Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕಟ್ಟಡ ನಿರ್ಮಾಣದ ಮೇಸ್ತ್ರಿಗಳ ಮೇಲೆ ಸುಳ್ಳು ಆರೋಪ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹೆಚ್ಚಿನ ಹಣ ಪಡೆದು ಗಾರೆ ಮೇಸ್ತ್ರಿ ಭದ್ರಾವತಿ ಮಂಜುನಾಥ್ ನಮ್ಮನ್ನು ವಂಚಿಸಿದ್ದಾರೆ ಎಂದು ಮನೆ ಮಾಲೀಕ ಪುಷ್ಪಕ್ ರಾಜ್
  ಸತ್ಯಕ್ಕೆ ದೂರವಾದ ಆರೋಪಮಾಡಿದ್ದಾರೆ ಅಲ್ಲದೆ ತಾಲ್ಲೂಕಿನ ಗಾರೆ ಮೇಸ್ತ್ರಿಗಳಿಗೆ ಕೆಲಸ ಕೊಡಬೇಡಿ ಎಂಬ ಹೇಳಿಕೆಯನ್ನು ನೀಡಿದ್ದು ಈ ಕೂಡಲೇ ಅವರು ಬೇಷರತ್ ಕ್ಷಮೆಯಾಚಿಸಬೇಕು ಎಂದು  ನೆಲದಾಂಜನೇಯಸ್ವಾಮಿ ಕಟ್ಟಡ ಕೂಲಿ ಕಾರ್ಮಿಕರ, ಮೇಸ್ತ್ರಿಗಳ ಸಂಘದ ಅಧ್ಯಕ್ಷ ಅರವಿಂದ್ ಶೇಖರ್ ಗೌಡ ಹೇಳಿದರು. 

 ನಗರದ ಪ್ರವಾಸಿ ಮಂದಿರದಲ್ಲಿ ನೆಲದಾಂಜನೇಯ ಸ್ವಾಮಿ ಕಟ್ಟಡ ಕೂಲಿ ಕಾರ್ಮಿಕರ ಹಾಗೂ ಮೇಸ್ತ್ರಿಗಳ ಸಂಘದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ತಮ್ಮ ಮನೆ ನಿರ್ಮಾಣದ ಕುರಿತು ಹಲವು ಸುಳ್ಳು ಆರೋಪಗಳನ್ನು ಮಾಡಿರುವ ಪುಷ್ಪಕ್ ರಾಜ್ ತಾಲ್ಲೂಕಿನ ಕೂಲಿ ಕಾರ್ಮಿಕರಾಗಿ ಸದಾ ನಿಷ್ಠೆ ಹಾಗು ಪ್ರಾಮಾಣಿಕರಾಗಿ ದುಡಿಯುವ ಗಾರೆ ಮೇಸ್ತ್ರಿಗಳ ಮೇಲೆ ಗಂಭೀರ ಆರೋಪ  ಮಾಡಿದ್ದು , ಸ್ಥಳೀಯ ಮೇಸ್ತ್ರಿಗಳಿಗೆ ಮನೆ ಕಟ್ಟುವ ಕೆಲಸ ನೀಡದಂತೆ ಮಾಧ್ಯಮ ಹೇಳಿಕೆ ನೀಡಿದ್ದು  ಈ ಹೇಳಿಕೆಯನ್ನು  ನಮ್ಮ ಸಂಘ ಖಂಡಿಸುತ್ತದೆ . ಅಲ್ಲದೆ ಮುಂದಿನ  ದಿನಗಳಲ್ಲಿ ಅವರ ವಿರುದ್ಧ ಕಾನೂನು ದಾವೆ ಹೂಡುವ ಮೂಲಕ ಹೋರಾಟ ನೆಡೆಸಲಾಗುವುದು ಎಂದರು.

ಕಟ್ಟಡ ಕಾರ್ಮಿಕ ಹಾಗೂ ಗಾರೆ ಮೇಸ್ತ್ರಿ ಭದ್ರಾವತಿ ಮಂಜುನಾಥ್ ಮಾತನಾಡಿ ನಾನು ತಾಲ್ಲೂಕಿನ ಸೋಮೇಶ್ವರ ಬಡಾವಣೆಯ ನಿವಾಸಿಯಾಗಿದ್ದು  ಕಳೆದ 20 ವರ್ಷಗಳಿಂದ ಗಾರೆ ಮೇಸ್ತ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ .ನಗರದ ಕುಚ್ಚಪ್ಪನ ಪೇಟೆಯ ಕಾಳಮ್ಮ ದೇವಾಲಯದ ರಸ್ತೆಯಲ್ಲಿ ಕಳೆದ ಜೂನ್ 2023 ರಲ್ಲಿ ವರ್ಷ ಪ್ರದೀಪ್ ಹಾಗು ಪುಷಕ್ ರಾಜ್ ಎಂಬುವರ ಒಂದು ಕಟ್ಟಡ ನಿರ್ಮಾಣದ ಕೆಲಸ ವಹಿಸಿಕೊಂಡಿದ್ದು , ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ (agreement ) ಕೂಡ ಮಾಡಿಕೊಂಡಿದ್ದು ,ಒಟ್ಟಾರೆ 4 ಅಂತಸ್ತಿನ ಮನೆಯಾಗಿದ್ದು 18 ಚದುರ ಅಡಿಗಳ ಕಟ್ಟಡವಾಗಿರುತ್ತದೆ . 2ಲಕ್ಷದ 15 ಸಾವಿರರೂಗಳಂತೆ ಪ್ರತಿ ಚದರಕ್ಕೂ ಮನೆ ನಿರ್ಮಿಸುವ ಒಪ್ಪಂದವಾಗಿತ್ತು .ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅವಶ್ಯಕ ಸುಮಾರು 35 ವಸ್ತುಗಳ ಪಟ್ಟಿ ಒಳಗೊಂಡಂತೆ 6 ತಿಂಗಳುಗಳ ಒಳಗೆ ಮನೆ ನಿರ್ಮಿಸಿಕೊಡುವಂತೆ ಇಬ್ಬರ ನಡುವೆ ಅಗ್ರಿಮೆಂಟ್ ಮಾಡಲಾಗಿತ್ತು  . ಇದೆ ಒಡಂಬಡಿಕೆಯಲ್ಲಿ ನಾವು ಮಾಡಿಕೊಂಡಿದ್ದ ಒಪ್ಪಂದದಂತೆ ಸೂಕ್ತ ಸಮಯಕ್ಕೆ ಹಣ ನೀಡದೆ  ಕೆಲಸ ವಿಳಂಬಕ್ಕೆ ಕಾರಣವಾದರು. ಆದರೂ ನಾವು ಫೆಬ್ರುವರಿ 2024 ರವರೆಗೂ ಕೆಲಸ ಮಾಡಿ ಶೇ .9o ರಷ್ಟು  ಕಟ್ಟಡ ಕೆಲಸ ಮುಗಿಸಿದ್ದರೂ ನಮಗೆ ನೀಡಬೇಕಿದ್ದ ಹಣ ನೀಡದೆ ಸತಾಯಿಸಿದರು.

ಅಲ್ಲದೆ ನನ್ನ ವಿರುದ್ಧವಾಗಿ ವಂಚನೆ ಮಾಡಿದ್ದೇನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ  ನಮ್ಮ ಸಂಘಕ್ಕೆ ಸೂಚಿಸಿದ ಹಿನ್ನಲೆ ಪರಿಣಿತಿ ಪಡೆದ ಇಂಜಿನಿಯರ್ ಮುಖೇನ ಮನೆಯ ನಿರ್ಮಾಣದ ವೆಚ್ಚದ ಮೌಲ್ಯವನ್ನು ಅಳೆಯಲಾಗಿ ಒಟ್ಟು 41,11, 000 ನಿಗಧಿ ಮಾಡಿ ಈಗಾಗಲೇ ಶೇ 90 ರಷ್ಟು  ಕೆಲಸ ಮಾಡಿರುವ ಹಿನ್ನಲೆ ಮೇಸ್ತ್ರಿ ಮಂಜುನಾಥ್ ಅವರಿಗೆ ನೀಡಿರುವ 26 ಲಕ್ಷ ಹೊರತುಪಡಿಸಿ ಉಳಿಕೆ ಮೊತ್ತವನ್ನು ನೀಡಬೇಕು ಎಂದು ತಿಳಿಸಲಾಗಿತ್ತು.  ಅದರಂತೆ ನಮ್ಮ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ 11,14,000 ಹಣವನ್ನು ನಾನು ಬಾಕಿ ನೀಡಬೇಕಿದ್ದ ಹಲವರಿಗೆ ನೇರವಾಗಿ ಪುಷ್ಪಕ್ ರಾಜು ಅವರೇ ನೀಡಿ 28/3/2025 ರಲ್ಲಿ ಎರಡನೇ ಅಗ್ರಿಮೆಂಟ್ ಮಾಡಿಕೊಂಡು ಒಂದು ತಿಂಗಳ ಗಡವು ನೀಡಿ ಮನೆ ಕೆಲಸ ಪೂರ್ಣಗೊಳಿಸುವಂತೆ ತಿಳಿಸುತ್ತಾರೆ.

ಜೊತೆಗೆ ಉಳಿಕೆ ಹಣವನ್ನು ಗೃಹಪ್ರವೇಶದ ನಂತರ ನೀಡುತ್ತೇವೆ ಎಂದು ತಿಳಿಸಿರುತ್ತಾರೆ. ಕೊಟ್ಟ ಮಾತಿನಂತೆ ನಾನು ನನ್ನ ಕರ್ತವ್ಯ ನಿರ್ವಹಿಸಿ ಕಟ್ಟಡವನ್ನು ಮಾಲೀಕರಿಗೆ ಹಸ್ತಾಂತರಿಸಿದ್ದೇನೆ.ಆದರೆ ಈ ವರೆಗೂ ನನಗೆ ಬರಬೇಕಿದ್ದ 3,60,000 ಹಣ ನೀಡದೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಮನೆ ಮಾಲೀಕರಿಗೆ ಯಾವುದೇ ರೀತಿಯ ಮೋಸ ವಂಚನೆ ಮಾಡಿಲ್ಲ ಎಂದರು.

ವಕೀಲರಾದ ಸುರೇಶ್ ಈ ಪ್ರಕರಣದಲ್ಲಿ ಕೋರ್ಟ್ ನಾವು ಸಲ್ಲಿಸಿದ್ದ ಅರ್ಜಿ ಹಾಗು ದಾಖಲಾತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದ ಕಾರಣ ನ್ಯಾಯಾಲಯದ ತೀರ್ಪು ನಮ್ಮ ವಿರುದ್ಧ ಬಂದಿದೆ. ಮೇಲ್ಮನವಿ ಕೋರಿ ಈಗಾಗಲೇ ನಾವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ಸೂಕ್ತ ದಾಖಲೆಗಳನ್ನು ಒದಗಿಸಿ ನ್ಯಾಯ ಪಡೆಯಲಿದ್ದೇವೆ. ಮನೆ ಮಾಲೀಕ ಪುಷ್ಪಕ್ ರಾಜ್ ತಾಲೂಕಿನ ಎಲ್ಲ ಗಾರೆ ಮೇಸ್ತ್ರಿಗಳ ಬಗ್ಗೆ ಮಾಡಿರುವ ಆರೋಪ ಸರಿಯಿಲ್ಲ. ಈ ಬಗ್ಗೆ ಕಾನೂನು ಹೋರಾಟಕ್ಕೆ ಮುಂದಾಗಿದ್ದು ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮೂಲಕವೇ ಉತ್ತರಿಸಲಿದ್ದೇವೆ ಎಂದರು. 

ಈ ವೇಳೆ ನೆಲದಾಂಜನೇಯಸ್ವಾಮಿ ಕಟ್ಟಡ ಕೂಲಿ ಕಾರ್ಮಿಕರ, ಮೇಸ್ತ್ರಿಗಳ ಸಂಘದ ಸಲಹೆಗಾರ ಚಂದ್ರಪ್ಪ, ಅಧ್ಯಕ್ಷ ಅರವಿಂದ್ ಶೇಖರ್ ಗೌಡ, ಉಪಾಧ್ಯಕ್ಷ ಮಲ್ಲೇಶ್, ಖಜಾಂಚಿ ಸತೀಶ್, ಭದ್ರಾವತಿ ಮಂಜುನಾಥ್, ಕಾನೂನು ಸಲಹೆಗಾರ ಸುರೇಶ ಕುಮಾರ್, ಸಂಚಾಲಕ ರಾಜಣ್ಣ, ಸಿದ್ದಪ್ಪ, ಎಂಜಿನಿಯರ್ ಪ್ರೇಮ್ ಕುಮಾರ್, ಸಹ ಕಾರ್ಯದರ್ಶಿ ದೀಪು ನಾಯಕ್, ಎಲ್. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ