Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೊನೆಗೂ ಲಾವಣ್ಯ ಹಂತಕನ ಸೆರೆ

ಮಂಗಳೂರು: ಬಸ್‌ ನಿಲ್ದಾಣದಲ್ಲಿ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಭೀಕರ ಘಟನೆಯಲ್ಲಿ ಯುವತಿಯ ಹತ್ಯೆ ಪ್ರಕರಣ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಸಮೀಪದ ವಾಮಂಜೂರು ಪಚ್ಚನಾಡಿಯಲ್ಲಿ ಹಂತಕ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವತಿಯನ್ನು ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕೆಲಸ ಮುಗಿಸಿ ಮನೆಗೆ ತೆರಳಲು ಬಸ್‌ ಕಾಯುತ್ತಿದ್ದ ವೇಳೆ ಆರೋಪಿ ಮಾರಕಾಸ್ತ್ರದಿಂದ ಹಲವು ಬಾರಿ ಹಲ್ಲೆ ನಡೆಸಿದ್ದಾನ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದರು.

ಘಟನೆ ವಿವರ :
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದರು. ಸಾರ್ವಜನಿಕರ ಮುಂದೆಯೇ ಯುವಕನೋರ್ವ ಯುವತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಗುರುವಾರ (ಜುಲೈ 16) ಸಂಜೆ ನಡೆದಿತ್ತು.
ಮೃತ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವು ಗ್ರಾಮದ ಉಳಿ ನಿವಾಸಿ ಲಾವಣ್ಯ (21) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ (22) ಎಂದು ಪೊಲೀಸರು ಗುರುತಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಮೃತಳಿಗೆ ದೂರದ ಸಂಬಂಧಿಕನಾಗಿದ್ದು, ಲಾವಣ್ಯ ನಿರಾಕರಿಸಿದರೂ ಆತ ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಹಾಗೂ ಹಿಂಬಾಲಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಲಾವಣ್ಯ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಕೆಲಸ ಮುಗಿಸಿ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದ ಅವರು ಕಕ್ಕೆಪದವುಗೆ ತೆರಳುವ ಬಸ್‌ಗೆ ಹತ್ತಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಆರೋಪಿಯನ್ನು ಗಮನಿಸಿದ ಲಾವಣ್ಯ, ಬಸ್‌ನಿಂದ ಇಳಿದು ಸ್ಥಳದಿಂದ ಹೊರಟು ಹೋಗಲು ಪ್ರಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಆರೋಪಿಯು ಆಕೆಯನ್ನು ಬೆನ್ನಟ್ಟಿದ್ದು, ತನ್ನ ಬ್ಯಾಗ್‌ನಲ್ಲಿದ್ದ ಮಾರಕಾಸ್ತ್ರ ಹೊರತೆಗೆದು ಲಾವಣ್ಯ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಲಾವಣ್ಯ ಎಷ್ಟೇ ಪ್ರಯತ್ನಿಸಿದರೂ ಆರೋಪಿಯು ಆಕೆಯನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಲಾವಣ್ಯ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಯು ಬಸ್ ನಿಲ್ದಾಣದ ಮತ್ತೊಂದು ಬದಿಯಿಂದ ಪರಾರಿಯಾಗಿಯಾಗಿದ್ದಾನೆ.

ಗುರುವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ನೂರಾರು ಪ್ರಯಾಣಿಕರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಈ ಭೀಕರ ಕೃತ್ಯದಿಂದ ಬಸ್ ನಿಲ್ದಾಣದಲ್ಲಿದ್ದ ಜನರು ಬೆಚ್ಚಿಬಿದ್ದಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಡಾ. ಅರುಣಕುಮಾರ ಪ್ರತಿಕ್ರಿಯಿಸಿ, “ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಯುವಕನೋರ್ವ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಮಾಹಿತಿ ದೊರೆತಿದೆ. ಆರೋಪಿಯನ್ನು ಶೀಘ್ರವೇ ಪತ್ತೆಹಚ್ಚಿ ಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ಈಗಾಗಲೇ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಹಿಂದಿನ ಉದ್ದೇಶ ಸೇರಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಈ ಕೊಲೆಯು ಏಕಮುಖ ಪ್ರೇಮ ಪ್ರಕರಣದ ಹಿನ್ನೆಲೆಯಿಂದ ನಡೆದಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ನಿಖರ ಕಾರಣವು ಸಮಗ್ರ ತನಿಖೆಯ ಬಳಿಕವೇ ತಿಳಿದುಬರಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಆರೋಪಿಯನ್ನು ಬಂಧಿಸಲು ಬೃಹತ್ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಹಲವು ವಿಶೇಷ ಪೊಲೀಸ್ ತಂಡಗಳು ವಿವಿಧ ಕಡೆಗಳಲ್ಲಿ ತೀವ್ರ ಶೋಧ ಮುಂದುವರಿಸಿವೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ