Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಕನ್ನಡ ಭಾಷೆಯ ಸೌಂದರ್ಯಕ್ಕೆ ತಪ್ಪಿಲ್ಲದ ಭಾಷೆ ಪ್ರಯೋಗ ಅತ್ಯಂತ ಅವಶ್ಯಕ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಭಾಷೆ ಅತ್ಯಂತ ಪುರಾತನವಾದದ್ದು, ಭಾಷೆಯ ಸೌಂದರ್ಯ ಕಾಪಾಡಬೇಕಾದರೆ ತಪ್ಪಿಲ್ಲದ ಭಾಷೆ ಪ್ರಯೋಗ ಅತ್ಯಂತ ಅವಶ್ಯಕ ಎಂದು ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಹೇಳಿದರು.

ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಸಹಯೋಗದಲ್ಲಿ ಸಿರಿಗೆರೆಯ ಶ್ರೀ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನ್ನಡ ಕರಡು ತಿದ್ದುಪಡಿ ಕಮ್ಮಟಉದ್ಘಾಟಿಸಿ ಅವರು ಮಾತನಾಡಿದರು.

ಭಾಷಾ ಬಳಕೆಗೆ ಲಿಪಿಯು ಒಂದು ಉತ್ತಮ ಸಲಕರಣೆ. ಸಲಕರಣೆಯನ್ನು ಸೂಕ್ತವಾಗಿ ಹಾಗೂ ಅತ್ಯಂತ ಸಮರ್ಪಕವಾಗಿ ಬಳಸುವ ಅವಶ್ಯವಿದೆ. ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿರುವ ಇಂತಹ ಕನ್ನಡ ಕರಡು ತಿದ್ದುಪಡಿ ಕಮ್ಮಟವು ಪ್ರಾಧ್ಯಾಪಕರಿಗೆ ಹಾಗೂ ಕನ್ನಡ ಕಲಿಯುವ ಮಕ್ಕಳಿಗೆ ಅತ್ಯಂತ ಉಪಯುಕ್ತವಾಗಲಿದೆ ಎಂದು ಹೇಳಿದರು.

ಪುರಾತನ ಕಾಲದಿಂದ ಸಾವಿರಾರು ಭಾಷೆಗಳು ಚಿತ್ರಗಳ ಮೂಲಕ ಲಿಪಿಯನ್ನು ಆರಂಭಿಸಿ ಹಂತ ಹಂತವಾಗಿ ಅವು ಬೆಳೆದು ಅಕ್ಷರ ರೂಪ ತಾಳಿವೆ. ಅಕ್ಷರ ರೂಪ ತಪ್ಪುಗಳಿಲ್ಲದೆ ಬಳಕೆಯಾದಾಗ ಭಾಷೆಯ ಸೌಂದರ್ಯ ವೃದ್ಧಿಯಾಗುತ್ತದೆ ಎಂದು ಅವರು ಕಿವಿ ಮಾತು ಹೇಳಿದ ಅವರು, ಪುರಾತನ ಲಿಪಿಗಳಲ್ಲಿ ಕನ್ನಡವೂ ಒಂದು.

ಇದನ್ನು ಜಗತ್ತಿನ ಭಾಷೆಗಳ ರಾಣಿ ಎಂದು ವಿನೋಬಾ ಭಾವೆಯವರು ಹೇಳಿದ್ದಾರೆ ಎಂಬುದನ್ನು ಅವರು ಸ್ಮರಿಸಿದರು.
ಕಮ್ಮಟದ ನಿರ್ದೇಶಕ ಕೆ.ರಾಜಕುಮಾರ್ ಮಾತನಾಡಿ, ಕನ್ನಡ ಭಾಷಾ ಬಳಕೆ ಬಗ್ಗೆ ಅತ್ಯಂತ ಎಚ್ಚರವಾಗಿರಬೇಕು. ಬಹಳಷ್ಟು ಜನರು ಕನ್ನಡವನ್ನು ತಪ್ಪು ತಪ್ಪಾಗಿ ಬಳಸುತ್ತಾರೆ. ಲೇಖನ ಚಿಹ್ನೆಗಳ ಬಗ್ಗೆ ಬಹಳಷ್ಟು ಜನರಿಗೆ ತಿಳುವಳಿಕೆ ಕಡಿಮೆ. ಇವುಗಳನ್ನು ತಿಳಿಸಿ ಕೊಡುವುದೇ ಕಮ್ಮಟದ ಉದ್ದೇಶವಾಗಿದೆ ಎಂದರು.

ಡಿಟಿಪಿ ಮಾಡುವವರು ಹಾಗೂ ಲೇಖಕರು ತಮ್ಮ ಹಸ್ತಪ್ರತಿಗಳನ್ನು ತಿದ್ದುವಾಗ ಅತ್ಯಂತ ಎಚ್ಚರಿಕೆಯಿಂದ ಲೇಖನ ಚಿಹ್ನೆಗಳನ್ನು ತಿದ್ದುಪಡಿ ಮಾಡುವ ವಿಧಾನವನ್ನು ಸಮರ್ಥವಾಗಿ ಕಲಿತಿರಬೇಕು ಎಂದು ಅವರು ಹೇಳಿದರು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮಾತನಾಡಿ, ಮನೆಯ ಕತ್ತಲೆ ಓಡಿಸಲು ಮನೆಗೊಂದು ಕಿಟಕಿ ಇರಬೇಕು. ಮನದ ಕತ್ತಲೆ ತೊಳೆಯಲು ಪ್ರತಿ ಮನಸ್ಸಿಗೂ ಒಂದು ಪುಸ್ತಕವಿರಬೇಕು ಎಂದರು.

ಪುಸ್ತಕಗಳು ಮನುಷ್ಯನಿಗೆ ಬದುಕು ಕಲಿಸುತ್ತದೆ. ಬದುಕು ಎಂದರೆ ಬರೀ ಬದುಕುವುದಲ್ಲ. ಬದುಕಿಗೊಂದು ಅರ್ಥ ಬರಬೇಕಾದರೆ ಅಧ್ಯಯನ ಬಹಳ ಮುಖ್ಯ. ಹಾಗಾಗಿ ಪುಸ್ತಕಗಳು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಮಹತ್ವದ ಪಾತ್ರವಹಿಸುತ್ತದೆ. ನಾವು ಓದುವ ಅಭಿರುಚಿಯನ್ನು ಬೆಳೆಸಬೇಕು. ಪುಸ್ತಕ ಪ್ರೀತಿಯನ್ನು ಬೆಳೆಸಬೇಕು ಎಂದು ಹೇಳಿದರು.  
ಪುಸ್ತಕ ಪ್ರಾಧಿಕಾರದ ಯೋಜನೆಗಳ ಬಗ್ಗೆ ವಿವರಿಸಿದ ಮಾನಸ ಅವರು, ಇಂತಹ ಕಮ್ಮಟಗಳು ಸಮರ್ಥ ಭಾಷಾ ಬಳಕೆಗೆ ಅತ್ಯಂತ ಉಪಯುಕ್ತ ಎಂದು ಹೇಳಿದರು.

ಸಮಾರಂಭದಲ್ಲಿ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳನ್ನು ಪುಸ್ತಕ ಪ್ರಾಧಿಕಾರದ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಾಹಿತಿ ಚಿಕ್ಕಣ್ಣ ಯಣ್ಣೆಕಟ್ಟೆ, ಸಿರಿಗೆರೆ ಬೃಹನ್ಮಠದ ವಿದ್ಯಾಂಸ್ಥೆಗಳ ಆಡಳಿತಾಧಿಕಾರಿ ಡಾ. ಎಚ್.ಪಿ.ವಾಮದೇವಪ್ಪ, ವಿಶೇಷಾಧಿಕಾರಿ ವೀರಣ್ಣ ಬಿ ಜತ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಚಿತ್ರದುರ್ಗದ ಸಹಾಯಕ ನಿರ್ದೇಶಕ ಡಾ.ಬಿ.ಎಂ. ಗುರುನಾಥ್ ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ