LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಳಮೀಸಲಾತಿ ಶೀಘ್ರ ಜಾರಿಗೆ ಕ್ರಮಕೈಗೊಳ್ಳಿ: ಮಾಜಿ ಸಚಿವ ಎಚ್.ಆಂಜನೇಯ

 

ಚಿತ್ರದುರ್ಗ: ಒಳಮೀಸಲಾತಿ ಜಾರಿಗಾಗಿರಾಜ್ಯದಲ್ಲಿ ನಡೆಯುತ್ತಿರುವಜಾತಿಗಣತಿ ಸಮೀಕ್ಷೆಕಾರ್ಯ ಮತ್ತೆಯಾವುದೇ ಕಾರಣಕ್ಕೂ ವಿಸ್ತರಣೆಮಾಡಬಾರದುಎಂದು ಮಾಜಿ ಸಚಿವ ಎಚ್.ಆಂಜನೇಯಕೋರಿದರು.

ಬೆಂಗಳೂರಿನಲ್ಲಿ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್‌ಆಯೋಗದಕಚೇರಿಗೆ ಬುಧವಾರಭೇಟಿ ಮಾಡಿ ಮನವಿ ಮಾಡಿಕೊಂಡಅವರು, ಮೂರು ದಶಕಗಳ ಮಾದಿಗ ಸಮುದಾಯದ ಸಮಗ್ರ ಹೋರಾಟದ ಫಲ ಒಳಮೀಸಲಾತಿ ಜಾರಿಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿದ್ದು, ಅದನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧರಾಗಿದ್ದಾರೆ.ಆದರೆ, ಎಕೆ, ಎಡಿ, ಆದಿಆಂಧ್ರ ಈ ಮೂರು ಜಾತಿಸೂಚಕಗಳಲ್ಲಿ ಮಾದಿಗ, ಛಲವಾದಿ ಸಮುದಾಯದವರು ಗುರುತಿಸಿಕೊಂಡಿರುವುದೇ ಮೀಸಲಾತಿ ಹಂಚಿಕೆ ಸಮಸ್ಯೆ ಆಗಿದೆಎಂದರು.

ಈ ಗೊಂದಲಕ್ಕೆತೆರೆ ಎಳೆದು ಅವರರ ಸಂಖ್ಯೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಗುರುತಿಸಲು ಪರಿಶಿಷ್ಟರಿಗೆ ಸೀಮಿತಗೊಳಿಸಿ ರಾಜ್ಯದಲ್ಲಿ ಮೇ 5ರಂದು ಜಾತಿಗಣತಿ ಸಮೀಕ್ಷೆಆರಂಭಗೊಂಡಿದೆ. ಆರಂಭದಲ್ಲಿತಾಂತ್ರಿಕ ಸಮಸ್ಯೆಕಾರಣಕ್ಕೆಆತಂಕ, ಗೊಂದಲಕ್ಕೆಕಾರಣವಾಗಿದ್ದು, ಕಾಲಕ್ರಮೇಣ ಸುಗಮವಾಗಿ ಆಗಿದೆ. ಆದರೆ, ಬೆಂಗಳೂರಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿಆಗಿಲ್ಲವೆಂಬ ಕಾರಣಕ್ಕೆ ಮೂರು ಬಾರಿ ಸಮೀಕ್ಷೆಯನ್ನುವಿಸ್ತರಣೆ ಮಾಡಲಾಗಿತ್ತುಎಂದು ಹೇಳಿದರು.

ಈಗ ಮತ್ತೊಮ್ಮೆ ಬೆಂಗಳೂರು ಮಹಾನಗರ ಪಾಲಿಕೆಗೆ ಸೀಮಿತಗೊಳಿಸಿ ಜು.6ರ ವರೆಗೆ ವಿಸ್ತರಣೆಮಾಡಲಾಗಿದೆ.ಇದೇಅಂತಿಮ ಅವಕಾಶ ಆಗಬೇಕು. ಯಾವುದೇಕಾರಣಕ್ಕೂಇನ್ನೊಮ್ಮೆ ವಿಸ್ತರಣೆಮಾಡಲೇಬಾರದು.ಈ ನಿಟ್ಟಿನಲ್ಲಿಆಯೋಗಕಠಿಣ ಕ್ರಮಕೈಗೊಳ್ಳಬೇಕು ಎಂದುಕೋರಿದರು.

ಈಗಾಗಲೇ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳ್ಳುವವರೆಗೂ ಬ್ಯಾಕ್‌ಲಾಗ್ ಸೇರಿಎಲ್ಲರೀತಿಯ ಸರ್ಕಾರಿ ಹುದ್ದೆಗಳ ನೇಮಕಾತಿಗೆತಡೆ ನೀಡಿದೆ. ಹಲವು ತಿಂಗಳುಗಳೇ ಆಗಿರುವುದರಿಂದ ಬಹಳಷ್ಟು ವಿದ್ಯಾವಂತ ನಿರುದ್ಯೋಗಿಗಳು ಉದ್ಯೋಗಕ್ಕಾಗಿಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಜೊತೆಗೆ ಒಳಮೀಸಲಾತಿ ಜಾರಿ ವಿಷಯದಲ್ಲಿಅನಗತ್ಯಗೊಂದಲ ಹುಟ್ಟುಹಾಕುವ ಪ್ರಯತ್ನ ನಡೆಯುತ್ತಿದೆ.ಆದ್ದರಿಂದಏಕಸದಸ್ಯಆಯೋಗದಅಧ್ಯಕ್ಷರಾದತಾವುಯಾವುದೇಕಾರಣಕ್ಕೂ ಸಮೀಕ್ಷೆ ಜು.6ರ ನಂತರ ವಿಸ್ತರಣೆ ಮಾಡಬಾರದುಎಂದು ತಿಳಿಸಿದರು.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026