LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೇ.5 ರಿಯಾಯಿತಿ ಸೌಲಭ್ಯ; ಅವಧಿ ವಿಸ್ತರಣೆ


ಶಿವಮೊಗ್ಗ, ಮಾರ್ಚ್-26): ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ.

ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‌ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್‌ಲೈನ್‌ನಲ್ಲಿ ಹಾಗೂ ಪೇಟಿಎಂ/ನೆಟ್‌ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಶಿವಮೊಗ್ಗ ಒನ್ ವ್ಯವಸ್ಥೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ. ವಿಶೇಷವಾಗಿ 2026-27 ರ ಖಾತೆದಾರರಿಗೆ ಇಡಿಸಿ (ಪಿಓಎಸ್) ಯಂತ್ರಗಳ ಮೂಲಕ ಸ್ವತಿನ ಆಸ್ತಿ ತೆರಿಗೆಯನ್ನು ಪಾವತಿಸಿದ ರಸೀದಿಯನ್ನು ನೀಡಲಾಗುತ್ತದೆ.

ಏ.30 ರವರೆಗೆ ಆರ್ಥಿಕ ವರ್ಷ 2026-27 ನೇ ಸಾಲಿಗೆ ಅನ್ವಯಿಸುವ ಆಸ್ತಿ ತೆರಿಗೆ ಮೇಲಿನ ಶೇ. 5% ರ ತೆರಿಗೆ ರಿಯಾಯಿತಿಯ ಸೌಲಭ್ಯದ ಕಾಲಾವಧಿ ಇರುತ್ತದೆ. ಜೂನ್ 30ರವೆಗೆ ದಂಡರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿರುತ್ತದೆ.

ಜು. 01 ರ ನಂತರ ಪಾವತಿಸಿದಲ್ಲಿ ಮಾಸಿಕ ಶೇ. 2% ರಷ್ಟು ದಂಡದೊAದಿಗೆ ಪಾವತಿಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರು ಏಪ್ರಿಲ್ 2026ರ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಿ ಶೇ. 5%ರ ರಿಯಾಯಿತಿ ಪಡೆಯುವಂತೆ ಹಾಗೂ ಆಸ್ತಿ ತೆರಿಗೆ ಪಾವತಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಎಂದು ಶಿವಮೊಗ್ಗ ಮಹಾನಗರಪಾಲಿಕೆ ಉಪ ಆಯುಕ್ತರು ಪತ್ರಿಕೆ ಪ್ರಕಟಣೆ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು