Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಬಡ-ಪ್ರತಿಭಾವಂತ ವಿದ್ಯಾರ್ಥಿಗಳ ಎಂಬಿಬಿಎಸ್ ಶಿಕ್ಷಣಕ್ಕೆ ಆರ್ಥಿಕ ನೆರವು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಬ್ಬರು ಬಡ-ಪ್ರತಿಭಾವಂತ ವಿದ್ಯಾರ್ಥಿಗಳ ಎಂಬಿಬಿಎಸ್ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ನೀಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಸರಕಾರಿ ಕೋಟಾದಡಿ ಎಂಬಿಬಿಎಂ ಗೆ ಪ್ರವೇಶ ಪಡೆದರೂ ಶುಲ್ಕ ಭರಿಸಲಾಗದೆ ಆರ್ಥಿಕ ಸಮಸ್ಯೆಯಿಂದಾಗಿ ಕಷ್ಟಪಡುತ್ತಿದ್ದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿಎಲ್ ಡಿಇಎ ವತಿಯಿಂದ ನೆರವು ನೀಡಲಾಯಿತು ಎಂದು ಸಚಿವರು ತಿಳಿಸಿದರು.

ತಿಕೋಟಾ ತಾಲೂಕಿನ ಅರಕೇರಿ ಎಲ್.ಟಿ.1ರ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ ನೀಟ್ ನಲ್ಲಿ 2,23,424 ರ್ಯಾಂಕ್ ಪಡೆದಿದ್ದು, ಬೆಂಗಳೂರಿನ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾಳೆ.
ವಿಜಯಪುರ ನಗರದ ನಿವಾಸಿ ಮಂಜುನಾಥ ಲಕ್ಷ್ಮಣ ಗೊಟಗುಣಕಿ
76,372 ರ್ಯಾಂಕ್ ಪಡೆದು, ಚಿತ್ರದುರ್ಗದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾರೆ.

ದಿವ್ಯಾ ಹನಮಂತ ರಾಠೋಡಗೆ ಕೋರ್ಸ್ ಪೂರ್ಣಗೊಳಿಸಲು ಒಟ್ಟು ರೂ. 9,98,484 ಅಗತ್ಯವಿದ್ದು, ಮೊದಲ ವರ್ಷಕ್ಕೆ ಅಗತ್ಯವಾದ ರೂ. 2,49,621 ಹಣದ ಚೆಕ್ ಮತ್ತು ಮಂಜುನಾಥ ಗೊಟಗುಣಕಿಗೆ ಕೋರ್ಸ್ ಪೂರ್ಣಗೊಳಿಸಲು ರೂ. 6.32 ಲಕ್ಷ ಅಗತ್ಯವಿದ್ದು, ಪ್ರಥಮ ವರ್ಷಕ್ಕೆ ಅಗತ್ಯವಾದ ರೂ. 1.58 ಲಕ್ಷದ ಮೊತ್ತದ ಮೊದಲ ಕಂತಿನ ಚೆಕ್ ನ್ನು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರ ಸಮಕ್ಷಮದಲ್ಲಿ ವಿತರಿಸಲಾಯಿತು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ಈ ವೇಳೆ ಇಬ್ಬರೂ ವಿದ್ಯಾರ್ಥಿಗಳು ಅಧ್ಯಯನಮಾಡಿ, ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ, ಆದರ್ಶ ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕೆಂದು ಸಚಿವರು ತಿಳಿಸಿದರು.

ಶಿಕ್ಷಣಕ್ಕೆ ನೀಡಿದ ಈ ನೆರವು, ಕನಸುಗಳಿಗೂ ಹೊಸ ಜೀವ ತುಂಬಿ, ನಾಳೆಯ ಮಾನವೀಯ ವೈದ್ಯರನ್ನು ರೂಪಿಸುವ ಭರವಸೆಯ ಹೆಜ್ಜೆಯಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ