Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ವಿಳಂಬ, ಮುತ್ತಿಗೆ ಹಾಕಿ ಪ್ರತಿಭಟಿಸಿದ ರೈತ ಸಂಘ

ಚಂದ್ರವಳ್ಳಿ ನ್ಯೂಸ್, ಹಿರಿಯೂರು
ನಗರದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ನಗರಸಭೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಮುತ್ಚಿಗೆ ಹಾಕಿ ಪ್ರತಿಭಟನೆ ಮಾಡಲಾಯಿತು.


ಶೀಘ್ರವಾಗಿ ರಸ್ತೆ ಕಾಮಗಾರಿ ಮುಗಿಸುವಂತೆ ಒತ್ತಾಯಿಸಿ ನಗರ ಸಭೆ ಪೌರಾಯುಕ್ತ ಎ ವಾಸೀಂ ರವರಗೆ ಮನವಿ ಪತ್ರ ಸಲ್ಲಿಸಿದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಕೆ ಟಿ ತಿಪ್ಪೇಸ್ವಾಮಿ ಮಾತನಾಡಿ ಅಂಬೇಡ್ಕರ್ ವೃತ್ತದಿಂದ ವೇದಾವತಿ ನದಿ ಸೇತುವೆವರೆಗೂ ನಡೆಯುತ್ತಿರುವ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಕಾಮಗಾರಿ ವಿಳಂಬ ಮಾಡುತ್ತಿದ್ದಾರೆ ಕಾಮಗಾರಿಯಲ್ಲಿ ತೀವ್ರ ಕಳಪೆ ನಡೆಯುತ್ತಿರುವ ಬಗ್ಗೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ವಹಿಸುತ್ತಿಲ್ಲ. ಮುಖ್ಯರಸ್ತೆಯಲ್ಲಿ ವಾಹನ ದಟ್ಟಣೆ ಜಾಸ್ತಿಯಾಗಿದ್ದು ಅಲ್ಲಲ್ಲಿ ಗುಂಡಿಗಳು ಬಿದ್ದಿವೆ ಮಳೆ ಬಂದು ನೀರು ತುಂಬಿದರೆ ಕೆಸರು ಸಿಡಿಯುತ್ತದೆ ಎಂದು ಅವರು ಕಿಡಿ ಕಾರಿದರು.


ರಸ್ತೆಗೆ ಸರಿಯಾಗಿ ನೀರು ಹಾಕದೆ ಇರುವುದರಿಂದ ಧೂಳು ತುಂಬಿ ನಾಗರಿಕರಿಗೆ ಓಡಾಡಲು ತೊಂದರೆ ಆಗುತ್ತದೆ. ಜಲ್ಲಿಕಲ್ಲು ತೇಲಿರುವುದರಿಂದ ವಾಹನ ಸವಾರರ ಮುಖಕ್ಕೆ ಏನಾದರೂ ಹೊಡೆಯಿತು ಎಂದರೆ ತುಂಬಾ ತೊಂದರೆ ಆಗುತ್ತದೆ. ತುರ್ತಾಗಿ ಕಾಮಗಾರಿ ಮುಗಿಸುವಂತೆ ಅವರು ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಆಲೂರು ಸಿದ್ದರಾಮಣ್ಣ, ಸಣ್ಣ ತಿಮ್ಮಣ್ಣ, ವೀರಣ್ಣ ಗೌಡ, ಜಯಣ್ಣ, ಜಗನ್ನಾಥ್, ವಿರುಪಾಕ್ಷಪ್ಪ, ಹಳ್ಳಿಕೆರೆ ತಿಪ್ಪೇಸ್ವಾಮಿ, ರಾಮಣ್ಣ, ಮೀಸೆ ಗೌಡಪ್ಪ, ಬಾಲಕೃಷ್ಣ, ತಿಮ್ಮಾರೆಡ್ಡಿ, ರಂಗಜ್ಜ, ಜಗದೀ,ಶ್ ನಾಗರಾಜಪ್ಪ, ಶಹಜಾನ್, ಮಂಜುನಾಥ್, ತಿಪ್ಪೇಸ್ವಾಮಿ, ಈರಣ್ಣ, ರಮೇಶ್, ರಾಜಪ್ಪ ಭಾಗವಹಿಸಿದ್ದರು.

ವೇದಾವತಿ ಸೇತುವೆಯಿಂದ ಗಾಂಧಿ ವೃತದವರೆಗೆ ರಸ್ತೆ ಅಗಲೀಕರಣ ವಿಚಾರವಾಗಿ ಒತ್ತುವರಿ ಆಗಿರುವ ಕಟ್ಟಡವನ್ನು ತೆರವುಗೊಳಿಸದೆ ರಸ್ತೆ ಅಗಲೀಕರಣ ಮಾಡದೇ ಇರುವುದರಿಂದ ನಗರದ ಒಳಗೆ ಬರುವ ವಾಹನಗಳಿಂದ ಟ್ರಾಫಿಕ್ ಜಾಮ್ ಆಗುತ್ತದೆ ಮತ್ತು ಈಗಾಗಲೇ ರೆಡ್ಡಿ ಹೋಟೆಲ್ ನಿಂದ  ಗಾಂಧಿ ಸರ್ಕಲ್, ಗಾಂಧಿ ಸರ್ಕಲ್ ಯಿಂದ ಹುಳಿಯಾರು ರಸ್ತೆ,

ಚಾನೆಲ್ ಹೊರಗೆ ರಸ್ತೆ ಅಗಲೀಕರಣ ಕಾಮಗಾರಿ ರಸ್ತೆ ಹಂಚಿನಿಂದ ಎರಡು ಬದಿಯಲ್ಲೂ ಈ ಕಡೆ ಮೂರು ಮೀಟರ್ ಆಕಡೆ ಮೂರು ಮೀಟರ್ ಅಗಲೀಕರಣ ಮಾಡಲಾಗಿದ್ದು ರಾತ್ರೋರಾತ್ರಿ ಡಾಂಬರೀಕರಣ ಮಾಡಿ ನಿಯಮ ಉಲ್ಲಂಘನೆ ಮಾಡಿ ಕಳಪೆ ಕಾಮಗಾರಿ ಮಾಡಿ ಹಣ ಪಡೆಯಲಾಗಿದೆ ಮತ್ತು ನಗರದಲ್ಲಿ 12 ಕೋಟಿ ವಿಶೇಷ ಅನುದಾನದಲ್ಲಿ ವಿವಿಧ ಕಾಮಗಾರಿ ನಡೆಸದೇ ಹಣ ಪಡೆದಿರುತ್ತಾರೆ ಎಂದು ಸಾರ್ವಜನಿಕರು ಅಲ್ಲಲ್ಲಿ ಮಾತನಾಡುತ್ತಿದ್ದಾರೆ ಇವುಗಳ ಬಗ್ಗೆ ತುರ್ತಾಗಿ ಕ್ರಮವಹಿಸಿ ನಗರದ ಸಾರ್ವಜನಿಕರಿಗೆ ಅನುಕೂಲ ಮಾಡುವಂತೆ ಸೂಕ್ತ ತನಿಖೆ ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ವತಿಯಿಂದ ಒತ್ತಾಯಿಸಿದೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ