LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜಕಾರಣಿಗಳಿಗೆ ಕಾನೂನಿನ ಭಯ ಇಲ್ಲದಂತೆ ಮಾಡಿದ್ದು Ex-CJI ಚಂದ್ರಚೂಡ್ : ರಾವತ್ ಕಿಡಿ

ಮುಂಬಯಿ : ಮಹಾರಾಷ್ಟ್ರದ ಪಕ್ಷಗಳಿಂದ ಪಕ್ಷಾಂತರಗೊಂಡ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದು ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಭಾನುವಾರ ಕಟುವಾಗಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, "ಚಂದ್ರಚೂಡ್ ಅವರು ಪಕ್ಷಾಂತರಿಗಳಿಗೆ ಕಾನೂನಿನ ಭಯವನ್ನು ತೆಗೆದು ಹಾಕಿದ್ದಾರೆ.

ಅವರ ಹೆಸರನ್ನು ಇತಿಹಾಸದಲ್ಲಿ ಕಪ್ಪು ಅಕ್ಷರಗಳಲ್ಲಿ ಬರೆಯಲಾಗುವುದು” ಎಂದರು. ಅನರ್ಹತೆ ಅರ್ಜಿಗಳನ್ನು ನಿರ್ಧರಿಸದೆ, ಚಂದ್ರಚೂಡ್ ಪಕ್ಷಾಂತರಕ್ಕೆ ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಟ್ಟಿದ್ದರು ಎಂದು ರಾವತ್ ಕಿಡಿ ಕಾರಿದ್ದಾರೆ. ‘ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಮೊದಲೇ ನಿರ್ಧಾರಿತವಾಗಿದ್ದವು. ಆಗಿನ ಸಿಜೆಐ ಅವರು ಅನರ್ಹತೆ ಅರ್ಜಿಗಳನ್ನು ಸಕಾಲದಲ್ಲಿ ತೀರ್ಮಾನಿಸಿದ್ದರೆ ಫಲಿತಾಂಶವೇ ಬೇರೆಯಾಗುತ್ತಿತ್ತು’ ಎಂದು ರಾವತ್ ಆರೋಪಿಸಿದ್ದಾರೆ.

“ನಾವು ದುಃಖಿತರಾಗಿದ್ದೇವೆ ಆದರೆ ನಿರಾಶೆಗೊಂಡಿಲ್ಲ. ನಾವು ಹೋರಾಟವನ್ನು ಅಪೂರ್ಣಗೊಳಿಸುವುದಿಲ್ಲ. ಮತಗಳ ವಿಭಜನೆಯೂ ಒಂದು ಅಂಶವಾಗಿದ್ದು, ಚುನಾವಣೆಯಲ್ಲಿ ಆರ್‌ಎಸ್‌ಎಸ್ ಪ್ರಮುಖ ಪಾತ್ರ ವಹಿಸಿದೆ. ವಿಷಪೂರಿತ ಪ್ರಚಾರವು ನಮ್ಮ ಮೇಲೆ ನಕಾರಾತ್ಮಕ ಪರಿಣಾಮ ಬೀರಿತು ಎಂದರು. 2022 ರಲ್ಲಿ ಅವಿಭಜಿತ ಶಿವಸೇನೆಯ ವಿಭಜನೆಯ ನಂತರ, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದ ಬಣವು ಏಕನಾಥ್ ಶಿಂಧೆ ಜತೆಗೆ ಪಕ್ಷಾಂತರಗೊಂಡ ಪಕ್ಷದ ಶಾಸಕರ ಅನರ್ಹತೆಯ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಿತ್ತು.

ಶಿಂಧೆ ನೇತೃತ್ವದ ಸೇನಾ ಬಣವನ್ನು “ನೈಜ ರಾಜಕೀಯ ಪಕ್ಷ” ಎಂದು ಘೋಷಿಸುವ ಮೂಲಕ ಈ ವರ್ಷದ ಆರಂಭದಲ್ಲಿ ಅವರು ಮಾಡಿದ ಅನರ್ಹತೆ ಅರ್ಜಿಗಳ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ ಅಸೆಂಬ್ಲಿ ಸ್ಪೀಕರ್‌ಗೆ ಜವಾಬ್ದಾರಿಯನ್ನು ನೀಡಿತ್ತು. ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಭಾಗವಾಗಿ ಸ್ಪರ್ಧಿಸಿದ 95 ಸ್ಥಾನಗಳಲ್ಲಿ ಕೇವಲ 20 ಸ್ಥಾನಗಳನ್ನು ಗಳಿಸಿದದ ನಂತರ ಶಿವಸೇನಾ (ಯುಬಿಟಿ) ನಾಯಕನ ಕಿಡಿ ಕಾರುತ್ತಲೇ ಇದ್ದಾರೆ. ಕಾಂಗ್ರೆಸ್ 101 ಸ್ಥಾನಗಳಲ್ಲಿ ಕೇವಲ 16 ಮತ್ತು ಎನ್ ಸಿಪಿ (SP) ಸ್ಪರ್ಧಿಸಿದ 86 ಸ್ಥಾನಗಳಲ್ಲಿ 10 ಮಾತ್ರ ಗೆದ್ದು ಹೀನಾಯ ಸೋಲು ಅನುಭವಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷ ಉಚಿತಶರ್ಟಿನ ಬಟನ್ ಸರಿಯಾಗಿ ಹಾಕಿಲ್ಲ ಎಂದು ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ ;10 ಮಂದಿ ವಿರುದ್ಧ ಕೇಸುಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನ