LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿ

ಚಳಿಗಾಲ ಆರಂಭವಾಗಿದ್ದು ಕೆಮ್ಮು, ನೆಗಡಿ, ಮುಂತಾದ ಸಮಸ್ಯೆಗಳು ಕಾಡುವುದು ಸಾಮಾನ್ಯ. ಕೆಮ್ಮಿನ ಬಗ್ಗೆ ಹೇಳುವುದಾದರೆ, ವಾತ, ಪಿತ್ತ ಮತ್ತು ಕಫದ ಅಸಮತೋಲನ ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಎರಡು ವಿಧದ ಕೆಮ್ಮುಗಳಿವೆ. ಅದರಲ್ಲಿ ಒಂದು ಕಫದ ಕೆಮ್ಮು ಮತ್ತು ಇನ್ನೊಂದು ಒಣ ಕೆಮ್ಮು. ಒಣ ಕೆಮ್ಮಿನಲ್ಲಿ ಗಂಟಲು ನೋವು ಇರುತ್ತದೆ. ಕೆಮ್ಮು ಹೆಚ್ಚಾದಾಗ, ಪಕ್ಕೆಲುಬುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಇದು ಟಿಬಿಗೆ ಕಾರಣವಾಗುತ್ತದೆ. ಒಣ ಕೆಮ್ಮನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಬಳಸಿ. ವಾಸ್ತವವಾಗಿ ಒಣ ಕೆಮ್ಮು ಗುಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಒಣ ಕೆಮ್ಮಿನಿಂದ ತೊಂದರೆಗೊಳಗಾಗಿದ್ದರೆ, ಇಲ್ಲಿ ತಿಳಿಸಲಾದ ಕೆಲವು ಮನೆಮದ್ದುಗಳು ನಿಮಗೆ ಉಪಯುಕ್ತವಾಗಬಹುದು.



ಬಿಸಿ ನೀರು ಮತ್ತು ಉಪ್ಪುಬಿಸಿ ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಬಾಯಿ ಮುಕ್ಕಿಳಸುವುದರಿಂದ ಒಣ ಕೆಮ್ಮು ದೂರವಾಗುತ್ತದೆ. ಅಷ್ಟೇ ಅಲ್ಲ ಗಂಟಲಿನಲ್ಲಿ ಚುಚ್ಚುವಿಕೆಯಂತಹ ಸಮಸ್ಯೆಗಳನ್ನು ಇದು ತೆಗೆದುಹಾಕಲು ಉತ್ತಮವೆಂದು ಪರಿಗಣಿಸಲಾಗುತ್ತದೆ. ಬೆಚ್ಚಗಿನ ನೀರಿನಲ್ಲಿ ಸ್ವಲ್ಪ ಉಪ್ಪು ತೆಗೆದುಕೊಂಡು ಸುಮಾರು 10 ನಿಮಿಷಗಳ ಕಾಲ ಬಾಯಿ ಮುಕ್ಕಳಿಸಿ. ಕೆಮ್ಮು ಹೆಚ್ಚಾಗಿದ್ದರೆ ದಿನಕ್ಕೆ ಸುಮಾರು 3 ಬಾರಿ ಇದನ್ನು ಮಾಡಿ.

ಅರಿಶಿಣ ಮತ್ತು ಹಾಲುಅರಿಶಿಣವು ಅನೇಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ ಮತ್ತು ಈ ಕಾರಣಕ್ಕಾಗಿ ಇದನ್ನು ಅನೇಕ ರೋಗಗಳ ತಡೆಗಟ್ಟುವಿಕೆಗೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಒಣ ಕೆಮ್ಮಿನ ಸಮಸ್ಯೆ ಇರುವಾಗ ರಾತ್ರಿ ಬೆಚ್ಚನೆಯ ಹಾಲಿಗೆ ಅರಿಶಿಣ ಬೆರೆಸಿ ಕುಡಿಯುವುದರಿಂದ ಪರಿಹಾರ ಸಿಗುತ್ತದೆ. ಇದು ನೈಸರ್ಗಿಕ ಪ್ರತಿಜೀವಕದಂತೆ ಕಾರ್ಯನಿರ್ವಹಿಸುತ್ತದೆ.

ಜೇನುತುಪ್ಪಒಣ ಕೆಮ್ಮಿನ ಚಿಕಿತ್ಸೆಗಾಗಿ ಜೇನುತುಪ್ಪವನ್ನು ಅತ್ಯುತ್ತಮ ಆಯ್ಕೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಬ್ಯಾಕ್ಟೀರಿಯಾಗಳು ಕೆಮ್ಮನ್ನು ಉಂಟುಮಾಡುವ ಸಾಧ್ಯತೆ ಹೆಚ್ಚು ಮತ್ತು ಜೇನುತುಪ್ಪವು ಈ ಸೂಕ್ಷ್ಮಾಣುಗಳನ್ನು ನಿವಾರಿಸುವ ಗುಣಗಳನ್ನು ಹೊಂದಿದೆ. ಆದ್ದರಿಂದ, ಮಲಗುವ ಸಮಯದಲ್ಲಿ ಖಂಡಿತವಾಗಿಯೂ ಸ್ವಲ್ಪ ಜೇನುತುಪ್ಪವನ್ನು ಸೇವಿಸಿ. ಹೀಗೆ ಮಾಡುವುದರಿಂದ ಗಂಟಲಿನಲ್ಲಿ ತೇವಾಂಶವೂ ಸೇರಿ ಕೆಮ್ಮು ನಿವಾರಣೆಯಾಗುತ್ತದೆ.



ಸ್ಟೀಮ್​ ತೆಗೆದುಕೊಳ್ಳಿಶೀತ ಅಥವಾ ಕೆಮ್ಮಿನಿಂದ ಪರಿಹಾರ ಪಡೆಯಲು ಸ್ಟೀಮ್​ ತೆಗೆದುಕೊಳ್ಳುವುದು ಉತ್ತಮ. ಅತಿಯಾದ ಕೆಮ್ಮಿನ ಸಂದರ್ಭದಲ್ಲಿ ದಿನಕ್ಕೆ ಎರಡು ಮೂರು ಬಾರಿ ಸ್ಟೀಮ್​ ತೆಗೆದುಕೊಳ್ಳಬೇಕು. ಇದು ಉತ್ತಮ ಮನೆಮದ್ದು ಮತ್ತು ಇದು ಯಾವುದೇ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್ಪ್ರಧಾನಿ ಮೋದಿ ವಿರುದ್ಧ ಹತ್ಯೆ ಸಂಚು? - ವೈರಲ್ ಆಗುತ್ತಿರುವ ನಿಗೂಢ ವರದಿಗಳು!ಐಎಎಸ್ ಆಯುಷಿ ದಬಾಸ್ ಯಶಸ್ಸಿನ ಕಥನನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ.!ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ: ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿವಚನ.: -ನಗೆಯ ಮಾರಿತಂದೆ