LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೈಲ ಪುತ್ರಿ ( ನವರಾತ್ರಿಯ ಮೊದಲ ದಿನ )

ನವರಾತ್ರಿ ಇಲ್ಲವೆ ದಸರಾ ಎಂದು ಕರೆಯಲ್ಪಡುವ ಈ ಹಬ್ಬದಲ್ಲಿ ನಾವು ಶಕ್ತಿ ದೇವತೆ ದೇವಿಯನ್ನು ಒಂಬತ್ತು ಬೇರೆ ಬೇರೆ ವಿಧದ ರೂಪಗಳಲ್ಲಿ ಪೂಜಿಸುತ್ತೇವೆ. ಹರಿಹರ ಬ್ರಹ್ಮಾದಿಗಳನ್ನು ಸೃಷ್ಟಿಸಿದ ದೇವಿಯು ಅವರಿಗೆ ಶೈಲ ಪುತ್ರಿ ( ನವರಾತ್ರಿಯ ಮೊದಲ ದಿನ)ಈ ಜಗತ್ತಿನ ಸೃಷ್ಟಿ, ಸ್ಥಿತಿ ಮತ್ತು ಲಯಗಳನ್ನು
ನಿರ್ವಹಿಸಲು ಆದೇಶಿಸಿದಳು.
ಹರಿಹರ ಬ್ರಹ್ಮಾದಿಗಳು ದೇವಿಯ ಆದೇಶದಂತೆ ತಮ್ಮ ಶೈಲ ಪುತ್ರಿ ( ನವರಾತ್ರಿಯ ಮೊದಲ ದಿನ )ಕಾರ್ಯವನ್ನು ನೆರವೇರಿಸುತ್ತಿದ್ದರೂ ಆಗಾಗ ಬಂದೊದಗುವ ವಿಘ್ನಗಳನ್ನು, ರಾಕ್ಷಸರನ್ನು ನಿವಾರಿಸಲು ಶ್ರೀದೇವಿಯಿಂದಲೇ ಸಾಧ್ಯವಾಗಿದ್ದು ಆಕೆ ಮಾತೃ ಸ್ವರೂಪಳು.
ಸ್ತ್ರೀ ಕುಲದ ಪಾರಮ್ಯವನ್ನು ಸೂಚಿಸುವ ಈ ನವರಾತ್ರಿಯ ಹಬ್ಬದಲ್ಲಿ ಶಕ್ತಿ ಸ್ವರೂಪಿಣಿ ದೇವಿಯನ್ನು ವಿವಿಧ ರೂಪಗಳಲ್ಲಿ ಪೂಜಿಸುತ್ತಾರೆ.
ಪ್ರಥಮಂ ಶೈಲ ಪುತ್ರಿಚ,ದ್ವಿತೀಯಂ ಬ್ರಹ್ಮಚಾರಿಣಿ  ತೃತೀಯಂ ಚಂದ್ರಘ0ಟೇತಿ,ಕೂಶ್ಮಾಂಡೇತಿ ಚತುರ್ಥಕಂ.
ಪಂಚಮಂ ಸ್ಕಂದ ಮಾತೇ ತೀ,ಷಷ್ಠಂ  ಕಾತ್ಯಾಯನೀತಿ ಚ
ಸಪ್ತಮಂ ಕಾಲರೇತಿಚ,ಮಹಾ ಗೌರಿತಿ ಚಾಷ್ಟಮಂ
ನವಮಂ ಸಿದ್ದಿ ಧಾತ್ರಿಚ,ನವದುರ್ಗ ಪ್ರಕೀರ್ತಿತಹ ಉಕ್ತಾನೇತ್ಯಾನಿ ನಾಮಾನಿ,ಬ್ರಹ್ಮಣ್ಣೈವ ಮಹಾತ್ಯನಾ
ಅಗ್ನಿನಾ ದಹ್ಯ ಮಾನಸ್ತು ಶತ್ರು ಮಧ್ಯೆ ಗತೋರಣೆ  ವಿಷಮೆ ದುರ್ಗವೇ ಚೈವ ಭಯಾರ್ಥಾ ಶರಣಂ ಗತಹ
ನವರಾತ್ರಿಯ ಪ್ರಥಮ ದಿವಸ ಶೈಲ ಪುತ್ರಿಯನ್ನು ಪೂಜಿಸುವರು. ಶೈಲ ಪುತ್ರಿಯು ಹೆಸರೇ ಹೇಳುವಂತೆ ಹಿಮವಂತನ ಮಗಳಾಗಿದ್ದು ತಾಯಿ ದುರ್ಗೆಯ ಮೊದಲ ಪುನರ್ಜನ್ಮವಾಗಿದ್ದಾಳೆ. ಹಳದಿ ವರ್ಣದ ಬಟ್ಟೆಯನ್ನು ಧರಿಸಿದ್ದು ಶುದ್ಧತೆ ಮತ್ತು ಪ್ರಕೃತಿಯ ಪ್ರತೀಕವಾಗಿರುವ ಆಕೆ, ಶೂಲವನ್ನು ಕೈಯಲ್ಲಿ ಹಿಡಿದು  ವೃಷಭಾರೂಢಳಾಗಿದ್ದಾಳೆ . ಹಳದಿ ಬಣ್ಣವು ಚೈತನ್ಯ ಮತ್ತು ಶಾಂತಿ ಸಮಾಧಾನಗಳ ಸಂಕೇತವಾಗಿದ್ದು ಬ್ರಾಹ್ಮಿ ಮುಹೂರ್ತದಲ್ಲಿ ಶುಬ್ರಸ್ನಾತರಾಗಿ ಹಳದಿ ಬಟ್ಟೆಗಳನ್ನು ಧರಿಸಿ ದೇವಿಯನ್ನು ಪೂಜಿಸಿ ಆಕೆಯ ಕೃಪೆಗೆ ಪಾತ್ರರಾಗಬೇಕು.
ವಂದೇ ವಾಂಚಿತ ಲಾಭಾಯ,ಚಂದ್ರಾರ್ಥಕೃತ ಶೇಖರಾಂ
ವೃಷಾರೂಢಮ್ ಶೂಲ ಧರಾಂ, ಶೈಲ ಪುತ್ರಿ ಯಶಸ್ವಿನಿಂ
ಎಂಬ ಮಂತ್ರವನ್ನು ಜಪಿಸುತ್ತಾ ದೇವಿಯನ್ನು ಪೂಜಿಸಬೇಕು.

ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು