Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೀದರ: ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

ಬೀದ‌ರ್: ವೀರಶೈವ ಲಿಂಗಾಯತ ಸಮಾಜದ ಅತ್ಯಂತ ಪ್ರಮುಖ ನಾಯಕರಾಗಿದ್ದ ಭೀಮಣ್ಣ ಖಂಡ್ರೆ ನಿಧನರಾಗಿದ್ದು, ಅವರು ಇಡೀ ರಾಜ್ಯ ಕಂಡ ಧೀಮಂತ ವ್ಯಕ್ತಿ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಶತಾಯುಷಿಯಾಗಿದ್ದ ಅವರು ಬಹುಕಾಲ ಸಮಾಜ ಸೇವೆ ಹಾಗೂ ಸಚಿವರಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಜನಪ್ರಿಯ ನಾಯಕರಾಗಿ ಭೀಮಣ್ಣ ಖಂಡ್ರೆ ಹೆಸರುವಾಸಿಯಾಗಿದ್ದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕಗಳ ಮೂಲಕ ಒಂದು ವಾರ ಬೀದ‌ರ್ ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಸತತವಾಗಿ ಆರೋಗ್ಯ ಕ್ಷೀಣಿಸಿದ ಕಾರಣ ಸೋಮವಾರ (ಜ.12) ಅವರನ್ನು ಮನೆಗೆ ಕೊಂಡೊಯ್ಯಲಾಗಿತ್ತು. ಬಳಿಕ ಮನೆಯಲ್ಲಿಯೇ ವೈದ್ಯರ ತಂಡ ಅವರನ್ನು ಉಪಚರಿಸುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಶುಕ್ರವಾರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ರಾತ್ರಿ ನಿಧನರಾದರು. ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಮೊಮ್ಮಗ ಸಾಗರ ಖಂಡ್ರೆ ಸೇರಿದಂತೆ ಕುಟುಂಬ ಸದಸ್ಯರು ಎಲ್ಲಾ ರೀತಿಯ ಕಾರ್ಯಕ್ರಮಗಳಿಂದ ದೂರ ಉಳಿದು ಮನೆಯಲ್ಲಿಯೇ ಉಳಿದುಕೊಂಡಿದ್ದರು.

ಖಂಡ್ರೆಯವರ ಆರೋಗ್ಯದಲ್ಲಿ ಏರುಪೇರಾದ ವಿಷಯ ತಿಳಿದು ವಿವಿಧ ಮಠಾಧೀಶರು, ಸಚಿವರು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ಅವರ ಬೆಂಬಲಿಗರು ಕಳೆದ ಹಲವು ದಿನಗಳಿಂದ ಅವರ ಮನೆಗೆ ಭೇಟಿ ನೀಡುತ್ತಿದ್ದರು.

ಭೀಮಣ್ಣ ಖಂಡ್ರೆಯವರಿಗೆ ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಸೇರಿದಂತೆ ಇಬ್ಬರು ಪುತ್ರರು, ಐದು ಜನ ಪುತ್ರಿಯರು ಇದ್ದಾರೆ. ಪತ್ನಿ ಲಕ್ಷ್ಮೀಬಾಯಿ ಖಂಡ್ರೆ, ಗಂಡು ಮಕ್ಕಳ ಪೈಕಿ ಹಿರಿಯ ಮಗ, ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ಆವರು ಅನಾರೋಗ್ಯದಿಂದ ಈ ಹಿಂದೆಯೇ ಮೃತಪಟ್ಟಿದ್ದಾರೆ.

ನಾಲ್ಕು ಸಲ ಶಾಸಕರಾಗಿ, ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿದ್ದ ಭೀಮಣ್ಣ ಖಂಡ್ರೆ ಅವರು ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. ಸಮಾಜವಾದಿ ಪಕ್ಷದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, 1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿದ್ದರು.

ಶನಿವಾರ ಅಂತ್ಯಕ್ರಿಯೆ

ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಶನಿವಾರ (ಜ.17) ನೆರವೇರಲಿದೆ ಎಂದು ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ ಭಾಲ್ಕಿ ಹೊರವಲಯದ ಚಿಕಲಚಂದಾ ಗ್ರಾಮ ಸಮೀಪದ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ದಿವಂಗತ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ