುದು ಬಹಳ ಸಂತಸ ತಂದಿದೆ. ಪ್ರತಿಯೊಬ್ಬರೂ ಈ ಪುಸ್ತಕ ಓದುವ ಮೂಲಕ ಅದರಲ್ಲಿರುವ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದರು.

ಇದೇ ವೇಳೆ ಪುಸ್ತಕದ ಕರ್ತೃ ಪ್ರಾ. ಬಿ.ಎಸ್.ಗವಿಮಠ ಅವರನ್ನು ಗಣ್ಯರು ಸನ್ಮಾನಿಸಿದರು. ಸಾಹಿತಿಗಳಾದ ಡಾ. ವಿಸ್. ಮಾಳಿ ಹಾಗೂ ಡಾ. ಗುರುದೇವಿ ಹುಲೆಪ್ಪನವರಮಠ ಅವರು "ಬೆಳಗಾವಿ ಒಂದು ಅಧ್ಯಯನ" ಪುಸ್ತಕ ಕುರಿತು ವಿವರಿಸಿದರು.

ಡಾ. ಎಚ್‌.ಬಿ. ರಾಜಶೇಖರ ಅವರು ಅಧ್ಯಕ್ಷೆಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶಂಕರರಾವ್ ಬುಚಡಿ, ಷಣ್ಮುಖ ಗಣಾಚಾರಿ, ಎಂ. ಎಸ್. ಇಂಚಲ್ ಉಪಸ್ಥಿತರಿದ್ದರು. ಸಾಹಿತಿ ನಯನಾ ಗಿರಿಗೌಡರ ಪ್ರಾಥಿಸಿದರು. ಸಾಹಿತಿ ಡಾ. ಬಸವರಾಜ ಜಗಜಂಪಿ ಸ್ವಾಗತಿಸಿದರು. ಡಾ. ಮಹೇಶ ಗರುನಗೌಡರ ನಿರೂಪಿಸಿದರು. ಸಾಹಿತಿ ಬಸವರಾಜ ಗಾರ್ಗಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ